ಬಿಜೆಪಿಗೆ ಮತ ಹಾಕಿ; ಮೋದಿ ಪ್ರಧಾನಿಯಾಗಲಿ: ರಾಖಿ
ನವದೆಹಲಿ, ಮಾರ್ಚ್ 1-ಲೋಕಸಭೆ ಮಹಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಕೈಹಿಡಿಯುವ ಸುಳಿವು ನೀಡಿರುವ ಬಾಲಿವುಡ್ ಐಟಂ ಕ್ವೀನ್ ರಾಖಿ ಸಾವಂತ್, ನರೇಂದ್ರ ಮೋದಿಯೇ ದೇಶದ ಮುಂದಿನ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಘೋಷಿಸಿದ್ದಾರೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಬಯಸಿದರೆ ತಾನು ಅವರನ್ನು ಮದುವೆಯಾಗಲು ಸಿದ್ದ ಎಂದು ಇತ್ತೀಚೆಗೆ ಹೇಳಿದ್ದ, ಸದಾ ವಿವಾದದಲ್ಲಿರಬಯಸುವ ಮುಂಬೈ ನೆಲೆಯ 35 ವರ್ಷ ವಯಸ್ಸಿನ ಬೆಡಗಿ ರಾಖಿ ಸಾವಂತ್, ಇಂದು ದೆಹಲಿಯಲ್ಲಿ ಬಿಜೆಪಿ ಕಚೇರಿಯಲ್ಲಿ ದಿಢೀರನೆ ಕಾಣಿಸಿಕೊಂಡರು. ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರು ಉಪಸ್ಥಿತರಿದ್ದರು.

ಇದೇ ವೇಳೆ, ಭೂಸೇನೆ ನಿವೃತ್ತ ಮುಖ್ಯಸ್ಥ ಜನರಲ್ ವಿಕೆ ಸಿಂಗ್ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷವನ್ನು ಸೇರಿದ್ದಾರೆ. ಬಿಜೆಪಿ ಕಚೇರಿಗೆ ಆಗಮಿಸಿದ ವಿಕೆ ಸಿಂಗ್ ಅವರನ್ನು ಬಿಜೆಪಿ ರಾಷ್ಟ್ರಾದ್ಯಕ್ಷ ರಾಜನಾಥ ಸಿಂಗ್ ಅವರು ಹೂಗುಚ್ಛ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು. ಇದಕ್ಕೂ ಮೊದಲು ಇಂಡಿಯಾ ಗೇಟ್ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಭೇಟಿ ನೀಡಿದ ವಿಕೆ ಸಿಂಗ್, ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಾವು ಬಿಜೆಪಿ ಪಕ್ಷ ಸೇರುತ್ತಿರುವ ಕುರಿತು ಹೇಳಿಕೆ ನೀಡಿದರು. [ಬಿಜೆಪಿ ಸೇರಿದ ವಿಕೆ ಸಿಂಗ್]
ಪಕ್ಷದ ಕಚೇರಿಯಲ್ಲಿ ಹಾಜರಿದ್ದ ಮಾಜಿ ಸೈನಿಕರಿಗೆ ಬಾಲಿವುಡ್ ನಟಿ ರಾಖಿ ಸಾವಂತ್ ಇದೇ ಸಂದರ್ಭದಲ್ಲಿ ರಾಖಿ ಕಟ್ಟಿ ಸಂಭ್ರಮಿಸಿದರು. ಅದಾದನಂತರ ಎಲ್ಲರ ಜತೆ ಸೇರಿ ಚಹಾ ಕುಡಿದರು. ಮಧ್ಯೆ, ಪಕ್ಷದ ಧ್ವಜ ಪಡೆದು ತಮ್ಮ ಕೊರಳಿಗೆ ಸುತ್ತಿಕೊಂಡರು. ಇದರಿಂದ ಪಕ್ಷದ ಅಂಗಳದಲ್ಲಿ ಮತಾಪು, ಬಾಣ-ಬಿರುಸು ಬೆಳಕು ಚೆಲ್ಲಿದಂತಾಯಿತು.
ಆದರೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ತಮ್ಮ ರಾಜಕೀಯ ಆರಂಗ್ರೇಟ್ರಂ ಕೊಟ್ಟಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅದೆಲ್ಲಾ ನನಗೆ ಗೊತ್ತಾಗೋಲ್ಲ. ಪಕ್ಷದ ಹಿರಿಯ ನಾಯಕರು ಅದಕ್ಕೆಲ್ಲಾ ಉತ್ತರಿಸುತ್ತಾರೆ ಎಂದು ಜಾರಿಕೊಂಡರು. ಏನೇ ಆಗಲಿ ದೇಶದ ಜನತೆ ನರೇಂದ್ರ ಮೋದಿಗೆ ಮತ ಹಾಕಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಅದಿರಲಿ, ಮುಂದೆ ಲೋಕಸಭೆಗೆ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ತುಂಟ ನಗೆ ಬೀರುತ್ತಾ ಮಾತನಾಡಿದ ರಾಖಿ, ನಾನು ಬಿಜೆಪಿಯ ಪುತ್ರಿ. ನೋಡೋಣ ನಾಯಕರು ಏನು ನಿರ್ಧರಿಸುತ್ತಾರೋ ಅದರಂತೆ ಮುನ್ನಡೆಯುವೆ. ಸ್ಪರ್ಧೆಯೊಂದೇ ಅಂತಲ್ಲ. ಸಾಮಾನ್ಯ ಕಾರ್ಯಕರ್ತೆಯಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ಇಚ್ಛಿಸುವೆ ಎಂದು ಸ್ಪಷ್ಟಪಡಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications