ಆನೆ ಪುತ್ಥಳಿ ಸ್ಥಾಪಿಸಿದ ಸಾರ್ವಜನಿಕ ಹಣ ಮಾಯಾವತಿ ಹಿಂತಿರುಗಿಸಲಿ: ಸುಪ್ರೀಂ
ನವದೆಹಲಿ, ಫೆಬ್ರವರಿ 8: ಲಖನೌ ಹಾಗೂ ನೋಯ್ಡಾದಲ್ಲಿ ತಮ್ಮ ಬಹುಜನ ಸಮಾಜ ಪಕ್ಷದ ಚಿಹ್ನೆ ಆನೆಯ ಪುತ್ಥಳಿಯನ್ನು ಸಾರ್ವಜನಿಕ ಹಣದಲ್ಲಿ ಸ್ಥಾಪನೆ ಮಾಡಿದ್ದ ಮಾಯಾವತಿ, ಆ ಹಣವನ್ನು ಹಿಂತಿರುಗಿಸಬೇಕು ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ.
ತಮ್ಮ ಸ್ವಂತ ಪುತ್ಥಳಿ ಹಾಗೂ ಯಾವುದೇ ಪಕ್ಷದ ಚಿಹ್ನೆಯನ್ನು ಸಾರ್ವಜನಿಕ ಹಣದಲ್ಲಿ ನಿರ್ಮಿಸಬಾರದು ಎಂದು ವಕೀಲರೊಬ್ಬರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿದ್ದರು. ಆ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿತು.
ಯುಪಿ : ಪ್ರತಿಮೆ ನಿರ್ಮಾಣದ 'ಮಾಯ' ಜಾಲ
"ನಮ್ಮ ಸದ್ಯದ ದೃಷ್ಟಿಕೋನದ ಪ್ರಕಾರ ಮಾಯಾವತಿ ತಮ್ಮ ಹಾಗೂ ಪಕ್ಷದ ಚಿಹ್ನೆಯ ಪುತ್ಥಳಿಯನ್ನು ನಿರ್ಮಿಸಿ, ರಾಜ್ಯ ಸರಕಾರಕ್ಕೆ ಹೊರೆಯಾಗುವಂತೆ ಮಾಡಿದ್ದಾರೆ. ಆ ಸಾರ್ವಜನಿಕ ಹಣವನ್ನು ವಾಪಸ್ ನೀಡಬೇಕು" ಎಮ್ದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಹೇಳಿದೆ.
ಈ ಪೀಠದಲ್ಲಿ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ, ಸಂಜೀವ್ ಖನ್ನಾ ಕೂಡ ಇದ್ದಾರೆ. ಈ ಅರ್ಜಿಯ ಮುಂದಿನ ವಿಚಾರಣೆ ಏಪ್ರಿಲ್ ಎರಡರಂದು ನಡೆಯುವುದು. ಸದ್ಯಕ್ಕೆ ವ್ಯಕ್ತವಾಗಿರುವ ಈ ಅಭಿಪ್ರಾಯವನ್ನು ಮತ್ತೆ ವಿಚಾರಣೆ ಮಾಡಲಾಗುವುದು ಎಂದು ಕೋರ್ಟ್ ಹೇಳಿದೆ.
ಮಾಯಾ ಪ್ರತಿಮೆ ಉರುಳಿಸೊಲ್ಲ : ಅಖಿಲೇಶ್
ಈ ಅರ್ಜಿಯ ಅಂತಿಮ ವಿಲೇವಾರಿ ಏಪ್ರಿಲ್ ಎರಡನೇ ತಾರೀಕು ಮಾಡಲಾಗುವುದು ಎಂದು ಹೇಳಲಾಗಿದೆ. ಲೋಕಸಭಾ ಚುನಾವಣೆ ಪೂರ್ಣಗೊಂಡ ನಂತರ ಮೇ ತಿಂಗಳಲ್ಲಿ ವಿಚಾರಣೆ ನಡೆಸಲು ಸಾಧ್ಯವೇ ಎಂದು ಬಹುಜನ ಸಮಾಜ ಪಕ್ಷದ ವಕೀಲರಾದ ಸತೀಶ್ ಮಿಶ್ರಾ ಕೇಳಿಕೊಂಡರು.