ಪ್ರಧಾನಿ ಮೋದಿ ನೇತೃತ್ವದ ಸರ್ವಪಕ್ಷ ಸಭೆಗೆ ಗೈರಾಗುವವರು ಯಾರ್ಯಾರು?
ನವದೆಹಲಿ, ಜೂನ್ 19: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನವದೆಹಲಿಯಲ್ಲಿಂದು(ಜೂನ್ 19) ನಡೆಯಲಿರುವ ಸರ್ವಪಕ್ಷ ಸಭೆಗೆ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಡಿಎಂಕೆಯ ಎಂಕೆ ಸ್ಟಾಲಿನ್ ಸೇರಿದಂತೆ ಹಲವು ನಾಯಕರು ಗೈರಾಗಲಿದ್ದಾರೆ.
ನರೇಂದ್ರ ಮೋದಿ ಅವರ "ಒಂದು ದೇಶ, ಒಂದು ಚುನಾವಣೆ" ಆಶಯವನ್ನು ಜಾರಿಗೆ ತರುವ ಬಗ್ಗೆ ಮತ್ತು ಅದರ ಸಾಧಕ-ಬಾಧಕಗಳನ್ನು ತಿಳಿಯುವ ಬಗ್ಗೆ ಚರ್ಚಿಸಲು ಈ ಸಭೆ ಕರೆಯಲಾಗಿದೆ.
ಆದರೆ ಇಂಥ ಮಹತ್ವದ ವಿಷಯದ ಬಗ್ಗೆ ಚರ್ಚಿಸಲು ಒಂದೇ ದಿನದಲ್ಲಿ ಸಾಧ್ಯವಿಲ್ಲ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಾವು ಸಭೆಗೆ ಹಾಜರಾಗುವುದಿಲ್ಲ ಎಂದಿದ್ದಾರೆ.

ಇತ್ತ ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಅವರೂ ಸಭೆಗೆ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಿಆರ್ ಎಸ್ ಮುಖಂಡ, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರೂ ಸಭೆಗೆ ಆಗಮಿಸುತ್ತಿಲ್ಲ. ಆದರೆ ಟಿಡಿಪಿಯಿಂದ ಸಂಸದ ಗಲ್ಲಾ ಜಯದೇವ್ ಅವರು ಸಭೆಗೆ ಆಗಮಿಸಲಿದ್ದಾರೆ.
"ಒಂದು ದೇಶ, ಒಂದು ಚುನಾವಣೆ" ಪರಿಕಲ್ಪನೆಯ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಭಾಗವಹಿಸಲಿರುವ ಕಾಂಗ್ರೆಸ್ ಈ ಪರಿಕಲ್ಪನೆಯನ್ನು ವಿರೋಧಿಸುವುದಾಗಿ ಈಗಾಗಲೇ ಹೇಳಿದೆ.
ಅಷ್ಟೇ ಅಲ್ಲದೆ, 2022 ರಲ್ಲಿ ಮಹಾತ್ಮಾ ಗಾಂಧಿಜೀ ಅವರ 150 ನೇ ಜಜನ್ಮದಿನೋತ್ಸವದ ಆಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಅದಕ್ಕೆ ಎಲ್ಲ ಪಕ್ಷಗಳ ಸಲಹೆ, ಸೂಚನೆಗಳನ್ನೂ ಆಲಿಸಲಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications