4ನೇ ಹಂತದ ಚುನಾವಣೆ: ಕಮಲ್ ನಾಥ್ ಮಗ ಅತ್ಯಂತ ಸಿರಿವಂತ ಅಭ್ಯರ್ಥಿ
ನವದೆಹಲಿ, ಏಪ್ರಿಲ್ 24: ನಾಲ್ಕನೇ ಹಂತದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಅತ್ಯಂತ ಸಿರಿವಂತ ಅಭ್ಯರ್ಥಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಅವರ ಮಗ ನಕುಲ್ ನಾಥ್. 660 ಕೋಟಿ ರೂಪಾಯಿ ಒಡೆಯರಾಗಿರುವ ನಕುಲ್ ನಾಥ್, ಎಲ್ಲರಿಗಿಂತ ಹೆಚ್ಚು ಶ್ರೀಮಂತ ಅಭ್ಯರ್ಥಿ.
ಅಸೋಸಿಯೆಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಲ್ಲಿಸಿರುವ ವರದಿ ಪ್ರಕಾರ, ಮಧ್ಯಪ್ರದೇಶದ ಛಿಂದ್ವಾರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಕುಲ್ ನಾಥ್ ಅವರ ಆಸ್ತಿ ಮೌಲ್ಯ, 6,60,19,46,757 ರೂಪಾಯಿ. ಅವುಗಳಲ್ಲಿ ಚರ ಆಸ್ತಿ ಮೌಲ್ಯ 6,18,41,72,757 ರೂ. ಮತ್ತು ಸ್ಥಿರ ಆಸ್ತಿ ಮೌಲ್ಯ 41,77,74,000 ರೂ.
ಎರಡನೆಯ ಸ್ಥಾನದಲ್ಲಿರುವ ಮುಂಬೈ ದಕ್ಷಿಣ ಕೇಂದ್ರದಿಂದ ಸ್ಪರ್ಧಿಸುತ್ತಿರುವ ವಂಚಿತ್ ಬಹುಜನ್ ಆಘಾದಿ ಪಕ್ಷದಿಂದ ಸ್ಪರ್ಧಿಸುತ್ತಿರುವ ಸಂಜಯ್ ಸುಶೀಲ್ ಭೋಸಲೆ ಅವರ ಆಸ್ತಿ ಮೌಲ್ಯ 125 ಕೋಟಿ ರೂ. ಅವರ ಚರ ಆಸ್ತಿ ಮೌಲ್ಯ 4,37,62,003 ರೂ ಮತ್ತು ಸ್ಥಿರ ಆಸ್ತಿ ಮೌಲ್ಯ 1,25,06,24,308 ರೂ.

ಒಂದು ಕೋಟಿ ರೂ ಮೌಲ್ಯದ ಆಸ್ತಿ ಹೊಂದಿರುವ 306 (33%) ಅಭ್ಯರ್ಥಿಗಳು ನಾಲ್ಕನೆಯ ಹಂತದ ಚುನಾವಣಾ ಕಣದಲ್ಲಿದ್ದಾರೆ. ಪ್ರಮುಖ ಪಕ್ಷಗಳಲ್ಲಿ ಕಾಂಗ್ರೆಸ್ನ 57 ರಲ್ಲಿ 50 (88%), ಬಿಜೆಪಿಯ 57 ಅಭ್ಯರ್ಥಿಗಳಲ್ಲಿ 50 (88%), ಬಿಎಸ್ಪಿಯ 54ರಲ್ಲಿ 20 (37%), ಎಸ್ಎಚ್ಎಸ್ನ 21ರಲ್ಲಿ 13 (62%) ಮತ್ತು ಎಸ್ಪಿಯ 10ರಲ್ಲಿ 8 (80%) ಅಭ್ಯರ್ಥಿಗಳು ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾರೆ.
ನಾಲ್ಕನೆಯ ಹಂತದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಸರಾಸರಿ ಸಂಪತ್ತಿನ ಮೌಲ್ಯ 4.53 ಕೋಟಿ ರೂ.
ಪ್ರಮುಖ ಪಕ್ಷಗಳ ಪೈಕಿ ಬಿಜೆಪಿಯ 57 ಅಭ್ಯರ್ಥಿಗಳ ಸರಾಸರಿ ಆಸ್ತಿ ಮೌಲ್ಯ 13.63 ಕೋಟಿ ರೂಪಾಯಿ ಇದೆ. ಕಾಂಗ್ರೆಸ್ನ 57 ಅಭ್ಯರ್ಥಿಗಳ ಸರಾಸರಿ ಆಸ್ತಿ ಮೌಲ್ಯ 29.03 ಕೋಟಿ ರೂ. ಬಿಎಸ್ಪಿಯ 54 ಅಭ್ಯರ್ಥಿಗಳ ಸರಾಸರಿ ಆಸ್ತಿ ಮೌಲ್ಯ 2.69 ಕೋಟಿ ರೂ ಮತ್ತು ಎಸ್ಎಚ್ಎಸ್ ಅಭ್ಯರ್ಥಿಗಳ ಸರಾಸರಿ ಆಸ್ತಿ ಮೌಲ್ಯ 17.85 ಕೋಟಿ ರೂ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications