ಸಿಎಂ ರಾಜೀನಾಮೆ, ಮೂರೇ ದಿನಕ್ಕೆ ಉರುಳಿದ ಮಹಾರಾಷ್ಟ್ರ ಸರ್ಕಾರ
ನವದೆಹಲಿ, ನವೆಂಬರ್ 27: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಅಂತಿಮ ಹಂತಕ್ಕೆ ಬಂದು ನಿಂತಿದೆ. ಬುಧವಾರ ಸಂಜೆ 5ಗಂಟೆಯೊಳಗೆ ಬಿಜೆಪಿ-ಎನ್ಸಿಪಿ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ಮೂಲಕ ಆತುರಾತರವಾಗಿ ರಚಿಸಲ್ಪಟ್ಟ ಸರ್ಕಾರದ ಅಳಿವು-ಉಳಿವು ತೀರ್ಮಾನವಾಗಲಿದೆ.
ಮಹಾರಾಷ್ಟ್ರ ಸರ್ಕಾರ ರಚನೆಯು ಅಸಾಂವಿಧಾನಿಕ ಎಂದು ಎನ್ಸಿಪಿ-ಕಾಂಗ್ರೆಸ್-ಶಿವಸೇನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದವು. ಶನಿವಾರ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ, ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.
ಮಹಾರಾಷ್ಟ್ರ ರಾಜಕೀಯ; 52 ಶಾಸಕರು ಎನ್ಸಿಪಿ ಜೊತೆ!
ಶಿವಸೇನೆ, ಕಾಂಗ್ರೆಸ್ ಮತ್ತು ಎನ್ಸಿಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದ ತ್ರಿ ಸದಸ್ಯ ಪೀಠ ನವೆಂಬರ್ 27ರಂದು ಸಂಜೆ 5 ಗಂಟೆಯೊಳಗೆ ಸರ್ಕಾರ ಬಹುಮತ ಸಾಬೀತು ಮಾಡಬೇಕು ಎಂದು ಆದೇಶ ನೀಡಿದೆ.
ಶನಿವಾರ ಮುಂಜಾನೆ ದಿಢೀರ್ ಆಗಿ ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ರಚನೆ ಮಾಡಲಾಗಿತ್ತು. ಬಿಜೆಪಿ ಸದನದಲ್ಲಿ 105 ಸದಸ್ಯ ಬಲ ಹೊಂದಿದೆ. 6 ಪಕ್ಷೇತರರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಎನ್ಸಿಪಿಯ ಎಷ್ಟು ಶಾಸಕರು ಬೆಂಬಲ ನೀಡಲಿದ್ದಾರೆ? ಎಂದು ಕಾದು ನೋಡಬೇಕಿದೆ.
ಮಹಾರಾಷ್ಟ್ರ ರಾಜಕಾರಣ ಮತ್ತು ಸುಪ್ರೀಂಕೋರ್ಟ್ನ ವಿಚಾರಣೆಯ ಕ್ಷಣ-ಕ್ಷಣದ ಮಾಹಿತಿ ಒನ್ ಇಂಡಿಯಾ ಕನ್ನಡದಲ್ಲಿ.