ಅಜರ್, ಸಿಧು ಹಾದಿಯಲ್ಲಿ ಗಂಭೀರ್, ರಾಜಕೀಯಕ್ಕೆ ಎಂಟ್ರಿ?
ನವದೆಹಲಿ, ಆಗಸ್ಟ್ 19: ಒಂದು ಕಾಲದಲ್ಲಿ ಭಾರತದ ಕ್ರಿಕೆಟ್ ತಂಡದ ಪ್ರಮುಖ ಓಪನರ್ ಎನಿಸಿಕೊಂಡಿದ್ದ ಗೌತಮ್ ಗಂಭೀರ್ ಅವರು ರಾಜಕೀಯಕ್ಕೆ ಕಾಲಿಡುವ ಬಗ್ಗೆ ಸ್ಥಳೀಯ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಸ್ಪರ್ಧೆ ನಡೆಸಲಿದ್ದಾರೆ ಎಂಬ ಸುದ್ದಿಯಿದೆ.
ಈ ಮೂಲಕ ಕ್ರಿಕೆಟ್ ಆಟಗಾರರು ಹಾಗೂ ರಾಜಕೀಯಕ್ಕೂ ನಂಟಿನ ಕೊಂಡಿ ಮುಂದುವರೆಸುವ ಎಲ್ಲಾ ಸಾಧ್ಯತೆಗಳು ಕಂಡು ಬಂದಿವೆ. ನವಜೋತ್ ಸಿಂಗ್ ಸಿದ್ದು, ಮೊಹಮ್ಮದ್ ಅಜರುದ್ದೀನ್ ಅವರು ಇಂದು ಸಕ್ರಿಯ ರಾಜಕಾರಣಿಗಳಾಗಿದ್ದಾರೆ.
ಲೋಕಸಭಾ ಚುನಾವಣೆ: ಭಾರೀ ಮಹತ್ವ ಪಡೆದ ಚುನಾವಣಾ ಆಯೋಗದ ಹೇಳಿಕೆ
ಸಮಾಜ ಸೇವೆ: ದೆಹಲಿಯಲ್ಲಿ ಕಮ್ಯೂನಿಟಿ ಕಿಚನ್ ಆರಂಭಿಸಿ, ಮಧ್ಯಾಹ್ನದ ವೇಳೆ ಉಚಿತವಾಗಿ ಬಿಸಿಯೂಟ ನೀಡುತ್ತಾ ಬಂದಿರುವ ಗೌತಮ್ ಗಂಭೀರ್ ಫೌಂಡೇಷನ್ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿವೆ.
ಕಾಶ್ಮೀರ ಪ್ರತ್ಯೇಕತಾವಾದಿಗೆ ಚುರುಕು ಮುಟ್ಟಿಸಿದ ಗಂಭೀರ್
ಜಮ್ಮು ಮತ್ತು ಕಾಶ್ಮೀರ ಉಗ್ರರ ದಾಳಿಗೆ ಸಿಲುಕಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ನೆರವಾಗಿರುವ ಗಂಭೀರ್, ಸುಕ್ಮಾ ನಕ್ಸಲ್ ದಾಳಿಗೆ ತುತ್ತಾಗಿ ನರಳಿದ 25 ಕುಟುಂಬಕ್ಕೆ ನೆರವಾಗಿದ್ದಾರೆ. ಯೋಧರ ಮಕ್ಕಳ ಶಿಕ್ಷಣ, ನಿರ್ಗತಿಕರಿಗೆ ಆಹಾರ ಒದಗಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.