ಲೋಕಸಭೆ ಚುನಾವಣೆ ಸೋಲು: ಕಾಂಗ್ರೆಸ್ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ
Recommended Video
ನವದೆಹಲಿ, ಜೂನ್ 29: ಪಕ್ಷವನ್ನು ತಳಮಟ್ಟದಿಂದ ಪುನರ್ ರಚಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮುಕ್ತ ಅವಕಾಶ ನೀಡುವ ಉದ್ದೇಶದಿಂದ ಕಾಂಗ್ರೆಸ್ನ ಅನೇಲ ಪದಾಧಿಕಾರಿಗಳು ಶುಕ್ರವಾರ ತಮ್ಮ ಹುದ್ದೆಯನ್ನು ತ್ಯಜಿಸಿದ್ದಾರೆ.
ಸಂಸದ ವಿವೇಕ್ ಟಂಕಾ ಅವರು ಪಕ್ಷದ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಹುಲ್ ಗಾಂಧಿ ಅವರಿಗೆ ನೆರವಾಗುವ ದೃಷ್ಟಿಯಿಂದ ಉಳಿದವರೂ ತಮ್ಮನ್ನು ಅನುಸರಿಸುವಂತೆ ಮನವಿ ಮಾಡಿದ್ದರು. ಅದರಂತೆ ಅನೇಕ ಕಾಂಗ್ರೆಸ್ಸಿಗರು ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿನ ಪಕ್ಷದ ಹೀನಾಯ ಸೋಲಿಗೆ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ ಪ್ರಮುಖರಲ್ಲಿ ಮಧ್ಯಪ್ರದೇಶದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ, ಗೋವಾ ಘಟಕದ ಅಧ್ಯಕ್ಷ ಗಿರೀಶ್ ಚೋದಂಕರ್ ಸೇರಿದ್ದಾರೆ.

ದೆಹಲಿ ಪಿಸಿಸಿ ಕಾರ್ಯಾಧ್ಯಕ್ಷ ರಾಜೇಶ್ ಲಿಲೋಥಿಯಾ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಪೊನ್ನಮ್ ಪ್ರಭಾಕರ್ ಕೂಡ ತಮ್ಮ ಸ್ಥಾನಗಳಿಂದ ಕೆಳಕ್ಕಿಳಿದಿದ್ದಾರೆ. ವಿವಿಧ ರಾಜ್ಯಗಳಲ್ಲಿನ ಪದಾಧಿಕಾರಿಗಳು ಸಹ ಅಧಿಕಾರ ತ್ಯಜಿಸಿದ್ದಾರೆ.
ಕೆಲವು ಕಾಂಗ್ರೆಸ್ಸಿಗರ ಹೆಸರು ಮತ್ತು ಸಹಿ ಉಳ್ಳ ರಾಜೀನಾಮೆಯ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹರಿಯಾಣ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಸುಮಿತ್ರಾ ಚೌಹಾಣ್, ಎಐಸಿಸಿ ಕಾರ್ಯದರ್ಶಿಗಳಾದ ರಾಜೇಶ್ ಧರ್ಮಾನಿ ಮತ್ತು ವೀರೇಂದ್ರ ರಾಥೋರ್ ಅವರ ಹೆಸರೂ ಈ ಪಟ್ಟಿಯಲ್ಲಿದೆ. ಈ ಪತ್ರದ ಬಗ್ಗೆ ಪಕ್ಷ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಹಿನ್ನೆಲೆಯಲ್ಲಿ ಸ್ವತಃ ರಾಹುಲ್ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆದರೂ, ಪಕ್ಷವನ್ನು ಮರುಸಂಘಟಿಸಲು ಹೊಸ ತಂಡವನ್ನು ಕಟ್ಟುವ ಸಲುವಾಗಿ ರಾಹುಲ್ ಗಾಂಧಿ ಅವರಿಗೆ ಮುಕ್ತ ಸ್ವಾತಂತ್ರ್ಯ ನೀಡಲು ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications