ದೆಹಲಿಯ ಪ್ರಸಿದ್ಧ ಸಸ್ಯಾಹಾರಿ ರೆಸ್ಟೋರೆಂಟ್ನ ಸಾಂಬಾರಿನಲ್ಲಿ ಸಿಕ್ತು ಹಲ್ಲಿ
ನವದೆಹಲಿ, ಆಗಸ್ಟ್ 03: ಲಾಕ್ಡೌನ್ ಮುಗಿದು ಹೋಟೆಲ್, ರೆಸ್ಟೋರೆಂಟ್ಗಳು ತೆರೆದ ಬಳಿಕ ಮೊದಲ ಬಾರಿಗೆ ಮಸಾಲೆ ದೋಸೆ ಸವಿಯಲು ಶರವಣ ಭವನ ರೆಸ್ಟೋರೆಂಟ್ಗೆ ತೆರಳಿದ್ದ ಸ್ನೇಹಿತರು ಬೇಸರದಿಂದ ವಾಪಸಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ವೀಕೆಂಡ್ ಮಸ್ತಿಗೆಂದು ಪಂಕಜ್ ಅಗರ್ವಾಲ್ ಎಂಬುವವರು ತಮ್ಮ ಸ್ನೇಹಿತರ ಜೊತೆ ನಗರದ ಹೋಟೆಲ್ಗೆ ಭೇಟಿ ನೀಡಿದ್ದರು.
ಬಿಸಿ ಬಿಸಿ ದೋಸೆ ಬಂದ ಕೂಡಲೇ ರುಚಿಯಾದ ಸಾಂಬಾರ್ನಲ್ಲಿ ಅದ್ದಿ ಬಾಯಿಗೆ ಇಟ್ಟು ವಾವ್ ಎನ್ನಬೇಕು ಎಂದು ಹೊರಟಿದ್ದರು. ಅಷ್ಟರೊಳಗೆ ಬಾಯಲ್ಲಿ ರಬ್ಬರಿನಂತಹ ಪದಾರ್ಥ ಸಿಕ್ಕಿದಂತೆ ಭಾಸವಾಗಿತ್ತು. ಸಾಂಬಾರ್ನಲ್ಲಿರೋ ಪದಾರ್ಥ ವಿರಬೇಕು ಎಂದು ಬಾಯಿಂದ ತೆಗೆದಾಗಲೇ ಗೊತ್ತಾಗಿದ್ದು ಅದು ಸತ್ತ ಹಲ್ಲಿ ಎಂದು.

ಆದರೆ ಅದರಲ್ಲಿ ಹಲ್ಲಿಯ ಅರ್ಥ ಭಾಗ ಮಾತ್ರ ಇತ್ತು, ಇನ್ನರ್ಧ ಎಲ್ಲಿ ಎಂದು ಹುಡುಕಾಡಿದರೂ ಸಿಗಲಿಲ್ಲ, ಬಳಿಕ ಸಿಬ್ಬಂದಿಯ ಮೇಲೆ ಕೂಗಾಡಿ , ಘಟನೆಯ ವಿಡಿಯೋವನ್ನು ಕೂಡ ಮಾಡಿದ್ದಾರೆ.
ಪಂಕಜ್ ಅಗರ್ ವಾಲ್ ಹೋಟೆಲ್ ನ ಮೆನು, ದೋಸೆ ಹಾಗೂ ಸತ್ತ ಹಲ್ಲಿಯ ಫೋಟೋ, ವಿಡಿಯೋಗಳನ್ನು ಟ್ವಿಟ್ಟರ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ. ಅಲ್ಲದೆ, ಗ್ರಾಹಕರ ಜೀವವನ್ನೂ ಲೆಕ್ಕಿಸದೆ , ಸ್ವಚ್ಛತೆಯಿಲ್ಲದೆ ಬೇಕಾಬಿಟ್ಟಿ ಊಟ-ತಿಂಡಿ ಸಪ್ಲೈ ಮಾಡುತ್ತಿರುವ ಆರೋಪದಲ್ಲಿ ಶರವಣ ಭವನದ ವಿರುದ್ಧ ಪೊಲೀಸರಿಗೆ ದೂರನ್ನೂ ಕೂಡ ನೀಡಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications