ಒಂದು ವರ್ಷ ಇವಿಎಂ ಕೊಡಿ, ದೋಷ ಕಂಡು ಹಿಡಿತೀವಿ: ಪಿತ್ರೋಡಾ
ನವದೆಹಲಿ, ಏಪ್ರಿಲ್ 18: ವಿದ್ಯುನ್ಮಾನ ಮತಯಂತ್ರದಲ್ಲಿ ದೋಷವಿದೆ. ಆದರೆ ಅದೇನೆಂದು ನಮಗೂ ತಿಳಿದಿಲ್ಲ. ಯಾರಾದರೂ ಒಂದು ವರ್ಷ ಅಧ್ಯಯನಕ್ಕೆ ಇವಿಎಂ ಕೊಟ್ಟರೆ ನಾವು ಅದನ್ನು ಕಂಡುಹಿಡಿಯಲು ಸಾಧ್ಯ ಎಂದು ಸಾಗರೋತ್ತರ ಕಾಂಗ್ರೆಸ್ನ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಒಬ್ಬ ಎಂಜಿನಿಯರ್ ಆಗಿ, ತಂತ್ರಜ್ಞಾನ ಪರಿಣತನಾಗಿ ಇವಿಎಂ ಕುರಿತು ನನಗೆ ತೃಪ್ತಿಯಿಲ್ಲ. ಆದರೆ, ಅದರಲ್ಲಿನ ದೋಷ ಇಂಥದ್ದೇ ಎಂದು ಹೇಳಲು ನನಗೆ ಸಾಧ್ಯವಾಗುತ್ತಿಲ್ಲ. ಏಕೆಂದರೆ ನಮ್ಮ ಬಳಿ ಇವಿಎಂ ಇಲ್ಲ. ಒಂದು ವರ್ಷದ ಮಟ್ಟಿಗೆ ಅಧ್ಯಯನಕ್ಕಾಗಿ ಯಾರಾದರೂ ಇವಿಎಂ ನೀಡಿದರೆ ನಿಮಗೆ ಏನನ್ನಾದರೂ ಹೇಳಲು ನಮಗೆ ಸಾಧ್ಯ ಎಂದು ಹೇಳಿದರು.

ಇವಿಎಂನ ವಿನ್ಯಾಸ, ಅದರ ಸಾಫ್ಟ್ವೇರ್ಅನ್ನು ಅರ್ಥಮಾಡಿಕೊಳ್ಳಬೇಕು. ಅದರಲ್ಲಿನ ಪ್ರತಿ ಸಣ್ಣ ಸಂಕೇತವನ್ನೂ ವಿಶ್ಲೇಷಣೆಗೆ ಒಳಪಡಿಸಬೇಕು. ಅದಾದ ಬಳಿಕವಷ್ಟೇ ನೀವು ಏನಾದರೂ ಹೇಳಲು ಸಾಧ್ಯ. ಆದರೆ ಒಂದಂತೂ ಸ್ಪಷ್ಟ, ಅದರಲ್ಲಿ ಏನೋ ಸಮಸ್ಯೆ ಇದೆ. ಅದೇನೆಂದು ನಮಗೆ ತಿಳಿದಿಲ್ಲ ಎಂದರು.
Sam Pitroda, Indian Overseas Congress Chief on EVM: You will have to understand the design, its software. Every little signal will have to be analysed. Then only you can say something. But one thing is clear that there is some problem, what is the problem we don't know https://t.co/9y12n1fQDG
— ANI (@ANI) 18 April 2019
ಕಾಂಗ್ರೆಸ್ನ ಪ್ರಣಾಳಿಕೆ ತಯಾರಿಸಲು ಜನರ ಅಹವಾಲುಗಳನ್ನು ಆಲಿಸಲಾಗಿದೆ. ನಾವು 5-6 ತಿಂಗಳು ಜನರ ಅಹವಾಲು ಆಲಿಸಲೆಂದೇ ಮೀಸಲಿಟ್ಟಿದ್ದೆವು. ನಾವು ದೇಶದಿಂದ ದೇಶಕ್ಕೆ ಹೋಗಿದ್ದೇವೆ. ಗ್ರಾಮಸ್ಥರೊಂದಿಗೆ ಮಾತನಾಡಿದ್ದೇವೆ. ಪರಿಣತರೊಂದಿಗೆ ಮಾತನಾಡಿದ್ದೇವೆ. ದುಬೈನಲ್ಲಿ 12 ದೇಶಗಳಿಂದ ಬಂದಿದ್ದ ಸದಸ್ಯರೊಂದಿಗೆ ಬೃಹತ್ ಸಭೆ ನಡೆಸಿದ್ದೇವೆ ಎಂದು ತಿಳಿಸಿದರು.
ಪ್ರಣಾಳಿಕೆಯಲ್ಲಿ 52 ಅಂಶಗಳನ್ನು ಪಟ್ಟಿಮಾಡಲಾಗಿದೆ. ಒಂದು ವೇಳೆ ಅಧಿಕಾರಕ್ಕೆ ಬಂದಾಗ ಈ ಪ್ರಣಾಳಿಕೆಯನ್ನು ಜಾರಿ ಮಾಡಲಾಗುವುದು ಎಂಬ ಭರವಸೆ ನೀಡುತ್ತೇನೆ. ಇದು ಸುಳ್ಳು ಭರವಸೆಯಲ್ಲ. ನಾವು ಏನಾದರೂ ಹೇಳಿದರೆ ಅದನ್ನು ಮಾಡುತ್ತೇವೆ ಎಂದರು.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications