ಲೋಕಜನಶಕ್ತಿ ಸಂಸದ ಪ್ರಿನ್ಸ್ ರಾಜ್ಗೆ ನಿರೀಕ್ಷಣಾ ಜಾಮೀನು ನೀಡಿದ ದೆಹಲಿ ನ್ಯಾಯಾಲಯ
ನವದೆಹಲಿ, ಸೆಪ್ಟೆಂಬರ್ 26: ಲೋಕ ಜನಶಕ್ತಿ ಪಕ್ಷದ (ಎಲ್ಪಿಜಿ) ಮುಖಂಡ ಚಿರಾಗ್ ಪಾಸ್ವಾನ್ ಕಸಿನ್, ಪಕ್ಷದ ಸಂಸದ ಪ್ರಿನ್ಸ್ ರಾಜ್ ಅವರಿಗೆ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಸಿಕ್ಕಿದೆ.
ಬಿಹಾರದ ಸಮಸ್ಟಿಪುರ ಕ್ಷೇತ್ರದ ಸಂಸದ ಪ್ರಿನ್ಸ್ ಪಾಸ್ವಾನ್ ಅವರಿಗೆ ಅಪರಾಧ ಹಿನ್ನೆಲೆ ಇಲ್ಲ ಎಂಬುದನ್ನು ಪರಿಗಣಿಸಿ, ದೆಹಲಿ ವಿಶೇಷ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದಲ್ಲಿ ಪ್ರಿನ್ಸ್ ರಕ್ಷಣೆಗೆ ಮುಂದಾಗಿದ್ದರಿಂದ ಚಿರಾಗ್ ವಿರುದ್ಧವೂ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಫ್ಐಆರ್ ಹಾಕಿದ್ದಾರೆ.

ಜಾಮೀನು ನೀಡುವ ವೇಳೆ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್, ಅವರು ಸಂಸದರಾಗಿರುವುದರಿಂದ ಸಮಾಜದೊಂದಿಗೆ ಆಳವಾದ ಸಂಬಂಧವನ್ನು ಹೊಂದಿದ್ದು ನ್ಯಾಯಿಕ ವ್ಯಾಪ್ತಿಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಕಡಿಮೆ ಎಂದು ಅಭಿಪ್ರಾಯಪಟ್ಟರು.
ದೂರುದಾರೆಯು ಸಂಸದರ ವಿರುದ್ಧ ಎಫ್ಐಆರ್ ದಾಖಲಿಸಲು ಅಸಹಜವೆನಿಸುವಷ್ಟು ವಿಳಂಬ ಮಾಡಿರುವುದನ್ನು ಸಹ ನ್ಯಾಯಾಲಯವು ಗಣನೆಗೆ ತೆಗೆದುಕೊಂಡಿತು. ಈ ಹಿನ್ನೆಲೆಯಲ್ಲಿ ಅರ್ಜಿದಾರ ಸಂಸದರನ್ನು ದೂರುದಾರೆಯು ಸುಳ್ಳು ಆರೋಪದಲ್ಲಿ ಸಿಲುಕಿಸಲು ಪ್ರಯತ್ನಿಸಿರಬಹುದಾದ ಸಾಧ್ಯತೆಯನ್ನು ಅಲ್ಲಗಳೆಯಲಾಗದು ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತು. ಸಂಸದರು ದೂರುದಾರೆಯ ವಿರುದ್ಧ ಮೊದಲು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ದೂರುದಾರೆಯು ಸಂಸದರ ವಿರುದ್ಧ ಪ್ರತಿದೂರು ದಾಖಲಿಸಿ ಅವರ ಮೇಲೆ ಒತ್ತಡ ಹೇರಲು ಪ್ರಯತ್ನಿಸಿರಬಹುದಾದ ಸಾಧ್ಯತೆಯನ್ನೂ ನ್ಯಾಯಾಲಯವು ಪರಿಗಣಿಸಿದೆ.
ದೆಹಲಿಯಲ್ಲಿ ಪ್ರಿನ್ಸ್ ರಾಜ್ ವಿರುದ್ಧ ಜೂನ್ ತಿಂಗಳಲ್ಲಿ ಅತ್ಯಾಚಾರ ಎಸಗಿದ ಆರೋಪ ಹೊರೆಸಿ ಪಕ್ಷದ ಕಾರ್ಯಕರ್ತೆಯೊಬ್ಬರು ದೂರು ನೀಡಿದ್ದರು. ಮಹಿಳೆಯು ನೀಡಿದ ಮೂರು ಪುಟಗಳ ದೂರನ್ನು ಕೊನಟ್ ಪ್ಲೇಸ್ (Connaught) ಪೊಲೀಸ್ ಠಾಣೆಯಲ್ಲಿ ಸ್ವೀಕರಿಸಲಾಗಿತ್ತು. ನಶೆ ಏರುವ ಔಷಧಿ ಹಾಕಿದ ಪಾನೀಯ ಕುಡಿಸಿ ತಮ್ಮ ಮೇಲೆ ಅತ್ಯಾಚಾರ ನಡೆಸಿದರು ಎಂದು ಸಮಸ್ಟಿಪುರ್ ಸಂಸದ ಪ್ರಿನ್ಸ್ ರಾಜ್ ವಿರುದ್ಧ ದೂರು ಕೊಡಲಾಗಿತ್ತು.
ಸಂಸದ ಪ್ರಿನ್ಸ್ ವಿರುದ್ಧ ಒಂದು ತಿಂಗಳಾದರೂ ಯಾವುದೇ ತನಿಖೆ, ವಿಚಾರಣೆ ನಡೆಸದ ಕಾರಣ ನ್ಯಾಯಕ್ಕಾಗಿ ಸಂತ್ರಸ್ತ ಮಹಿಳೆ ನ್ಯಾಯಾಲಯದ ಮೊರೆ ಹೊಕ್ಕಿದ್ದರು. ಮನವಿ ಸ್ವೀಕರಿಸಿದ ದೆಹಲಿ ಕೋರ್ಟ್ ಸೆಪ್ಟೆಂಬರ್ 9ರಂದು ಈ ಬಗ್ಗೆ ಕ್ರಮ ಜರುಗಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ ನಿರೀಕ್ಷಣಾ ಜಾಮೀನು ಕೋರಿ ಪ್ರಿನ್ಸ್ ಅವರು ದೆಹಲಿ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದರು.
''ಪ್ರಿನ್ಸ್ ಹಾಗೂ ಚಿರಾಗ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಫ್ಐಆರ್ ಹಾಕಲಾಗಿದೆ, ಮೇ ತಿಂಗಳಲ್ಲಿ ದೂರು ದಾಖಲಿಸಲಾಗಿತ್ತು. ಸೆಪ್ಟೆಂಬರ್ 9ರಂದು ಕೋರ್ಟ್ ನಿರ್ದೇಶನದಂತೆ ದೆಹಲಿ ಪೊಲೀಸರು ಕ್ರಮ ಜರುಗಿಸಿದ್ದಾರೆ'' ಎಂದು ಮಹಿಳೆ ಪರ ವಕೀಲರಾದ ಸುದೇಶ್ ಕುಮಾರಿ ಜೆಥ್ವಾ ಹೇಳಿದ್ದಾರೆ.
''ಪಕ್ಷದ ಕಾರ್ಯಕರ್ತೆಯಾಗಿದ್ದ ಮಹಿಳೆಯು ಒಂದು ಪಾರ್ಟಿಯಲ್ಲಿ ಪ್ರಿನ್ಸ್ ರನ್ನು ಭೇಟಿ ಮಾಡಿದ್ದರು. ಮಹಿಳೆಗೆ ಕುಡಿಯಲು ಪಾನೀಯ ಕೊಟ್ಟಿದ್ದ ಪ್ರಿನ್ಸ್ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಆಕೆಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಲಾಗಿದೆ. ಆಕೆಗೆ ಎಚ್ಚರವಾದಾಗ ಪ್ರಿನ್ಸ್ ಭುಜದ ಮೇಲೆ ಆಕೆ ತಲೆ ಇತ್ತು. ನಿನಗೆ ಪ್ರಜ್ಞೆ ತಪ್ಪಿತ್ತು, ಅರೈಕೆ ಮಾಡಿದೆ ಎಂದು ಪ್ರಿನ್ಸ್ ಆಕೆಯನ್ನು ಸಂತೈಸಲು ಯತ್ನಿಸಿದ್ದಾರೆ. ಆದರೆ, ಆಕೆ ಪದೇ ಪದೇ ಏನು ನಡೆಯಿತು ಎಂದು ಪ್ರಶ್ನಿಸಿದಾಗ, ವಿಡಿಯೋ ತೋರಿಸಿ ಹೆದರಿಸಲಾಗಿದೆ, ಮದುವೆಯಾಗುವುದಾಗಿ ನಂಬಿಸಿ ನಂತರ ಕೈಕೊಟ್ಟಿದ್ದಾರೆ'' ಎಂದು ಘಟನೆ ಬಗ್ಗೆ ವಕೀಲರು ವಿವರಿಸಿದ್ದಾರೆ.
ಆರೋಪ ಅಲ್ಲಗೆಳೆದ ಪ್ರಿನ್ಸ್ ನನ್ನ ಮೇಲಿನ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಸುಳ್ಳು ಸುದ್ದಿ ಹಬ್ಬಿಸಿ ನನ್ನ ರಾಜಕೀಯ ಬದುಕಿಗೆ ಕಳಂಕ ತರಲು ಯತ್ನಿಸಲಾಗುತ್ತಿದೆ, ಇದು ದೊಡ್ಡ ಮಟ್ಟದ ಷಡ್ಯಂತ್ರವಾಗಿದೆ, ವೈಯಕ್ತಿಕವಾಗಿ ಹಾಗೂ ರಾಜಕೀಯ ಮಟ್ಟದಲ್ಲೂ ನನಗೆ ಹಾನಿಯುಂಟು ಮಾಡಲು ಯತ್ನಿಸಲಾಗಿದೆ ಎಂದು ಸಂಸದ ಪ್ರಿನ್ಸ್ ಸ್ಪಷ್ಟಪಡಿಸಿದ್ದರು. ಆ ಮಹಿಳೆ ಈ ಹಿಂದೆ ಕೂಡಾ ಇದೇ ರೀತಿ ಆರೋಪ ಮಾಡಿದ್ದರು. ಆಕೆ ವಿರುದ್ಧ ಫೆಬ್ರವರಿ ತಿಂಗಳಲ್ಲಿ ದೂರು ನೀಡಿದ್ದೆ, ಆಕೆ ವಿರುದ್ಧವೇ ಸುಳ್ಳು ಆರೋಪ ಹೊರೆಸಿದ್ದಕ್ಕೆ ಎಫ್ಐಆರ್ ಹಾಕಲಾಗಿದೆ ಎಂದಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications