ಕೊರೊನಾ ಲಾಕ್ಡೌನ್: ಇಂಧನ ಮಾರಾಟದಲ್ಲಿ ಶೇಕಡಾ 50ರಷ್ಟು ಇಳಿಕೆ
ದೆಹಲಿ, ಏಪ್ರಿಲ್ 19: ಕೊರೊನಾ ವೈರಸ್ ನಿಯಂತ್ರಿಸುವ ಉದ್ದೇಶದಿಂದ ದೇಶಾದ್ಯಂತ ಲಾಕ್ಡೌನ್ ಮಾಡಲಾಗಿದ್ದು, ಇದು ಆರ್ಥಿಕ ವಲಯದ ಮೇಲೆ ಭಾರಿ ಹೊಡೆತ ಬಿದ್ದಿದೆ. ಇಂಧನ ಉದ್ಯಮ ಮೇಲೆಯೂ ಲಾಕ್ಡೌನ್ ದೊಡ್ಡಮಟ್ಟದ ಪರಿಣಾಮ ಬೀರಿದ್ದು, ಏಪ್ರಿಲ್ ಮೊದಲ ಎರಡು ವಾರಗಳಲ್ಲಿ ಇಂಧನ ಮಾರಾಟದಲ್ಲಿ ಶೇಕಡಾ 50 ರಷ್ಟು ಇಳಿಕೆ ಕಂಡಿದೆ.
ಸರ್ಕಾರಿ ಸ್ವಾಮ್ಯದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೋರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಮತ್ತು ಭಾರತ್ ಪೆಟ್ರೋಲಿಯಂಗಳು ದೇಶಾದ್ಯಂತ ಶೇಕಡಾ 90% ಸಗಟು ಮಳಿಗೆಗಳನ್ನು ಹೊಂದಿದ್ದು, ಎಲ್ಲ ಕಡೆಯೂ ಪೆಟ್ರೋಲ್, ಡಿಸೇಲ್ ಬೇಡಿಕೆ ಕುಸಿದಿದೆ.
ಏಪ್ರಿಲ್ ಮೊದಲ ಎರಡು ವಾರ ಅಂದ್ರೆ 15ನೇ ತಾರೀಕಿನವರೆಗೂ ಇಂಧನದ ಬೇಡಿಕೆಯಲ್ಲಿ ಭಾರಿ ಇಳಿಕೆ ಕಂಡಿದೆ. ವರದಿಗಳ ಪ್ರಕಾರ ಅನಿಲ ತೈಲದಲ್ಲಿ ಶೇಕಡಾ 61 ರಷ್ಟು ಕುಸಿದಿದ್ದರೆ, ಗ್ಯಾಸೋಲಿನ್ ಮತ್ತು ಜೆಟ್ ಇಂಧನ ಮಾರಾಟವು ಶೇಕಡಾ 64 ಮತ್ತು 94 ರಷ್ಟು ಕುಸಿದಿದೆ.

ಮೊದಲ ಹದಿನೈದು ದಿನದಲ್ಲಿ ಎಲ್ಪಿಜಿ ಮಾರಾಟದಲ್ಲಿ ಶೇ 21ರಷ್ಟು ಹೆಚ್ಚಳ ಕಂಡಿದೆ ಎನ್ನಲಾಗಿದೆ. ಲಾಕ್ಡೌನ್ ಪರಿಣಾಮ ಜೂನ್ ತಿಂಗಳವರೆಗೂ ಬಿಪಿಎಲ್ (ಉಜ್ವಲ ಯೋಜನೆ) ಕಾರ್ಡ್ದಾರರಿಗೆ ಉಚಿತ ಸಿಲಿಂಡರ್ ನೀಡುತ್ತಿದೆ.
ಅಂದ್ಹಾಗೆ, ಭಾರತದ ವಾರ್ಷಿಕ ಇಂಧನ ಬಳಕೆ - ತೈಲ ಬೇಡಿಕೆಯ ಪ್ರಾಕ್ಸಿ - 2020 ರಲ್ಲಿ ಶೇ 5.6 ರಷ್ಟು ಕುಸಿಯುತ್ತದೆ ಎಂದು ಅಂತರರಾಷ್ಟ್ರೀಯ ಇಂಧನ ಸಂಸ್ಥೆ (ಐಇಎ) ಮಾರ್ಚ್ ವರದಿಯನ್ನು ಆಧರಿಸಿ ಮುನ್ಸೂಚನೆ ನೀಡಿತ್ತು. ಲಾಕ್ಡೌನ್ ಪರಿಣಾಮ ಭಾರತದ ಗ್ಯಾಸೋಲಿನ್ ಬೇಡಿಕೆ ಶೇಕಡಾ 9 ರಷ್ಟು ಮತ್ತು ಡೀಸೆಲ್ ಶೇಕಡಾ 6.1 ರಷ್ಟು ಕುಸಿಯುತ್ತದೆ ಎಂದು ಅದು ಅಂದಾಜಿಸಿದೆ.
ಪ್ರಸ್ತುತ ಮೇ 3ರ ತನಕ ದೇಶದಲ್ಲಿ ಲಾಕ್ಡೌನ್ ವಿಸ್ತರಿಸಿದೆ. ಅದಾದ ಬಳಿಕ ದೇಶದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಕೆಲವು ಕೈಗಾರಿಕಾ ಚಟುವಟಿಕೆಗಳಿಗೆ ಅನುಮತಿ ನೀಡಲಾಗುತ್ತೆ ಎನ್ನಲಾಗುತ್ತಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications