ಬಿಹಾರ ಸಿಎಂ ನಿತೀಶ್ ಕುಮಾರ್ ಗಾಂಧೀವಾದಿಯೋ.. ಗೋಡ್ಸೆವಾದಿಯೋ..?
ನವದೆಹಲಿ, ಫೆಬ್ರವರಿ.18: ಭಾರತದಲ್ಲಿ ಮಹಾತ್ಮ ಗಾಂಧೀಜಿ ಮತ್ತು ನಾಥೂರಾಮ್ ಗೋಡ್ಸೆ ಇಬ್ಬರೂ ಒಂದೇ ದಾರಿಯಲ್ಲಿ ಸಾಗುವುದಕ್ಕೆ ಸಾಧ್ಯವಿಲ್ಲ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾರ ಸಿದ್ಧಾಂತವನ್ನು ಪಾಲಿಸುತ್ತಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ರಾಜಕೀಯ ಮುಖಂಡ ಪ್ರಶಾಂತ್ ಕಿಶೋರ್ ಸವಾಲ್ ಹಾಕಿದ್ದಾರೆ.
ಬಿಹಾರದ ಜೆಡಿಯು ಪಕ್ಷದಿಂದ ಉಚ್ಛಾಟಿಸಲ್ಪಟ್ಟ ಬಳಿಕ ಮೊದಲ ಬಾರಿಗೆ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿರುವ ಪ್ರಶಾಂತ್ ಕಿಶೋರ್, ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ. ಜೆಡಿಯು ಮುಖ್ಯಸ್ಥರಾಗಿರುವ ನಿತೀಶ್ ಕುಮಾರ್, ತಾವೊಬ್ಬ ಗಾಂಧೀವಾದಿ ಎಂದು ಹೇಳಿಕೊಳ್ಳುತ್ತಾರೆ.
ಮಹಾತ್ಮ ಗಾಂಧೀಜಿ ಸಿದ್ದಾಂತವನ್ನು ನಂಬಿರುವುದಾಗಿ ಹೇಳುವ ನಿತೀಶ್ ಕುಮಾರ್ ಅದು ಹೇಗೆ ತಾನೇ ಗೋಡ್ಸೆ ಚಿಂತನೆಗಳನ್ನು ಪಾಲಿಸುತ್ತಿರುವ ಭಾರತೀಯ ಜನತಾ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಪ್ರಶ್ನಿಸಿದರು.

ಗಾಂಧಿ-ಗೋಡ್ಸೆ ಒಟ್ಟಾಗಿ ಸಾಗಲು ಸಾಧ್ಯವೇ?
ನಿತೀಶ್ ಕುಮಾರ್ ಗಾಂಧಿ, ಜಯಪ್ರಕಾಶ್ ಹಾಗೂ ರಾಮ್ ಮನೋಹರ್ ಲೋಹಿಯಾ ಅವರ ತತ್ವ ಸಿದ್ದಾಂತಗಳನ್ನು ಪಾಲಿಸುವುದಾಗಿ ಹೇಳಿಕೊಳ್ಳುತ್ತಾರೆ. ಇನ್ನೊಂದು ಕಡೆಯಲ್ಲಿ ಗಾಂಧೀಜಿ ಹಂತಕ ನಾಥೂರಾಮ್ ಗೋಡ್ಸೆ ತತ್ವ ಸಿದ್ದಾಂತಗಳನ್ನು ಪಾಲಿಸುವ ಬಿಜೆಪಿ ಜೊತೆಗೆೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶಾಂತ್ ಕಿಶೋರ್ ಪ್ರಶ್ನಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications