ಕಾಲೇಜ್ ಕ್ಯಾಂಪಸ್ಸುಗಳಲ್ಲಿ ಇನ್ಮುಂದೆ ಮೋದಿ ಕೆಫೆ
ನವದೆಹಲಿ, ಫೆ.7- ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಚಹಾ ರಾಜಕೀಯ ಈಗ ಮತ್ತೊಂದು ಮಜಲು ತಲುಪುತ್ತಿದೆ. ಬಿಜೆಪಿ ಸಭೆಗಳಲ್ಲಿ ಸಾಂಕೇತಿಕವಾಗಿ ಬಿಸಿ ಬಿಸಿ ಚಹಾ ಮಾರಾಟವಾಗುತ್ತಿರುವ ಸಂದರ್ಭದಲ್ಲೇ ಬಿಸಿ ರಕ್ತದ ಯುವಕರನ್ನು ಪಕ್ಷದತ್ತ ಸೆಳೆಯಲು ಬಿಜೆಪಿಯು ಇನ್ಮುಂದೆ ಕಾಲೇಜುಗಳಲ್ಲಿ 'ಮೋದಿ ಕೆಫೆ'ಗಳನ್ನು ತೆರೆಯಲು ನಿರ್ಧರಿಸಿದೆ.
'A lot can happen over a cup of coffee' ಎಂಬ ಜಾಣ್ನುಡಿಗೆ ತಕ್ಕಂತೆ ದೇಶಾದ್ಯಂತ 537 ಜಿಲ್ಲೆಗಳಲ್ಲಿ 2,730 ಶೈಕ್ಷಣಿಕ ಸಂಸ್ಥೆಗಳಲ್ಲಿ 'Modi Cafe' ಸ್ಥಾಪಿಸಲು ಪಕ್ಷ ಮುಂದಾಗಿದೆ.

ಅಂದಹಾಗೆ ಫೆಬ್ರವರಿ 10ರಿಂದ ಈ ಮೋದಿ ಕೆಫೆಗಳು ಆಯಾ ಕಾಲೇಜುಗಳ ಆವರಣಗಳಲ್ಲಿ ಕಾರ್ಯಾರಂಭಿಸಲಿವೆ. ಮೋದಿ ಅವರ ರಾಜಕೀಯ ನಿಲುವು- ನೀತಿಗಳು ಇಲ್ಲಿನ ಚರ್ಚಾ ವಿಷಯಗಳಾಗಲಿವೆ ಎಂದು ಭಾರತೀಯ ಜನತಾ ಯುವ ಮೋರ್ಚಾ (BJYM) ಪ್ರಕಟಣೆಯಲ್ಲಿ ತಿಳಿಸಿದೆ.
ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅಂತಲೇ ಅಲ್ಲ. ಬಿಜೆಪಿಯೇತರ ಸರಕಾರವಿರುವ ರಾಜ್ಯಗಳಲ್ಲಿಯೂ ಮೋದಿ ಕೆಫೆಗೆ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಇಂತಹ ಚರ್ಚಾ ವೇದಿಕೆಗಳಿಂದ ಪಕ್ಷಕ್ಕೆ ಉ್ತತಮ ಫಲಿತಾಂಶ ದಕ್ಕಲಿದೆ ಎಂದು BJYM ಅಧ್ಯಕ್ಷ ಅನುರಾಗ್ ಠಾಕೂರ್ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ 2,130 ಮೋದಿ ಕೆಫೆ ರಾಯಭಾರಿಗಳು ಆಯ್ಕೆಗೊಂಡಿದ್ದಾರೆ. ಗುಜರಾತಿನಲ್ಲಿ 1001, ಹರ್ಯಾಣಾದಲ್ಲಿ 976, ಮಹಾರಾಷ್ಟ್ರ 766, ಪಶ್ಚಿಮ ಬಂಗಾಲ 234 ಮತ್ತು ಆಂಧ್ರಪ್ರದೇಶದಲ್ಲಿ 350 ರಾಯಭಾರಿಗಳು ಕಾರ್ಯನಿರ್ವಹಿಸಲಿದ್ದಾರೆ ಎಂದು ಅನುರಾಗ್ ತಿಳಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications