ಲೋಕಸಭೆ ಚುನಾವಣೆ: ಅಡ್ವಾಣಿ, ಜೋಶಿ ಸ್ಪರ್ಧಿಸುತ್ತಾರಾ?
ನವದೆಹಲಿ, ಜನವರಿ 25: ಹೊಸ ಮುಖಗಳಿಗೆ ಅವಕಾಶ ನೀಡುವ ಸಲುವಾಗಿ 75 ವರ್ಷ ದಾಟಿದ ಮುಖಂಡರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ಬಿಜೆಪಿಯ ನಿಲುವು ಈ ಬಾರಿಯ ಚುನಾವಣೆಯಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ವಯಸ್ಸಿನ ಮಿತಿಯ ಗಡಿ ದಾಟಿರುವ ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ?
ಇದು ಅಡ್ವಾಣಿ ಹಾಗೂ ಜೋಶಿ ಅವರಿಗೆ ಬಿಟ್ಟಿದ್ದು ಎಂದು ಬಿಜೆಪಿ ತಿಳಿಸಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಅಡ್ವಾಣಿ ಅವರು ಗಾಂಧಿನಗರ ಕ್ಷೇತ್ರದಿಂದ ಜಯಗಳಿಸಿದ್ದರು. ವಾರಣಾಸಿ ಕ್ಷೇತ್ರವನ್ನು ನರೇಂದ್ರ ಮೋದಿ ಅವರಿಗೆ ಬಿಟ್ಟುಕೊಟ್ಟಿದ್ದ ಮುರಳಿ ಮನೋಹರ ಜೋಶಿ ಕಾನ್ಪುರದಿಂದ ಸ್ಪರ್ಧಿಸಿ ಗೆಲುವು ಕಂಡಿದ್ದರು.

ಚುನಾವಣೆಗಳಲ್ಲಿ ಸ್ಪರ್ಧಿಸಲು 75 ವರ್ಷ ವಯಸ್ಸಿನ ಮಿತಿ ಹೇರಿಲ್ಲ. ಈ ವಯೋಮಿತಿ ಸಚಿವ ಹುದ್ದೆಗೆ ಮಾತ್ರ ಅನ್ವಯಿಸುತ್ತದೆ ಎಂದು ಬಿಜೆಪಿ ತಿಳಿಸಿದೆ.
ಈಗಾಗಲೇ ಆರೋಗ್ಯದ ಕಾರಣವೊಡ್ಡಿ ಸುಷ್ಮಾ ಸ್ವರಾಜ್ ಮತ್ತು ಉಮಾ ಭಾರತಿ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪ್ರಕಟಿಸಿದ್ದಾರೆ. ಆದರೆ, ಈ ಬಗ್ಗೆ ಇನ್ನೂ ಬಿಜೆಪಿ ನಿರ್ಧರಿಸಿಲ್ಲ.
ಅಡ್ವಾಣಿ (91) ಮತ್ತು ಜೋಶಿ (84) ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಖಚಿತವಾಗಿಲ್ಲ. ಈ ನಿರ್ಧಾರವನ್ನು ಅವರಿಗೇ ಬಿಡಲು ಪಕ್ಷ ನಿರ್ಧರಿಸಿದ್ದಾರೆ. ಪಕ್ಷ ಬಯಸಿದ್ದನ್ನು ತಾವು ಮಾಡಲು ಸಿದ್ಧರಿರುವುದಾಗಿ ಜೋಶಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications