ಮಹಾತ್ಮ ಗಾಂಧಿ ಹಂತಕನೇ ದೇಶಭಕ್ತ: ಬಿಜೆಪಿ ಸಂಸದರೇ ಏನು ಇದೆಲ್ಲ?
ದೆಹಲಿ, ನವೆಂಬರ್.27: ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣಕ್ಕೆ ಹೊರಟಿರುವ ಬಿಜೆಪಿಗೆ ಮೇಲಿಂದ ಮೇಲೆ ಪಟ್ಟುಗಳು ಬೀಳುತ್ತಲೇ ಇವೆ. ಇಂದು ಬಿಜೆಪಿ ಸಂಸದರೇ ನೀಡಿರುವ ಮತ್ತೊಂದು ಹೇಳಿಕೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.
ಆಡಬಾರದ ಮಾತನ್ನು ಆಡಿದ ತಪ್ಪಿಗೆ ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಅವರನ್ನು ಲೋಕಸಭೆಯಿಂದಲೇ ಹೊರ ಕಳುಹಿಸಿದ ಘಟನೆ ನಡೆದಿದೆ. ಅಷ್ಟಕ್ಕೂ ಅಂಥದ್ದೇನು ಮಾತನಾಡಿದರು ಎಂದು ಎಲ್ಲರಿಗೂ ಅಚ್ಚರಿ ಆಗಬಹುದು.
ಹೌದು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾಗೆ ವಿಶೇಷ ಭದ್ರತಾ ಪಡೆ ಸೌಲಭ್ಯವನ್ನು ವಾಪಸ್ ಪಡೆದಿರುವ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ಆಗುತ್ತಿತ್ತು. ಈ ವೇಳೆ ಮಹಾತ್ಮ ಗಾಂಧಿಯವರನ್ನು ಗೋಡ್ಸೆ ಏಕೆ ಕೊಂದರು ಎಂದು ಡಿಎಂಕೆ ಸಂಸದ ಎ.ರಾಜ ಪ್ರಶ್ನೆ ಎತ್ತಿದರು.

ದೇಶಭಕ್ತನ ಬಗ್ಗೆ ಹೀಗೆಲ್ಲ ಮಾತನಾಡಬೇಡಿ!
ನಾಥುರಾಮ್ ಗೋಡ್ಸೆ ಮಹಾತ್ಮ ಗಾಂಧಿಯನ್ನು ಕೊಂದಿದ್ದೇಕೆ ಎಂದು ಡಿಎಂಕೆ ಸದಸ್ಯ ಎ ರಾಜ ಪ್ರಶ್ನೆ ಎತ್ತಿದರು. ಈ ವೇಳೆ ಎದ್ದು ನಿಂತ ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಗೋಡ್ಸೆಯೊಬ್ಬ ದೇಶಭಕ್ತರಾಗಿದ್ದು, ಅವರ ಬಗ್ಗೆ ಹೀಗೆಲ್ಲ ಮಾತನಾಡಬಾರದು ಎಂದರು. ಅಲ್ಲದೇ ಹತ್ಯೆ ವಿಚಾರದಲ್ಲಿ ದೇಶಭಕ್ತನನ್ನು ಉದಾಹರಣೆಯಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದರು.
ಬಿಜೆಪಿ ಸಂಸದೆ ಮಾತಿನಿಂದ ಕೆರಳಿದ ವಿಪಕ್ಷ ಸದಸ್ಯರು ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದ ಸಾಧ್ವಿ ಪ್ರಗ್ಯಾ ಅವರನ್ನು ಸದನದಿಂದ ಹೊರ ಕಳಿಸುವಂತೆ ಪಟ್ಟು ಹಿಡಿದವು. ಕೊನೆಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾವರನ್ನು ಸದನದಿಂದ ಹೊರ ಕಳುಹಿಸಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications