ನೋಟಿಸ್ ನಂತರ ಎಚ್ಚೆತ್ತುಕೊಂಡ ಇನ್ಸ್ಟಾ, ಶಿವನ ಕೈಲಿಲ್ಲ ವೈನ್ ಗ್ಲಾಸ್!
ನವದೆಹಲಿ, ಜೂನ್ 15: ಇತ್ತೀಚೆಗೆ ಬಹುರಾಷ್ಟ್ರೀಯ ಕಂಪನಿಗಳು ತಮ್ಮ ಆನ್ ಲೈನ್ ಮಳಿಗೆಗಳ ಸರಕುಗಳ ಮೂಲಕ ದೇಶ, ಭಾಷೆ, ದೇವರುಗಳಿಗೆ ಅಪಮಾನವಾಗುವ ರೀತಿಯಲ್ಲಿ ನಡೆದುಕೊಳ್ಳುವುದು ನಡೆದಿದೆ.
ಜನಪ್ರಿಯ ಸಾಮಾಜಿಕ ಜಾಲ ತಾಣ ಇನ್ಸ್ಟಾಗ್ರಾಂನಲ್ಲಿ ಹಿಂದೂ ದೇವರುಗಳ ಬಗ್ಗೆ "ಅತ್ಯಂತ ಕೀಳುಮಟ್ಟದ ಮತ್ತು ಆಕ್ಷೇಪಾರ್ಹ ಪೋಸ್ಟ್, ಇಮೋಜಿ ಬಳಸಿದ ಆರೋಪ ಎದುರಾಗಿತ್ತು.
ಈ ಸಂಬಂಧವಾಗಿ ಇನ್ಸ್ಟಾಗ್ರಾಂ ಸಂಸ್ಥೆಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿತ್ತು. ನಂತರ ಎಚ್ಚೆತ್ತುಕೊಂಡ ಇನ್ಸ್ಟಾ ಆಕ್ಷೇಪಾರ್ಹ ಫೋಸ್ಟ್, ಇಮೋಜಿ ತೆಗೆದು ಹಾಕಿರುವುದಾಗಿ ಹೇಳಿದೆ.

ವಕೀಲ ಆದಿತ್ಯ ಸಿಂಗ್ ದೇಶ್ವಾಲ್ ಸಲ್ಲಿಸಿದ್ದ ಮನವಿ ಆಧರಿಸಿ ನ್ಯಾಯಮೂರ್ತಿ ರೇಖಾ ಪಲ್ಲಿ ಅವರು ಕೇಂದ್ರ ಸರ್ಕಾರ, ಇನ್ಸ್ಟಾಗ್ರಾಂ ಮತ್ತು ಅದರ ಮಾಲೀಕರಾದ ಫೇಸ್ಬುಕ್ಗೆ ನೋಟಿಸ್ ಜಾರಿ ಮಾಡಿದ್ದರು.
''ಹಿಂದೂ ದೇವರು ಮತ್ತು ದೇವತೆಗಳನ್ನು ನಿಂದಿಸುವುದು ಮಾತ್ರವಲ್ಲದೇ ಗ್ರಾಫಿಕ್ಸ್ ಮತ್ತು ಕಾರ್ಟೂನ್ಗಳ ಮೂಲಕ ಅಶ್ಲೀಲವಾಗಿ ಬಿಂಬಿಸಲಾಗಿದೆ," ಎಂದು ವಕೀಲ ಆದಿತ್ಯ ಸಿಂಗ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು
ಇನ್ಸ್ಟಾಗ್ರಾಂ ಪ್ರತಿಕ್ರಿಯೆ: ''ಆಕ್ಷೇಪಾರ್ಹವಾದ ಮಾಹಿತಿಯನ್ನು ಇನ್ಸ್ಟಾಗ್ರಾಂನಿಂದ ತೆಗೆದು ಹಾಕಲಾಗಿದೆ,'' ಎಂದು ಇನ್ಸ್ಟಾಗ್ರಾಂ ನ್ಯಾಯಾಲಯದ ಮುಂದೆ ಹೇಳಿಕೆ ದಾಖಲಿಸಿದೆ.
ಆದರೆ, ನೂತನ ಐಟಿ ನಿಯಮಗಳನ್ನು ಇನ್ಸ್ಟಾಗ್ರಾಂ ಪಾಲಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕಿದೆ. ಹಾಗಾಗಿ, ಹೊಸ ನೀತಿ ಪಾಲಿಸುವಂತೆ ಇನ್ಸ್ಟಾಗ್ರಾಂಗೆ ನಿರ್ದೇಶಿಸುವಂತೆ ನ್ಯಾಯಾಲಯಕ್ಕೆ ಅರ್ಜಿದಾರರು ಮನವಿ ಮಾಡಿದ್ದರು. ಫೇಸ್ಬುಕ್ ಹಾಗೂ ಇನ್ಸ್ಟಾ ಕುರಿತಂತೆ ಅಹವಾಲು ಸ್ವೀಕರಿಸಲು ಒಬ್ಬ ಅಧಿಕಾರಿಯನ್ನು ನೇಮಿಸಲಾಗಿದ್ದು, ಇದರಿಂದ ಮಾಹಿತಿ ಸಂಗ್ರಹ, ಅಹವಾಲು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಅರ್ಜಿದಾರರು ಕೋರ್ಟ್ ಮುಂದೆ ಮನವಿ ಮಾಡಿದ್ದಾರೆ. ಈ ಬಗ್ಗೆ ಆಗಸ್ಟ್ 16ಕ್ಕೆ ವಿಚಾರಣೆ ನಡೆಯಲಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications