ಸಂಸತ್ನಲ್ಲಿ ಪ್ರತಿಪಕ್ಷಗಳ ಮೇಲೆ ಬೇಹುಗಾರಿಕೆ ನಡೆಸುತ್ತಿದ್ದ ಅಧಿಕಾರಿಯ ಪತ್ತೆ ಮಾಡಿದ ಖರ್ಗೆ
Recommended Video

ನವದೆಹಲಿ, ಜುಲೈ 23: ಸಂಸತ್ ಅಧಿವೇಶನ ನಡೆಯಬೇಕಾದರೆ ಅಧಿಕಾರಿಗಳ ಗ್ಯಾಲರಿಯಲ್ಲಿ ಕೂತ ಅಧಿಕಾರಿಯೊಬ್ಬರು ಪ್ರತಿಪಕ್ಷ ಸದಸ್ಯರ ಮೇಲೆ ಕಣ್ಗಾವಲು ನಡೆಸುತ್ತಿದ್ದುದನ್ನು ಪತ್ತೆ ಹಚ್ಚಿದ ಖರ್ಗೆ ಈ ಬಗ್ಗೆ ತೀವ್ರವಾಗಿ ಟೀಕೆ ಮಾಡಿದರು.
ಸಂಸತ್ ಅಧಿವೇಶನ ನಡೆಯುವ ಸಮಯದಲ್ಲಿ ಅಧಿಕಾರಿಗಳ ಗ್ಯಾಲರಿಯಲ್ಲಿ ಕೂತಿದ್ದ ಒಬ್ಬ ಅಧಿಕಾರಿ ಪ್ರತಿಪಕ್ಷಗಳ ಪ್ರಶ್ನೆಗಳನ್ನು ನೋಟ್ ಮಾಡಿಕೊಳ್ಳುತ್ತಿದ್ದುದು ಹಾಗೂ ಪ್ರತಿಪಕ್ಷಗಳ ಸದಸ್ಯರನ್ನು ಲೆಕ್ಕಾ ಮಾಡುತ್ತಿದುದನ್ನು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪತ್ತೆ ಮಾಡಿದರು.

ಈ ಬಗ್ಗೆ ಮೊದಲಿಗೆ ಧನಿ ಎತ್ತಿದ ಖರ್ಗೆ ವಿಷಯವನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಗಮನಕ್ಕೆ ತಂದರು. ಆ ನಂತರ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಖರ್ಗೆ ಅವರು ವಿಷಯ ಪ್ರಸ್ತಾಪ ಮಾಡಿದ ಕೂಡಲೇ ಆ ಅಧಿಕಾರಿ ಗ್ಯಾಲರಿ ಬಿಟ್ಟು ಹೊರಗೆ ಹೋಗಿಬಿಟ್ಟರು ಇದು ಇನ್ನಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿತು.
ಖರ್ಗೆ ಅವರ ಅಸಮಾಧಾನಕ್ಕೆ ಪ್ರತಿಕ್ರಿಯಿಸಿದ ಸುಮಿತ್ರಾ ಮಹಾಜನ್, 'ನಾನು ಕೂತಿರುವ ಜಾಗದಿಂದ ಅಧಿಕಾರಿಗಳ ಗ್ಯಾಲರಿ ಕಾಣುವುದಿಲ್ಲ, ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ಜರುಗಿಸುತ್ತೇನೆ' ಎಂದು ಭರವಸೆ ನೀಡಿದರು.
ಖರ್ಗೆ ಅವರ ಆರೋಪವನ್ನು ತಳ್ಳಿ ಹಾಕಿದ ಬಿಜೆಪಿಯ ಸಹಾಯಕ ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ ರಾಮ ಮೇಘವಾಲ, ಆ ಅಧಿಕಾರಿ ತಮ್ಮ ಕಾರ್ಯಾಲಯದವರೇ, ಅವರು ತಮ್ಮ ಕೆಲಸ ಮಾಡುತ್ತಿದ್ದಾರಷ್ಟೆ' ಎಂದರು.
ಇದೇ ವಿಷಯದ ಬಗ್ಗೆ ಮಾತನಾಡಿದ ಪ್ರಕಾಶ್ ಜಾವಡೇಕರ್ ಅವರು, ಸಂಸತ್ನಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಯಾರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿ ಬಿಡುತ್ತದೆ, ರಾಹುಲ್ ಅವರು ಕಣ್ಣು ಹೊಡೆದಿದ್ದನ್ನೂ ದೇಶವೇ ನೋಡಿದೆ ಎಂದು ಕಾಲೆಳೆದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications