ಬಾಬಾ ರಾಮದೇವ್ ಅವರು ಗಾಂಧಿ, ಜೆಪಿ ಇದ್ದಂತೆ!
ನವದೆಹಲಿ, ಮೇ 19: ಅಮೃತಸರ ಕ್ಷೇತ್ರದಿಂದ ಪರಾಜಯ ಅನುಭವಿಸಿರುವ ಬಿಜೆಪಿಯ ಹಿರಿಯ ನಾಯಕ ಅರುಣ್ ಜೇಟ್ಲಿ ಅವರು ಯೋಗ ಗುರು ಬಾಬಾ ರಾಮದೇವ್ ಅವರನ್ನು ಮಹಾತ್ಮ ಗಾಂಧಿ ಮತ್ತು ಜಯಪ್ರಕಾಶ್ ನಾರಾಯಣ್ ಅವರುಗಳಿಗೆ ಹೋಲಿಸಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯವಾದ ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರರನ್ನು ಜಾಗೃತಗೊಳಿಸಿದ ಕೀರ್ತಿಯು ಬಾಬಾ ರಾಮದೇವ್ ಅವರಿಗೆ ಸಲ್ಲುತ್ತದೆ ಎಂದು ಅರುಣ್ ಜೇಟ್ಲಿ ವಿಶ್ಲೇಷಿಸಿದ್ದಾರೆ.

ಯೋಗ ಗುರು ಬಾಬಾ ರಾಮದೇವ್ ಅವರ ಅಭಿಮಾನಿಗಳು ನಿನ್ನೆ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅರುಣ್ ಜೇಟ್ಲಿ ಅವರು ಲೋಕಸಭಾ ಚುನಾವಣೆ ವೇಳೆ ದೇಶದ ಮತದಾರರನ್ನು ರಾಮದೇವ್ ಅವರು ಜಾಗೃತಗೊಳಿಸಿದ್ದನ್ನು ನೋಡಿದರೆ ಮಹಾತ್ಮ ಗಾಂಧಿ ಮತ್ತು ಜಯಪ್ರಕಾಶ್ ನಾರಾಯಣ್ ಅವರುಗಳು ಜ್ಞಾಪಕಕ್ಕೆ ಬರುತ್ತಾರೆ.
ಬಾಬಾ ಅಷ್ಟು ದೊಡ್ಡ ಪ್ರಮಾಣದಲ್ಲಿ ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದಾರೆ. ಅವರಿಗೆ ಯಾವುದೇ ಅಧಿಕಾರದ ಮೇಲೆ ಆಸೆಯಿಲ್ಲ. ವ್ಯವಸ್ಥೆಯನ್ನು ಬಲಪಡಿಸಬೇಕು ಎಂಬುದಷ್ಟೇ ಅವರ ಧ್ಯೇಯೋದ್ದೇಶ ಎಂದು ಜೇಟ್ಲಿ ಮೆಚ್ಚುಗೆ ಸೂಚಿಸಿದ್ದಾರೆ.
ಕಾಳ ಧನ ಮತ್ತು ಭ್ರಷ್ಟಾಚಾರದ ವಿರುದ್ಧವೂ ಬಾಬಾ ಹೀಗೆಯೇ ಮಹಾತ್ಮ ಗಾಂಧಿ ಮತ್ತು ಜಯಪ್ರಕಾಶ್ ನಾರಾಯಣ್ ಅವರಂತೆ ಹೋರಾಡಿದರು. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಬಹಿರಂಗವಾಗಿ ಬೆಂಬಲಿಸಿದ ಬಾಬಾ, ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರದಿಂದ ನಿರ್ಗಮಿಸುವವರೆಗೂ ಹರಿದ್ವಾರದಲ್ಲಿರುವ ತಮ್ಮ ಆಶ್ರಮಕ್ಕೆ ವಾಪಸಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು.
ಬಿಜೆಪಿ ಇದೀಗ ಭರ್ಜರಿಯಾಗಿ ಜಯ ಸಾಧಿಸಿದೆ. ಕಾಂಗ್ರೆಸ್ ಇನ್ನು ಅಧಿಕಾರದಲ್ಲಿ ಮುಂದುವರಿಯುವ ಮಾತೇ ಇಲ್ಲ ಎಂದು ಜೇಟ್ಲಿ ಹರ್ಷ ವ್ಯಕ್ತಡಿಸಿದರು. ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ನೂತನ ಸಂಸದರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications