ಕೇಂದ್ರದ ಮಹತ್ವದ ನಿರ್ಣಯ: ಚಿಟ್ ಫಂಡ್, ಬಿಲ್ ಪಾಸ್
ನವದೆಹಲಿ, ನ 20: ಚಿಟ್ ಫಂಡ್ ನಲ್ಲಿ ಹೂಡಿಕೆ ಮಾಡುವವರಲ್ಲಿ ಮಧ್ಯಮ ವರ್ಗದವರ ಪಾಲೇ ಹೆಚ್ಚು. ಮತ್ತು, ಅದೇ ರೀತಿ ಚಿಟ್ ಫಂಡ್ ಸಂಸ್ಥೆಗಳು, ಗ್ರಾಹಕರನ್ನು ಯಾಮಾರಿಸಿದ ಹಲವು ಉದಾಹರಣೆಗಳೂ ನಮ್ಮ ಮುಂದಿವೆ. ಈಗ, ಅದಕ್ಕೆ ಬ್ರೇಕ್ ಹಾಕುವ ಮಹತ್ವದ ಮಸೂದೆಗೆ ಲೋಕಸಭೆ 'ಅಸ್ತು' ಅಂದಿದೆ.
ಚಿಟ್ ಫಂಡ್ ಕಾರ್ಯಾಚರಣೆಯನ್ನು ಸುವ್ಯವಸ್ಥಿತಗೊಳಿಸುವ ಮತ್ತು ಹೂಡಿಕೆದಾರರ ಹಿತಾಸಕ್ತಿಗಳನ್ನು ಗಮನದಲ್ಲಿ ಇಟ್ಟುಕೊಂಡು, ಚಿಟ್ ಫಂಡ್ಸ್ ಮಸೂದೆ 2019 (ತಿದ್ದುಪಡಿ,1982) ಅನ್ನು ಲೋಕಸಭೆ ಬುಧವಾರ ಅಂಗೀಕರಿಸಿದೆ.
ಮಸೂದೆಯ ಕುರಿತ ಚರ್ಚೆಗೆ ಉತ್ತರಿಸುತ್ತಿದ್ದ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್, "ಬಡವರ ಮತ್ತು ಮಧ್ಯಮ ವರ್ಗದ ಹಿತ ಕಾಪಾಡುವುದು ಮತ್ತು ಅವರು ಮೋಸ ಹೋಗದಂತೆ ತಡೆಯುವುದೇ ಈ ಮಸೂದೆಯ ಮೂಲ ಉದ್ದೇಶ" ಎಂದಿದ್ದಾರೆ.

ಈಗಿರುವ ಮಸೂದೆಯ ಪ್ರಕಾರ, ಏಕ ವ್ಯಕ್ತಿಯಿಂದ (individual) ನಿರ್ವಹಿಸಲ್ಪಡುತ್ತಿರುವ ಸಂಸ್ಥೆಗಳು ಒಂದು ಲಕ್ಷದಿಂದ ಗರಿಷ್ಠ 3 ಲಕ್ಷ ರೂ.ಗಳವರೆಗೆ ಸಂಗ್ರಹಿಸಬಹುದು. ನಾಲ್ಕು ಅಥವಾ ಹೆಚ್ಚಿನ ಪಾಲುದಾರರನ್ನು (partnership firm) ಹೊಂದಿರುವ ಸಂಸ್ಥೆಗಳಿಗೆ, ಕೇಂದ್ರವು 6 ಲಕ್ಷದಿಂದ 18 ಲಕ್ಷ ರೂ.ಗೆ ಹೆಚ್ಚಿಸಲು ಪ್ರಸ್ತಾವನೆಯನ್ನು ಸಲ್ಲಿಸಿತ್ತು.
ಕೇಂದ್ರದ ಪ್ರಸ್ತಾವನೆಯಲ್ಲಿ ಈ ಹಿಂದೆ ರಚಿಸಲಾಗಿದ್ದ ಸ್ಥಾಯಿ ಸಮಿತಿಯ ವರದಿಯ ಸಲಹೆಗಳನ್ನು ಸೇರಿಸಲಾಗಿತ್ತು. ಆದರೆ, ಲೋಕಸಭಾ ಚುನಾವಣೆಯ ನೀತಿ ಸಂಹಿತೆಯಿಂದಾಗಿ, ಈ ಬಿಲ್, ಲೋಕಸಭೆಯಲ್ಲಿ ಪ್ರಸ್ತಾವನೆಗೆ ಬಂದಿರಲಿಲ್ಲ.
ಮಸೂದೆಯಲ್ಲಿನ ಪ್ರಸ್ತಾವಿತ ಬದಲಾವಣೆಗಳಲ್ಲಿ ಚಿಟ್ ಫಂಡ್ ನಿರ್ವಹಿಸುವ ವ್ಯಕ್ತಿಯ ಗರಿಷ್ಠ ಕಮಿಷನ್ ಮೊತ್ತವನ್ನು, ಒಟ್ಟು ಮೊತ್ತದ ಶೇ. 5% ರಿಂದ 7% ಕ್ಕೆ ಏರಿಸುವುದು ಸೇರಿದೆ.
ಜೊತೆಗೆ, "ಚಿಟ್ ಫಂಡ್ ಸಂಸ್ಥೆಗೆ ನೊಂದಣಿ ನೀಡಬೇಕೇ, ಬೇಡವೇ ಎನ್ನುವ ಅಧಿಕಾರವನ್ನು ರಾಜ್ಯ ಸರ್ಕಾರದ ವಿವೇಚನೆಗೆ ಬಿಡಲಾಗಿದೆ. ಹೆಚ್ಚಿನ ಬಡ್ಡಿ ಆಸೆಗೆ ಜನರು ಮೋಸ ಹೋಗದಂತೆ ತಡೆಯುವ ಉದ್ಧೇಶ ಕೂಡಾ ಈ ಮಸೂದೆಯಲ್ಲಿದೆ" ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications