ವಿರೋಧಗಳ ನಡುವೆಯೇ ಲೋಕಸಭೆಯಲ್ಲಿ ಆಧಾರ್ ಮಸೂದೆ ಮಂಡನೆ
ನವದೆಹಲಿ, ಜುಲೈ 05: ಹಲವು ವಿರೋಧಗಳ ನಡುವೆಯೇ ಲೋಕಸಭೆಯಲ್ಲಿ ಗುರುವಾರ ಆಧಾರ್ ಮಸೂದೆಯನ್ನು ಮಂಡಿಸಲಾಯಿತು. ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಆಧಾರ್ ಮಂಡನೆಯ ಕುರಿತು ಲೋಕಸಭೆಯಲ್ಲಿ ಪ್ರಸ್ತಾಪಿಸಿದರು.
ಆಧಾರ್ ನಿಂದಾಗಿ ಖಾಸಗೀತನಕ್ಕೆ ಧಕ್ಕೆಯಾಗುತ್ತದೆ ಎಂಬ ಆರೋಪ ಸುಳ್ಳು. ಇದನ್ನು ಜನರ ಉಪಯೋಗಕ್ಕಾಗಿ ಮಂಡಿಸಲಾಗುತ್ತಿದೆ. ಇದು ಜನಸ್ನೇಹಿಯಾಗಿದ್ದು, ಸ್ವಚ್ಛೆಯಿಂದ ಜನರು ಆಧಾರ್ ಹೊಂದಬಹುದು, ಸುಪ್ರೀಂ ಕೋರ್ಟ್ ನ ಆದೇಶದಂತೆ ಎಲ್ಲಾ ಸೇವೆಗಳಿಗೂ ಅದು ಕಡ್ಡಾಯವಲ್ಲ ಎಂದು ರವಿಶಂಕರ್ ಪ್ರಸಾದ್ ಹೇಳಿದರು.
ಆಧಾರ್ ನ ಸಾಂವಿಧಾನಿಕ ಮಾನ್ಯತೆಯನ್ನು ಈಗಾಗಲೇ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ಆಧಾರ್ ಬಗ್ಗೆ ಜನ ಸಾಮಾನ್ಯರಲ್ಲೂ ತಕರಾರಿಲ್ಲ. ಅವರೂ ಒಪ್ಪಿಕೊಂಡಿದ್ದಾರೆ. ಸಂತೋಷವಾಗಿದ್ದಾರೆ, ಹೀಗಿರುವಾಗ ನೀವ್ಯಾಕೆ ದುಃಖಿತರಾಗಿದ್ದೀರಿ ಎಂದು ಅವರು ವಿಪಕ್ಷಗಳನ್ನು ಪ್ರಶ್ನಿಸಿದರು.

ಸಾರ್ವತ್ರಿಕ ಗುರುತಿನ ಚೀಟಿಯಾದ ಆಧಾರ್ ನಿಂದ ಖಾಸಗೀತನಕ್ಕೆ ಧಕ್ಕೆಯುಂಟಾಗುತ್ತಿದೆ ಎಂಬ ಕೂಗು ಎದ್ದಿದ್ದ ಸಮಯದಲ್ಲಿ ಕಳೆದ ಸೆಪ್ಟೆಂಬರ್ 26 ರಂದು ಸುಪ್ರೀಂ ಕೋರ್ಟ್ ನೀಡಿದ್ದ ಮಹತ್ವದ ತೀರ್ಪಿನಲ್ಲಿ ಆಧಾರ್ ನ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿ ಹಿಡಿಯಲಾಗಿತ್ತು. ಆಧಾರ್ ಕಾರ್ಡ್ ಅನ್ನು ಎಲ್ಲಾ ಸರ್ಕಾರಿ ಯೋಜನೆಗಳಿಗೆ ಕಡ್ಡಾಯವಾಗಿ ಬಳಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಆದರೆ ಬ್ಯಾಂಕ್ ಖಾತೆ ತೆರೆಯಲಿ, ಮೊಬೈಲ್ ಸಿಮ್ ಪಡೆಯಲು ಸೇರಿದಂತೆ ಇನ್ನಿತರ ಕೆಲವು ಸೇವೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದೂ ಅದು ತೀರ್ಪು ನೀಡಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications