ಡಿಕೆಶಿಗೆ ಇಲ್ಲ ಜಾಮೀನು, ಹತ್ತು ದಿನ ಇಡಿ ವಶಕ್ಕೆ
ನವದೆಹಲಿ, ಸೆಪ್ಟೆಂಬರ್ 03: ಕಳೆದ ಶುಕ್ರವಾರದಿಂದ ಸತತವಾಗಿ (ಭಾನುವಾರ ಹೊರತುಪಡಿಸಿ) ನವ ದೆಹಲಿಯ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆಗೆ ಒಳಗಾಗಿದ್ದ ಡಿ. ಕೆ. ಶಿವಕುಮಾರ್ ಕೊನೆಗೂ ಬಂಧನಕ್ಕೆ ಒಳಗಾಗಿದ್ದಾರೆ. ಮಂಗಳವಾರ ನಡೆದ ಈ ಬೆಳವಣಿಗೆ ರಾಜ್ಯದಲ್ಲಿ ಪ್ರತಿಭಟನೆಯ ಕಿಡಿ ಹೊತ್ತಿಸಿದೆ.
2017ರಲ್ಲಿ ಡಿ. ಕೆ. ಶಿವಕುಮಾರ್ಗೆ ಸೇರಿದ ದೆಹಲಿಯ ಪ್ಲಾಟ್ನಲ್ಲಿ 8.59 ಕೋಟಿ ರೂಪಾಯಿ ಹಣ ಪತ್ತೆಯಾದ ಪ್ರಕರಣದ ಬಗ್ಗೆ ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿತ್ತು.
ಡಿ. ಕೆ. ಶಿವಕುಮಾರ್ ದಿಲ್ಲಿಯಲ್ಲಿ ಬಂಧನಕ್ಕೆ ಒಳಗಾಗುತ್ತಿದ್ದಂತೆ ಸ್ವಕ್ಷೇತ್ರ ಕನಕಪುರ ಸೇರಿದಂತೆ ಬೆಂಗಳೂರು- ಮೈಸೂರು ಹೆದ್ದಾರಿ ಭಾರಿ ಪ್ರತಿಭಟನೆಗೆ ಸಾಕ್ಷಿಯಾಗಿದೆ. ಸಾರ್ವಜನಿಕ ಸಾರಿಗೆ ಬಸ್ಗಳಿಗೆ ಬೆಂಕಿ ಹಚ್ಚುವ ಘಟನೆ ನಡೆದಿದೆ. ಅತ್ತ ದಿಲ್ಲಿಯಲ್ಲಿಯೂ ಇಡಿ ಅಧಿಕಾರಿಗಳ ಕಾರಿನ ಮೇಲೆ ದಾಳಿ ನಡೆದಿದೆ.
ಕರ್ನಾಟಕ ಕಾಂಗ್ರೆಸ್ ಪ್ರಭಾವಿ ಮುಖಂಡ ಡಿಕೆ ಶಿವಕುಮಾರ್ ರನ್ನು ಬಂಧಿಸಿದ ಇ.ಡಿ.
ಒಂದು ಕಡೆದ ಡಿ. ಕೆ. ಶಿವಕುಮಾರ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರು ಬಂಧನ ಖಂಡಿಸಿ ಹೇಳಿಕೆ ನೀಡುತ್ತಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ಕ್ಷಣ ಕ್ಷಣದ ಮಾಹಿತಿಯನ್ನು ಇಲ್ಲಿ ನೀಡಲಾಗುತ್ತಿದೆ.
ಶೇ.100ರಷ್ಟು ರಾಜಕೀಯ
Ramalinga Reddy, Congress on arrest of #DKShivakumar: This is 100% politically motivated. Central government is misusing Income Tax Dept, ED, Reserve Bank of India, Election Commission, everything. Since 5 years they are doing this. They are killing democracy. pic.twitter.com/67tGeJ6wIC
— ANI (@ANI) September 3, 2019