ಮಡೆ ಮಡೆ ಸ್ನಾನ: ಹೈ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ
ನವದೆಹಲಿ, ಡಿ. 12: ಮಡೆ ಮಡೆ ಸ್ನಾನ ಆಚರಣೆಗೆ ಹಸಿರು ನಿಶಾನೆ ತೋರಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಹೈ ಕೋರ್ಟ್ ಇದೇ ವರ್ಷ ನವೆಂಬರ್ 19ರಂದು ಮಡೆ ಮಡೆ ಸ್ನಾನಕ್ಕೆ ಹಸಿರು ನಿಶಾನೆ ತೋರಿ ಆದೇಶ ನೀಡಿತ್ತು. ಇದಕ್ಕೂ ಮೊದಲು ಮಡೆ ಮಡೆ ಸ್ನಾನವನ್ನು ಹೈ ಕೋರ್ಟ್ ನಿಷೇಧಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. [ಮಡೆ ಸ್ನಾನಕ್ಕೆ ಹೈ ಕೋರ್ಟ್ ಗ್ರೀನ್ ಸಿಗ್ನಲ್]

ಮಡೆಸ್ನಾನ ಪದ್ದತಿ ಸುಮಾರು 400 ವರ್ಷಗಳಿಂದ ನಡೆದುಕೊಂಡು ಬಂದಿದೆ. ಇದು ಕುಕ್ಕೇ ಅಥವಾ ಉಡುಪಿ ದೇವಾಲಯದ ಸೇವಾಪಟ್ಟಿಯಲ್ಲಿರದ ಸೇವೆ. ಬ್ರಾಹ್ಮಣರು ಮತ್ತು ಬ್ರಾಹ್ಮಣೇತರರೂ ಈ ಸೇವೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂಬ ವಾದಕ್ಕೆ ಮನ್ನಣೆ ನೀಡಿದ್ದ ಹೈಕೋರ್ಟ್ ನಿಷೇಧ ತೆರವುಗೊಳಿಸಿತ್ತು. [ನಮ್ಮದು ಒತ್ತಾಯದ ಬೇಡಿಕೆಯಲ್ಲ, ಕಳಕಳಿಯ ಮನವಿ]
ಪ್ರತಿವಾದಿಗಳಿಗೆ ನೋಟಿಸ್: ಇದರಿಂದ ಅನಿವಾರ್ಯವಾಗಿ ಮಡೆ ಮಡೆ ಸ್ನಾನ ವಿರೋಧಿ ಗುಂಪು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮಡೆ ಮಡೆ 500 ವರ್ಷಗಳಿಂದ ನಡೆಯುತ್ತಿದೆ ಎಂಬ ಕಾರಣದಿಂದ ಮುಂದುವರಿಸುವುದು ಸಾಧ್ಯವಿಲ್ಲ ಎಂದು ಹೇಳಿದೆ. [ಮಡೆಸ್ನಾನ : ಸುಪ್ರೀಂ ಕೋರ್ಟ್ ತೀರ್ಪು]
ಅಸ್ಪ್ರಶ್ಯತೆಯೂ ಸಾವಿರಾರು ವರ್ಷಗಳಿಂದ ಜಾರಿಯಲ್ಲಿದೆ. ಹಾಗೆಂದು ಅದನ್ನೂ ಮುಂದುವರಿಸಬೇಕೇ ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆಯಲ್ಲಿ ಪ್ರಶ್ನಿಸಿದೆ. ಅಲ್ಲದೆ, ಮಡೆ ಮಡೆ ಸ್ನಾನ ಪ್ರಕರಣದ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. [ಮಡೆಸ್ನಾನದಲ್ಲಿ ಬ್ರಾಹ್ಮಣರೂ ಇದ್ರು]
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications