ಅಣ್ಣಾ ಹಜಾರೆ, ರಾಹುಲ್ ಗಾಂಧಿ ನಡುವೆ ಪತ್ರ ವಿನಿಮಯ!
ನವದೆಹಲಿ, ಡಿ. 17 : ಪ್ರಬಲ ಜನ ಲೋಕಪಾಲ್ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಅಣ್ಣಾ ಹಜಾರೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ಲೋಕಪಾಲ್ ಮಸೂದೆ ಬಗ್ಗೆ ಅವರಿಗಿರುವ ಕಾಳಜಿಗೆ ಧನ್ಯವಾದ ಅರ್ಪಿಸಿದ್ದಾರೆ. ಲೋಕಪಾಲ್ ಮಸೂದೆ ಮಂಗಳವಾರ ರಾಜ್ಯಸಭೆಯಲ್ಲಿ ಅಂಗೀಕಾರವಾಗುವ ಸಾಧ್ಯತೆ ಇದೆ.
ಜನ ಲೋಕಪಾಲ್ ಮಸೂದೆ ಜಾರಿಗೊಳಿಸಲು ನಾವು ಸಿದ್ಧವಿರುವುದಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಘೋಷಿಸಿದ್ದರು ಮತ್ತು ಈ ಕುರಿತು ಅಣ್ಣಾ ಹಜಾರೆ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಉತ್ತರ ನೀಡಿ ಮಂಗಳವಾರ ಹಜಾರೆ ಪತ್ರ ಬರೆದಿದ್ದಾರೆ. [ಜನ್ ಲೋಕಪಾಲ ಮಸೂದೆಗಾಗಿ ಅಣ್ಣಾ ಮತ್ತೆ ನಿರಶನ]

ರಾಹುಲ್ ಗಾಂಧಿ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಅಣ್ಣಾ ಹಜಾರೆ, ಲೋಕಪಾಲ ಮಸೂದೆ ಜಾರಿಗೆ ಪ್ರಯತ್ನಿಸುತ್ತಿರುವ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಸೋಮವಾರ ಲೋಕಪಾಲ ಮಸೂದೆ ರಾಜ್ಯಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆ ಇತ್ತು. ಆದರೆ, ಕಲಾಪ ಮೊಟಕುಗೊಂಡಿದ್ದರಿಂದ ಅದು ಸಾಧ್ಯವಾಗಿರಲಿಲ್ಲ.
ಕೇಂದ್ರ ಸರ್ಕಾರ ಜನ ಲೊಕಪಾಲ್ ಮಸೂದೆ ಜಾರಿಗಾಗಿ ಸರ್ವಪಕ್ಷಗಳ ಸಭೆ ಕರೆದು ಸಮ್ಮತಿ ಕೋರಿದೆ. ಮಂಗಳವಾರ ರಾಜ್ಯ ಸಭೆಯಲ್ಲಿ ಮಸೂದೆ ಅಂಗೀಕಾರವಾಗುವ ಸಾಧ್ಯತೆ ಇದೆ. ಲೋಕಪಾಲ್ ಮಸೂದೆ ಅಂಗೀಕಾರ ಹಿನ್ನಲೆಯಲ್ಲಿ ರಾಜ್ಯ ಸಭೆಯಲ್ಲಿ ಪ್ರಶ್ನೋತ್ತರ ಕಲಾಪವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರಾಜ್ಯಸಭೆ ವಿಪಕ್ಷ ನಾಯಕ ಅರುಣ್ ಜೇಟ್ಲಿ, ಉಪಸಭಾಪತಿ ಹಮೀದ್ ಅನ್ಸಾರಿ ಅವರಿಗೆ ಮನವಿ ಮಾಡಿದ್ದಾರೆ.
ಮಂಗಳವಾರ ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆ ಸೀಮಾಂದ್ರ ಭಾಗದ ಸಂಸದರು ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯನ್ನು ಖಂಡಿಸಿ ಸದನದಲ್ಲಿ ಪ್ರತಿಭಟನೆ ತೀವ್ರಗೊಳಿಸಿದ ಕಾರಣ ಕಲಾಪವನ್ನು ಮಧ್ಯಾಹ್ನ 12ಗಂಟೆಗೆ ಮುಂದೂಡಲಾಗಿತ್ತು. ಸದ್ಯ ಕಲಾಪ ಪುನಃ ಆರಂಭವಾಗಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications