ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಚುನಾವಣೆಯ ಸೀಟು ಹಂಚಿಕೆ: ಇಂದು ವಿಪಕ್ಷಗಳ ಮಹತ್ವದ ಸಭೆ

|
Google Oneindia Kannada News

ನವದೆಹಲಿ, ಡಿಸೆಂಬರ್ 20: ಲೋಕಸಭಾ ಚುನಾವಣೆಯ ಸೀಟು ಹಂಚಿಕೆಗೆ ಸಂಬಂಧಿಸಿದಂತೆ 'ಮಹಾಘಟಬಂಧನ'ದ ನಾಯಕರು ಇಂದು ಚರ್ಚೆ ನಡೆಸಲಿದ್ದಾರೆ.

ದೆಹಲಿಯಲ್ಲಿ ಗುರುವಾರ ಸಂಜೆ 4 ಗಂಟೆಗೆ ಸಭೆ ಆರಂಭವಾಗಲಿದ್ದು, ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕಾಂಗ್ರೆಸ್, ಆರ್ ಜೆಡಿ ನಾಯಕರಷ್ಟೇ ಅಲ್ಲದೆ, ಇತ್ತೀಚೆಗಷ್ಟೇ ಎನ್ ಡಿಎ ಯಿಂದ ಹೊರಬಂದ ರಾಷ್ಟ್ರೀಯ ಲೋಕ ಸಮತಾ ಪಕ್ಷದ ನಾಯಕ ಉಪೇಂದ್ರ ಕುಶ್ವಾಹ ಅವರು ಸಹ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಹಾಘಟಬಂಧನದ ವಿರಾಟರೂಪ ದರ್ಶನ?ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಹಾಘಟಬಂಧನದ ವಿರಾಟರೂಪ ದರ್ಶನ?

"ಈಗಾಗಲೇ ನಾವು ಉಪೇಂದ್ರ ಕುಶ್ವಾಹ ಅವರನ್ನು ಮಹಾಮೈತ್ರಿಕೂಟಕ್ಕೆ ಆಮಂತ್ರಿಸಿದ್ದೇವೆ. ದೇಶದ ಒಳಿತಿಗಾಗಿ ನಮ್ಮೊಂದಿಗೆ ಕೈಜೋಡಿಸಲು ಮನವಿ ಮಾಡಿದ್ದೇವೆ" ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.

Mahagathbandhan leaders to discuss Lok Sabha election seat sharing today

'ವಿಪಕ್ಷಗಳ ಮಹಾಘಟಬಂಧನ ಭ್ರಮೆ, ಮತ್ತೆ ಅಧಿಕಾರಕ್ಕೆ ಬರೋದು ಬಿಜೆಪಿಯೇ!''ವಿಪಕ್ಷಗಳ ಮಹಾಘಟಬಂಧನ ಭ್ರಮೆ, ಮತ್ತೆ ಅಧಿಕಾರಕ್ಕೆ ಬರೋದು ಬಿಜೆಪಿಯೇ!'

ಸಭೆಯು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯಲಿದ್ದು, ಮಹಾಘಟಬಂಧನಕ್ಕೆ ಬೆಂಬಲ ನೀಡುವ ವಿವಿಧ ಪಕ್ಷಗಳು ಭಾಗವಹಿಸಲಿವೆ. ಯಾವೆಲ್ಲ ಪಕ್ಷಗಳು ಸಭೆಯಲ್ಲಿ ಭಾಗವಹಿಸಲಿವೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

English summary
Amid the apparent rift within the National Democratic Alliance(NDA) over seat sharing in Bihar for Lok Sabha elections 2019, the constituents of the Magathbandhan are slated to meet in the national capital on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X