ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಗಿಬೀಳುತ್ತಿರುವ ಸಂಸದರು!
ನವದೆಹಲಿ, ಅಕ್ಟೋಬರ್ 20: ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕೆಲವು ಸಂಸದರಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ.
ಕೆಲವರಿಗೆ ಟಿಕೆಟ್ ನೀಡಲು ಬಿಜೆಪಿಯೇ ನಿರ್ಧರಿಸಿದ್ದರೆ, ಮತ್ತೆ ಕೆಲವು ಸಂಸದರೇ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಡಿಯೋ: ಮಿಮಿಕ್ರಿ ಮಾಡಿ ಮೋದಿಯನ್ನು ಅಣಕಿಸಿದ ರಾಹುಲ್ ಗಾಂಧಿ!
ಗೆಲ್ಲುವ ಅಭ್ಯರ್ಥಿಗಳನ್ನೇ ಚುನಾವಣೆಗೆ ನಿಲ್ಲಿಸಬೇಕಾದ ಒತ್ತಡದಲ್ಲಿರುವ ಬಿಜೆಪಿ ಕೆಲವು ಸಂಸದರನ್ನೇ ಚುನಾವಣೆಗೆ ನಿಲ್ಲಿಸಿದರೆ ಅಚ್ಚರಿಯೇನಿಲ್ಲ.
ಸಂಸದರಿಗೆ ಟಕೆಟ್ ನೀಡುವುದು ಬಿಜೆಪಿಗೆ ಅನಿವಾರ್ಯ
ಮಧ್ಯಪ್ರದೇಶದಲ್ಲಿ ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಅಲೆಯಿದೆ. ಆದ್ದರಿಂದ ಅಭ್ಯರ್ಥಿಗಳ ಆಯ್ಕೆಯ ವಿಷಯದಲ್ಲಿ ಬಿಜೆಪಿ ಅಳೆದು ತೂಗಿ ನಿರ್ಧಾರ ತೆಗೆದುಕೊಳ್ಳಬೇಕಿದೆ. ಗೆಲ್ಲುವ ಅಭ್ಯರ್ಥಿಗಳನ್ನೇ ಆರಿಸುವ ಒತ್ತಡದಲ್ಲಿರುವ ಬಿಜೆಪಿಗೆ ಕೆಲವು ಸಂಸದರಿಗೆ ಟಿಕೆಟ್ ನೀಡುವುದು ಅನಿವಾರ್ಯವಾಗಲಿದೆ.
ನಾನು ಪ್ರಚಾರ ಮಾಡಿದರೆ ಮ.ಪ್ರ.ದಲ್ಲಿ ಕಾಂಗ್ರೆಸ್ ಸೋಲುತ್ತದೆ: ದಿಗ್ವಿಜಯ್ ಸಿಂಗ್
ಸಂಸದರಿಂದಲೇ ಟಿಕೆಟ್ ಗೆ ಬೇಡಿಕೆ
ಇನ್ನು ಕೆಲವು ಬಿಜೆಪಿ ಸಂಸದರೇ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದಾರೆ. ಮಧ್ಯಪ್ರದೇಶದ ಸುಮಾರು 40% ಪ್ರತಿಶತದಷ್ಟು ಶಾಸಕರು ಮತ್ತು ಸಂಸದರಿಗೆ ಈ ಬಾರಿ ಚುನಾವಣೆಗೆ ಟಿಕೆಟ್ ನೀಡದಿರಲು ಬಿಜೆಪಿ ನಿರ್ಧರಿಸಿದೆ. ಗೆಲುವು ಸಾಧಿಸಲು ಸಾಧ್ಯವಿಲ್ಲದ ಅಭ್ಯರ್ಥಿಗಳಿಗೆ ಟಿಕೆಟ್ ಅನ್ನು ನೀಡಲು ಬಿಜೆಪಿ ಬಿಲ್ಕುಲ್ ಒಪ್ಪುತ್ತಿಲ್ಲ. ಆದ್ದರಿಂದ ಟಿಕೆಟ್ ಹಂಚಿಕೆಯ ಸಮಯದಲ್ಲಿ ಬಿಜೆಪಿಯಲ್ಲಿ ಬಂಡಾಯದ ಬಿಸಿ ಆರಂಭವಾದರೂ ಅಚ್ಚರಿಯೇನಿಲ್ಲ.
ಬಿಜೆಪಿ ಮೇಲೆ ಮೇಲ್ಜಾತಿಯ ಮುನಿಸು: ಸಂಧಾನಕ್ಕೆ ಬಂದ ಆರೆಸ್ಸೆಸ್?!
ಸಂಸದರು ಟಿಕೆಟ್ ಬಯಸುತ್ತಿರುವುದೇಕೆ?
ವಿಧಾನಸಭೆ ಚುನಾವಣೆಗೆ ಸಂಸದರು ಟಿಕೆಟ್ ಗೆ ಬೇಡಿಕೆ ಇಡುತ್ತಿರುವುದೇಕೆ? ಸಂಸದರಾದರೆ ಕೇಂದ್ರ ಸರ್ಕಾರದಲ್ಲಿ ಸಚಿವರಾಗುವ ಅವಕಾಶ ಕಡಿಮೆ. ಆದರೆ ಶಾಸಕರಾದರೆ ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಮಂತ್ರಿಯಾಗುವ ಸಾಧ್ಯತೆಗಳು ಹೆಚ್ಚು. ಆ ಕಾರಣದಿಂದಲೇ ಹೆಚ್ಚು ಸಂಸದರು ಮತ್ತೆ ಶಾಸಕರಾಗಲು ಹವಣಿಸುತ್ತಿದ್ದಾರೆ.
ಮತ್ತೆ ಉಪಚುನಾವಣೆ?
ಸಂಸದರು ವಿಧಾನಸಭಾ ಚುನಾವಣೆಗೆ ನಿಂತು ಗೆದ್ದರೆ, ಅವರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಇದರಿಂದ ಮತ್ತೆ ಉಪಚುನಾವಣೆ ನಡೆಯಬೇಕಾಗಬಹುದು! ಆದರೆ 2019 ರ ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವುದರಿಂದ ಬಹುಶಃ ಉಪಚುನಾವಣೆ ನಡೆಯುವ ಸಾಧ್ಯೆಗಳು ಕಡಿಮೆ ಇರುವುದರಿಂದ ಬಿಜೆಪಿ ಸಂಸದರನ್ನು ವಿಧಾನಸಭೆ ಚುನಾವಣೆಗೆ ನಿಲ್ಲಿಸಬಹುದು.
ಚುನಾವಣೆ ಯಾವಾಗ?
ಮಧ್ಯಪ್ರದೇಶದಲ್ಲಿ ನವೆಂಬರ್ 28 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ. ಒಟ್ಟು 230 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸಲು ಬೇಕಿರುವ ಮ್ಯಾಜಿಕ್ ನಂಬರ್ 116. ಮೂರು ಅವಧಿಯಲ್ಲೂ ಬಿಜೆಪಿಯೇ ಅಧಿಕಾರಕ್ಕೆ ಬಂದಿದ್ದು, ಇದೀಗ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.