ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆತ್ಮೀಯ ಒಡನಾಡಿ ಅನಂತ್ ಕುಮಾರ್ ಅಗಲಿಕೆಗೆ ಕಣ್ಣೀರಾದ ಅಡ್ವಾಣಿ

|
Google Oneindia Kannada News

ನವದೆಹಲಿ, ನವೆಂಬರ್ 12: ತಮ್ಮ ಆತ್ಮೀಯ ಒಡನಾಡಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ಕಂಬನಿ ಮಿಡಿದ ಬಿಜೆಪಿ ಮುಖಂಡ ಎಲ್ ಕೆ ಅಡ್ವಾಣಿ, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

"ಅನಂತ್ ಕುಮಾರ್ ಅವರ ಅಕಾಲಿಕ ಮರಣದಿಂದ ನನಗೆ ತೀವ್ರ ಆಘಾತ ಮತ್ತು ದುಃಖವಾಗಿದೆ. ಅವರೊಬ್ಬ ಜನಪ್ರಿಯ, ಕ್ರಿಯಾಶೀಲ ವ್ಯಕ್ತಿ. ಬಡವರ ಬಗ್ಗೆ ಸಾಕಷ್ಟು ಕಾಳಜಿ ಹೊಂದಿದ್ದವರು. ಅವರ ಆತ್ಮಕ್ಕೆ ಶಾಂತಿ ಸಿಗಲಿ" ಎಂದು ಭಾವುಕರಾಗಿ ಅಡ್ವಾಣಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

'ನೀಲಿಕಣ್ಣಿನ ಹುಡುಗ'ನ ಒಡನಾಟದ ಬಗ್ಗೆ ದಿನೇಶ್ ಅಮಿನ್ ಮಟ್ಟು ಭಾವುಕ ಮಾತುಗಳು... 'ನೀಲಿಕಣ್ಣಿನ ಹುಡುಗ'ನ ಒಡನಾಟದ ಬಗ್ಗೆ ದಿನೇಶ್ ಅಮಿನ್ ಮಟ್ಟು ಭಾವುಕ ಮಾತುಗಳು...

ಅನಂತ್ ಕುಮಾರ್ ಅವರು ಲಾಲ್ ಕೃಷ್ಣ ಅಡ್ವಾಣಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ಆತ್ಮೀಯ ಬಂಧ ಹೊಂದಿದ್ದವರು. ಅದೇ ಕಾರಣಕ್ಕಾಗಿಯೇ ನರೇಂದ್ರ ಮೋದಿ ಅವರು ಪ್ರಧಾನಿ ಪಟ್ಟಕ್ಕೇರಿದ ಕೆಲ ದಿನಗಳ ವರೆಗೆ ಅನಂತ್ ಕುಮಾರ್ ನಿರ್ಲಕ್ಷ್ಯಕ್ಕೊಳಗಾದರು ಎಂಬ ಮಾತೂ ಚಾಲ್ತಿಯಲ್ಲಿತ್ತು.ರಾಜಕೀಯ ವಲಯದಲ್ಲಿ ಅನಂತ್ ಕುಮಾರ್ ಅವರನ್ನು ಅಡ್ವಾಣಿ ಅವರ ಮಾನಸಪುತ್ರ ಎಂದೇ ಕರೆಯಲಾಗುತ್ತಿತ್ತು.

LK Advani expresses deep shock for Ananth Kumars demise

ಸ್ನೇಹಜೀವಿ ಅನಂತ್ ಕುಮಾರ್ ವ್ಯಕ್ತಿಚಿತ್ರ: ಸಚಿತ್ರ ವಿವರ ಸ್ನೇಹಜೀವಿ ಅನಂತ್ ಕುಮಾರ್ ವ್ಯಕ್ತಿಚಿತ್ರ: ಸಚಿತ್ರ ವಿವರ

ರಾಜಕೀಯವಾಗಿ ಬಹುಬೇಗನೇ ಮೇಲೇರಿದ ಅನಂತ್ ಕುಮಾರ್ ಅಡ್ವಾಣಿ ಮತ್ತು ವಾಜಪೇಯಿ ಅವರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದರು.

ಅನಂತತಾನಂತವಾಗಿ.... ಅಗಲಿದ ನಾಯಕಗೆ ಗಣ್ಯರ ಅಶ್ರುತರ್ಪಣ ಅನಂತತಾನಂತವಾಗಿ.... ಅಗಲಿದ ನಾಯಕಗೆ ಗಣ್ಯರ ಅಶ್ರುತರ್ಪಣ

ಶ್ವಾಸಕೋಶ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ನೂರಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

English summary
I'm extremely shocked and saddened by the untimely demise of Union Minister Ananth Kumar. Ananth Kumar was a very popular, dynamic leader of the poor & downtrodden. May the departed soul rest in peace: Lal Krishna Advani.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X