ಲೋಕಸಭೆ ಚುನಾವಣೆ ಸೋಲು: ಕಾಂಗ್ರೆಸ್ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ
Recommended Video
ನವದೆಹಲಿ, ಜೂನ್ 29: ಪಕ್ಷವನ್ನು ತಳಮಟ್ಟದಿಂದ ಪುನರ್ ರಚಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮುಕ್ತ ಅವಕಾಶ ನೀಡುವ ಉದ್ದೇಶದಿಂದ ಕಾಂಗ್ರೆಸ್ನ ಅನೇಲ ಪದಾಧಿಕಾರಿಗಳು ಶುಕ್ರವಾರ ತಮ್ಮ ಹುದ್ದೆಯನ್ನು ತ್ಯಜಿಸಿದ್ದಾರೆ.
ಸಂಸದ ವಿವೇಕ್ ಟಂಕಾ ಅವರು ಪಕ್ಷದ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಹುಲ್ ಗಾಂಧಿ ಅವರಿಗೆ ನೆರವಾಗುವ ದೃಷ್ಟಿಯಿಂದ ಉಳಿದವರೂ ತಮ್ಮನ್ನು ಅನುಸರಿಸುವಂತೆ ಮನವಿ ಮಾಡಿದ್ದರು. ಅದರಂತೆ ಅನೇಕ ಕಾಂಗ್ರೆಸ್ಸಿಗರು ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿನ ಪಕ್ಷದ ಹೀನಾಯ ಸೋಲಿಗೆ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ ಪ್ರಮುಖರಲ್ಲಿ ಮಧ್ಯಪ್ರದೇಶದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ, ಗೋವಾ ಘಟಕದ ಅಧ್ಯಕ್ಷ ಗಿರೀಶ್ ಚೋದಂಕರ್ ಸೇರಿದ್ದಾರೆ.

ದೆಹಲಿ ಪಿಸಿಸಿ ಕಾರ್ಯಾಧ್ಯಕ್ಷ ರಾಜೇಶ್ ಲಿಲೋಥಿಯಾ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಪೊನ್ನಮ್ ಪ್ರಭಾಕರ್ ಕೂಡ ತಮ್ಮ ಸ್ಥಾನಗಳಿಂದ ಕೆಳಕ್ಕಿಳಿದಿದ್ದಾರೆ. ವಿವಿಧ ರಾಜ್ಯಗಳಲ್ಲಿನ ಪದಾಧಿಕಾರಿಗಳು ಸಹ ಅಧಿಕಾರ ತ್ಯಜಿಸಿದ್ದಾರೆ.
ಕೆಲವು ಕಾಂಗ್ರೆಸ್ಸಿಗರ ಹೆಸರು ಮತ್ತು ಸಹಿ ಉಳ್ಳ ರಾಜೀನಾಮೆಯ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹರಿಯಾಣ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಸುಮಿತ್ರಾ ಚೌಹಾಣ್, ಎಐಸಿಸಿ ಕಾರ್ಯದರ್ಶಿಗಳಾದ ರಾಜೇಶ್ ಧರ್ಮಾನಿ ಮತ್ತು ವೀರೇಂದ್ರ ರಾಥೋರ್ ಅವರ ಹೆಸರೂ ಈ ಪಟ್ಟಿಯಲ್ಲಿದೆ. ಈ ಪತ್ರದ ಬಗ್ಗೆ ಪಕ್ಷ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಹಿನ್ನೆಲೆಯಲ್ಲಿ ಸ್ವತಃ ರಾಹುಲ್ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆದರೂ, ಪಕ್ಷವನ್ನು ಮರುಸಂಘಟಿಸಲು ಹೊಸ ತಂಡವನ್ನು ಕಟ್ಟುವ ಸಲುವಾಗಿ ರಾಹುಲ್ ಗಾಂಧಿ ಅವರಿಗೆ ಮುಕ್ತ ಸ್ವಾತಂತ್ರ್ಯ ನೀಡಲು ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications