ಗಣರಾಜ್ಯೋತ್ಸವ ಫ್ಲೈಪಾಸ್ಟ್ನಲ್ಲಿ ವಿಶೇಷ ಸಾಧನೆಗೈದ ಮಹಿಳಾ ಪೈಲಟ್
ನವದೆಹಲಿ, ಜನವರಿ 26: ಲೆಫ್ಟಿನೆಂಟ್ ಸ್ವಾತಿ ರಾಥೋಡ್ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜಪಥ್ ನಲ್ಲಿ ನಡೆದ ಭಾರತೀಯ ವಾಯುಪಡೆಯ ಫ್ಲೈಪಾಸ್ಟ್ ಗಣರಾಜ್ಯೋತ್ಸವ ಪರೇಡ್ನ ನೇತೃತ್ವ ವಹಿಸಿದ್ದರು.
ಭಾರತೀಯ ವಾಯುಪಡೆ ಹಗುರ ಯುದ್ಧವಿಮಾನ, ಹಗುರ ಯುದ್ಧ ಹೆಲಿಕಾಪ್ಟರ್ ಮತ್ತು ಸುಕೊಯ್-30 ಯುದ್ಧ ವಿಮಾನಗಳ ಪ್ರದರ್ಶನವನ್ನು ಏರ್ಪಡಿಸಿತ್ತು. ಫ್ಲೈಪಾಸ್ಟ್ನ ನೇತೃತ್ವವಹಿಸಿದ ಮೊದಲ ಮಹಿಳೆ ಎನ್ನುವ ಖ್ಯಾತಿಗೆ ಸ್ವಾತಿ ರಾಥೋಡ್ ಪಾತ್ರರಾಗಿದ್ದಾರೆ.
ಇಂದು ಮಹಿಳೆಯರು ಕೂಡ ದೇಶದ ಮಿಲಿಟರಿಯ ಮೂರೂ ಪಡೆಗಳಲ್ಲಿ ತಮ್ಮ ಶಕ್ತಿ, ಸಾಮರ್ಥ್ಯ, ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ರಾಜಪಥ್ ನಲ್ಲಿ ನಡೆದ ಪರೇಡ್ ನಲ್ಲಿ ಎನ್ ಸಿಸಿ ಹೆಣ್ಣುಮಕ್ಕಳು ಮಹಾರಾಷ್ಟ್ರದ ಎನ್ ಸಿಸಿ ನಿರ್ದೇಶನಾಲಯದ ಹಿರಿಯ ಅಧೀನ ಅಧಿಕಾರಿ ಸಮೃದ್ಧಿ ಹರ್ಷಲ್ ಸಂತ್ ನೇತೃತ್ವದಲ್ಲಿ ಪಥ ಸಂಚಲನ ಸಾಗಿದರು.

ದೇಶದ ಮೂವರು ಮಹಿಳಾ ಯುದ್ಧ ಪೈಲಟ್ ಗಳಲ್ಲಿ ಒಬ್ಬರಾದ ಲೆಫ್ಟಿನೆಂಟ್ ಭಾವನಾ ಕಾಂತ್ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜಪಥ್ ನಲ್ಲಿ ನಡೆದ ಭಾರತೀಯ ವಾಯುಪಡೆಯ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಾಕ್ಷಿಯಾದರು.
ಭಾರತೀಯ ವಾಯುಪಡೆ ಹಗುರ ಯುದ್ಧವಿಮಾನ, ಹಗುರ ಯುದ್ಧ ಹೆಲಿಕಾಪ್ಟರ್ ಮತ್ತು ಸುಕೊಯ್-30 ಯುದ್ಧ ವಿಮಾನಗಳ ಪ್ರದರ್ಶನವನ್ನು ಏರ್ಪಡಿಸಿತ್ತು.
ಬಿಹಾರದ ದರ್ಬಾಂಗ್ ನವರಾದ ಭಾವನಾ ಕಾಂತ್, ಬೆಗುಸರೈಯಲ್ಲಿ ಬೆಳೆದಿದ್ದರು. ಅಲ್ಲಿ ಅವರ ತಂದೆ ಐಒಸಿಎಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಅವರು ಬಾರೌನಿ ರಿಫೈನರಿ ಡಿಎವಿ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿ, ಬೆಂಗಳೂರಿನ ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ನಿಂದ ವೈದ್ಯಕೀಯ ಎಲೆಕ್ಟ್ರಾನಿಕ್ಸ್ನಲ್ಲಿ ಎಂಜಿನಿಯರಿಂಗ್ ಪದವಿ ಪಡೆದರು.
ವಿಮಾನ ಹಾರಾಟ ನಡೆಸುವುದು ಮಾತ್ರವಲ್ಲದೆ ಬ್ಯಾಡ್ಮಿಂಟನ್ ಆಡುವುದು, ವಾಲಿಬಾಲ್, ಸಾಹಸ ಕ್ರೀಡೆಗಳು, ಫೋಟೋಗ್ರಫಿ, ಅಡುಗೆ ಮಾಡುವುದು, ಈಜು ಮತ್ತು ಪ್ರವಾಸ ಹೋಗುವ ಹವ್ಯಾಸವನ್ನು ಭಾವನ ಕಾಂತ್ ಹೊಂದಿದ್ದಾರೆ.
ಇನ್ನು 140 ವಾಯು ರಕ್ಷಣಾ ರೆಜಿಮೆಂಟ್ ನ ಸುಧಾರಿತ ಸ್ಚಿಲ್ಕ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಕ್ಯಾಪ್ಟನ್ ಪ್ರೀತಿ ಚೌಧರಿ ಮುನ್ನಡೆಸಿದ್ದಾರೆ.ಇಂದು ಪಥಸಂಚಲನದಲ್ಲಿ ಭಾಗವಹಿಸಿದ ಏಕೈಕ ಮಹಿಳಾ ರೆಜಿಮೆಂಟ್ ಕಮಾಂಡರ್ ಕ್ಯಾಪ್ಟನ್ ಪ್ರೀತಿ ಚೌಧರಿ ಆಗಿದ್ದಾರೆ.
ಸ್ಚಿಲ್ಕ ಶಸ್ತ್ರಾಸ್ತ್ರ ವ್ಯವಸ್ಥೆ ಆಧುನಿಕ ರಾಡಾರ್ ಮತ್ತು ಡಿಜಿಟಲ್ ಅಗ್ನಿ ನಿಯಂತ್ರಣ ಕಂಪ್ಯೂಟರ್ ನ್ನು ಹೊಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications