ಮಹಾಮೈತ್ರಿಕೂಟ ದೇಶದ ಜನತೆಗೆ ವಿರುದ್ಧ: ನರೇಂದ್ರ ಮೋದಿ
ನವದೆಹಲಿ, ಜನವರಿ 19: ವಿರೋಧ ಪಕ್ಷಗಳೆಲ್ಲ ಪಶ್ಚಿಮ ಬಂಗಾಳದಲ್ಲಿ ಟಿಎಂಟಿಯ ಮೆಗಾ rallyಯಲ್ಲಿ ಶನಿವಾರ ತಮ್ಮ ಶಕ್ತಿ ಸಾಮರ್ಥ್ಯದ ಪ್ರದರ್ಶನ ಮಾಡುತ್ತಿವೆ. ಈ ಮಹಾಮೈತ್ರಿಕೂಟವು ಬಿಜೆಪಿ ಮಾತ್ರವಲ್ಲ ದೇಶದ ಜನತೆಗೆ ವಿರುದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಾಖ್ಯಾನಿಸಿದ್ದಾರೆ.
ಗುಜರಾತ್ನ ಬುಡಕಟ್ಟು ಪಟ್ಟಣ ಸಿಲ್ವಾಸಾದಲ್ಲಿ ಮಾತನಾಡಿದ ಅವರು, ಮಹಾಮೈತ್ರಿಕೂಟವು ದೇಶವನ್ನು ಲೂಟಿ ಮಾಡುವುದನ್ನು ತಾವು ತಡೆದಿದ್ದ ಜನರ ಒಕ್ಕೂಟವಾಗಿದೆ ಎಂದು ಲೇವಡಿ ಮಾಡಿದ್ದಾರೆ.
'ಕಾಂಗ್ರೆಸ್ಅನ್ನು ಟೀಕಿಸುತ್ತಿದ್ದವರು ಇಂದು ಅವರ ಜೊತೆಗೂಡಿದ್ದಾರೆ. ಈ ಮಹಾಘಟಬಂಧನವು ಬಿಜೆಪಿ ಮಾತ್ರವಲ್ಲ, ಭಾರತದ ಜನತೆಯ ವಿರುದ್ಧವೂ ಆಗಿದೆ. ಇನ್ನೂ ಅವರಲ್ಲಿ ಎಲ್ಲರೂ ವೇದಿಕೆಗೆ ಬಂದಿಲ್ಲ. ಆದರೆ, ಈಗಲೇ 'ಡೀಲ್ಗಳು' ಈಗಾಗಲೇ ಶುರುವಾಗಿವೆ' ಎಂದು ವಾಗ್ದಾಳಿ ನಡೆಸಿದ್ದಾರೆ.
ಪುರುಷರು, ಮಹಿಳೆಯರು ಮತ್ತು ಮೊದಲ ಬಾರಿ ಮತದಾನ ಮಾಡುತ್ತಿರುವವರು ವಿರೋಧಪಕ್ಷದ ನಾಯಕರನ್ನು ಸಮೀಪದಿಂದ ಗಮನಿಸುತ್ತಿದ್ದಾರೆ. ಅವರಿಗೆ ನಿಜವಾದ ಜಗಳ ಕಾಣಿಸುತ್ತಿದೆ.
ಸಕಾರಾತ್ಮಕ ಆಲೋಚನೆ ಮತ್ತು ನಕಾರಾತ್ಮಕ ಮನೋಭಾವಗಳ ನಡುವೆ ಈ ಕಾದಾಟ. ಅಭಿವೃದ್ಧಿ ಮತ್ತು ಭ್ರಷ್ಟಾಚಾರಗಳ ನಡುವೆ ಈ ಕಾದಾಟ. ಸಾರ್ವಜನಿಕ ಮತ್ತು ಸಾಮಾನ್ಯ ಪಕ್ಷಗಳ ನಡುವೆ ಈ ಕಾದಾಟ ಎಂದು ಮೋದಿ ಬಣ್ಣಿಸಿದ್ದಾರೆ.

ತಾವು ತೆಗೆದುಕೊಂಡ ಕ್ರಮಗಳ ಪರಿಣಾಮಗಳು ಕೆಲವರನ್ನು ಕೆರಳಿಸಿದೆ. ಸಾರ್ವಜನಿಕರ ಹಣವನ್ನು ಕೊಳ್ಳೆ ಹೊಡೆಯುವುದನ್ನು ನಾನು ತಡೆದಾಗ ಅವರಿಗೆ ಸಿಟ್ಟು ಬರುವುದು ಸಹಜ. ಇದರ ಪರಿಣಾಮವಾಗಿ ಅವರು ಈಗ ಮಹಾಘಟಬಂಧನ್ ಎಂಬ ಮೈತ್ರಿಕೂಟ ರಚಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಆಯ್ಕೆಯಾಗಿರುವ ಬಿಜೆಪಿಯ ಏಕೈಕ ಶಾಸಕ ವಿರೋಧಪಕ್ಷಗಳಿಗೆ ನಿದ್ದೆ ಇಲ್ಲದೆ ರಾತ್ರಿ ಕಳೆಯುವಂತೆ ಮಾಡಿದ್ದಾರೆ ಎಂದು ಮೋದಿ ಲೇವಡಿ ಮಾಡಿದ್ದಾರೆ.
'ಬಂಗಾಳದಲ್ಲಿ ಬಿಜೆಪಿಯ ಒಬ್ಬರೇ ಒಬ್ಬ ಶಾಸಕರಿದ್ದಾರೆ. ಆದರೆ, ಒಬ್ಬ ಶಾಸಕನ ಪಕ್ಷದ ವಿರುದ್ಧ ಸ್ಪರ್ಧಿಸಲು ಎಲ್ಲ ಪಕ್ಷಗಳೂ ಒಂದುಗೂಡಿ ಸಹಾಯ ಕೇಳುತ್ತಿವೆ. ಈ ಜನರಿಗೆ ಒಬ್ಬ ಶಾಸಕ ನಿದ್ದೆಗಳಿಲ್ಲದ ರಾತ್ರಿಯನ್ನು ನೀಡಿದ್ದಾರೆ' ಎಂದು ಮೋದಿ ಹೇಳಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications