ಕೇಂದ್ರದ ಮಹತ್ವದ ನಿರ್ಣಯ: ಚಿಟ್ ಫಂಡ್, ಬಿಲ್ ಪಾಸ್
ನವದೆಹಲಿ, ನ 20: ಚಿಟ್ ಫಂಡ್ ನಲ್ಲಿ ಹೂಡಿಕೆ ಮಾಡುವವರಲ್ಲಿ ಮಧ್ಯಮ ವರ್ಗದವರ ಪಾಲೇ ಹೆಚ್ಚು. ಮತ್ತು, ಅದೇ ರೀತಿ ಚಿಟ್ ಫಂಡ್ ಸಂಸ್ಥೆಗಳು, ಗ್ರಾಹಕರನ್ನು ಯಾಮಾರಿಸಿದ ಹಲವು ಉದಾಹರಣೆಗಳೂ ನಮ್ಮ ಮುಂದಿವೆ. ಈಗ, ಅದಕ್ಕೆ ಬ್ರೇಕ್ ಹಾಕುವ ಮಹತ್ವದ ಮಸೂದೆಗೆ ಲೋಕಸಭೆ 'ಅಸ್ತು' ಅಂದಿದೆ.
ಚಿಟ್ ಫಂಡ್ ಕಾರ್ಯಾಚರಣೆಯನ್ನು ಸುವ್ಯವಸ್ಥಿತಗೊಳಿಸುವ ಮತ್ತು ಹೂಡಿಕೆದಾರರ ಹಿತಾಸಕ್ತಿಗಳನ್ನು ಗಮನದಲ್ಲಿ ಇಟ್ಟುಕೊಂಡು, ಚಿಟ್ ಫಂಡ್ಸ್ ಮಸೂದೆ 2019 (ತಿದ್ದುಪಡಿ,1982) ಅನ್ನು ಲೋಕಸಭೆ ಬುಧವಾರ ಅಂಗೀಕರಿಸಿದೆ.
ಮಸೂದೆಯ ಕುರಿತ ಚರ್ಚೆಗೆ ಉತ್ತರಿಸುತ್ತಿದ್ದ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್, "ಬಡವರ ಮತ್ತು ಮಧ್ಯಮ ವರ್ಗದ ಹಿತ ಕಾಪಾಡುವುದು ಮತ್ತು ಅವರು ಮೋಸ ಹೋಗದಂತೆ ತಡೆಯುವುದೇ ಈ ಮಸೂದೆಯ ಮೂಲ ಉದ್ದೇಶ" ಎಂದಿದ್ದಾರೆ.

ಈಗಿರುವ ಮಸೂದೆಯ ಪ್ರಕಾರ, ಏಕ ವ್ಯಕ್ತಿಯಿಂದ (individual) ನಿರ್ವಹಿಸಲ್ಪಡುತ್ತಿರುವ ಸಂಸ್ಥೆಗಳು ಒಂದು ಲಕ್ಷದಿಂದ ಗರಿಷ್ಠ 3 ಲಕ್ಷ ರೂ.ಗಳವರೆಗೆ ಸಂಗ್ರಹಿಸಬಹುದು. ನಾಲ್ಕು ಅಥವಾ ಹೆಚ್ಚಿನ ಪಾಲುದಾರರನ್ನು (partnership firm) ಹೊಂದಿರುವ ಸಂಸ್ಥೆಗಳಿಗೆ, ಕೇಂದ್ರವು 6 ಲಕ್ಷದಿಂದ 18 ಲಕ್ಷ ರೂ.ಗೆ ಹೆಚ್ಚಿಸಲು ಪ್ರಸ್ತಾವನೆಯನ್ನು ಸಲ್ಲಿಸಿತ್ತು.
ಕೇಂದ್ರದ ಪ್ರಸ್ತಾವನೆಯಲ್ಲಿ ಈ ಹಿಂದೆ ರಚಿಸಲಾಗಿದ್ದ ಸ್ಥಾಯಿ ಸಮಿತಿಯ ವರದಿಯ ಸಲಹೆಗಳನ್ನು ಸೇರಿಸಲಾಗಿತ್ತು. ಆದರೆ, ಲೋಕಸಭಾ ಚುನಾವಣೆಯ ನೀತಿ ಸಂಹಿತೆಯಿಂದಾಗಿ, ಈ ಬಿಲ್, ಲೋಕಸಭೆಯಲ್ಲಿ ಪ್ರಸ್ತಾವನೆಗೆ ಬಂದಿರಲಿಲ್ಲ.
ಮಸೂದೆಯಲ್ಲಿನ ಪ್ರಸ್ತಾವಿತ ಬದಲಾವಣೆಗಳಲ್ಲಿ ಚಿಟ್ ಫಂಡ್ ನಿರ್ವಹಿಸುವ ವ್ಯಕ್ತಿಯ ಗರಿಷ್ಠ ಕಮಿಷನ್ ಮೊತ್ತವನ್ನು, ಒಟ್ಟು ಮೊತ್ತದ ಶೇ. 5% ರಿಂದ 7% ಕ್ಕೆ ಏರಿಸುವುದು ಸೇರಿದೆ.
ಜೊತೆಗೆ, "ಚಿಟ್ ಫಂಡ್ ಸಂಸ್ಥೆಗೆ ನೊಂದಣಿ ನೀಡಬೇಕೇ, ಬೇಡವೇ ಎನ್ನುವ ಅಧಿಕಾರವನ್ನು ರಾಜ್ಯ ಸರ್ಕಾರದ ವಿವೇಚನೆಗೆ ಬಿಡಲಾಗಿದೆ. ಹೆಚ್ಚಿನ ಬಡ್ಡಿ ಆಸೆಗೆ ಜನರು ಮೋಸ ಹೋಗದಂತೆ ತಡೆಯುವ ಉದ್ಧೇಶ ಕೂಡಾ ಈ ಮಸೂದೆಯಲ್ಲಿದೆ" ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications