ತ್ರಿಪುರಾ ಹಿಂಸಾಚಾರ, ಬಿಎಸ್ಎಫ್ ಬಗ್ಗೆ ಮೋದಿಯೊಂದಿಗೆ ಚರ್ಚಿಸಿದ ಮಮತಾ ಬ್ಯಾನರ್ಜಿ

ನವದೆಹಲಿ, ನವೆಂಬರ್ 24: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರದಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಜೊತೆಗೆ ಬಿಎಸ್ಎಫ್ ಅಧಿಕಾರ ವ್ಯಾಪ್ತಿ ಮತ್ತು ತ್ರಿಪುರಾದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಪ್ರಸ್ತಾಪಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತ್ರಿಪುರಾದಲ್ಲಿನ ಹಿಂಸಾಚಾರ ಮತ್ತು ಬಂಗಾಳದಲ್ಲಿ ಬಿಎಸ್ಎಫ್ ಅಧಿಕಾರ ವ್ಯಾಪ್ತಿಯ ವಿಷಯದ ಬಗ್ಗೆ ಚರ್ಚಿಸಿದರು. "ನಾನು ತ್ರಿಪುರಾ ಹಿಂಸಾಚಾರದ ಬಗ್ಗೆ ಮಾತನಾಡಿದ್ದೇನೆ, ಅಲ್ಲಿ ಏನು ನಡೆಯುತ್ತಿದೆ ಮತ್ತು ಸಯೋನಿ ಅವರನ್ನು ಹೇಗೆ ಗುರಿಯಾಗಿಸಲಾಗಿದೆ ಎಂಬುದರ ಕುರಿತು ಪ್ರಧಾನಿಗೆ ತಿಳಿಸಿದ್ದೇನೆ" ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ರಾಜ್ಯವನ್ನು ಕಗ್ಗೊಲೆ ಮಾಡಿದ ಪ್ರಕೃತಿ ವಿಕೋಪಕ್ಕಾಗಿ ಕೇಂದ್ರದಿಂದ ರಾಜ್ಯವು ಇನ್ನೂ 96,605 ಕೋಟಿ ರೂಪಾಯಿಗಳನ್ನು ಪಡೆಯಬೇಕಾಗಿದೆ ಎಂದು ಮಮತಾ ಬ್ಯಾನರ್ಜಿ ಉಲ್ಲೇಖಿಸಿದ್ದಾರೆ.

 ಬಿಎಸ್‌ಎಫ್ ಅಧಿಕಾರ ವ್ಯಾಪ್ತಿಯ ಬಗ್ಗೆ ಮಾತನಾಡುತ್ತಾ

ಬಿಎಸ್‌ಎಫ್ ಅಧಿಕಾರ ವ್ಯಾಪ್ತಿಯ ಬಗ್ಗೆ ಮಾತನಾಡುತ್ತಾ

ಬಂಗಾಳದ ಬಿಎಸ್‌ಎಫ್ ಅಧಿಕಾರ ವ್ಯಾಪ್ತಿಯ ಬಗ್ಗೆ ಮಾತನಾಡುತ್ತಾ, ಮುಖ್ಯಮಂತ್ರಿಗಳು ಹೀಗೆ ಉಲ್ಲೇಖಿಸಿದ್ದಾರೆ: "ಬಿಎಸ್‌ಎಫ್‌ಗೆ ಹೆಚ್ಚಿನ ಅಧಿಕಾರ ಸಿಕ್ಕರೆ, ಅದು ಕಾನೂನು ಮತ್ತು ಸುವ್ಯವಸ್ಥೆಯನ್ನು ಕದಡುತ್ತದೆ ಮತ್ತು ಕಾನೂನು ರಾಜ್ಯದ ವಿಷಯವಾಗಿದೆ ಎಂದು ಒಬ್ಬರು ತಿಳಿದಿರಬೇಕು. ಬಿಎಸ್‌ಎಫ್ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಕೂಚ್ ಬಿಹಾರ್ ಪ್ರಕರಣವನ್ನು ಉಲ್ಲೇಖಿಸಿ ಸಿಎಂ ಹೀಗೆ ಹೇಳಿದ್ದಾರೆ. "ಇದಕ್ಕಾಗಿಯೇ, ಈ ಸಮಸ್ಯೆಯನ್ನು ಚರ್ಚಿಸಲು ಮತ್ತು ಫೆಡರಲ್ ರಚನೆಗೆ ಅನಗತ್ಯವಾಗಿ ತೊಂದರೆಯಾಗದಂತೆ ನೋಡಿಕೊಳ್ಳಲು ನಾನು ಪ್ರಧಾನಿಯನ್ನು ವಿನಂತಿಸಿದೆ" ಎಂದರು.

ಇತರ ರಾಜ್ಯಗಳಿಂದ ತೃಣಮೂಲ ಹೋರಾಟದ ಕುರಿತು ಮಾತನಾಡಿದ ಮಮತಾ ಅವರು, "ಟಿಎಂಸಿ ಎಲ್ಲಿ ಬೇಕಾದರೂ ಹೋರಾಡುತ್ತದೆ. ಅಖಿಲೇಶ್ ಯಾದವ್ ಉತ್ತರ ಪ್ರದೇಶದಲ್ಲಿ ಅವರನ್ನು ಬೆಂಬಲಿಸಬೇಕೆಂದು ಬಯಸಿದರೆ, ನಾವು ಅಲ್ಲಿಯೂ ಹೋರಾಟ ಮಾಡುತ್ತೇವೆ" ಎಂದಿದ್ದಾರೆ.

 ಕೇಂದ್ರ ಸರ್ಕಾರಕ್ಕೆ ಪತ್ರ

ಕೇಂದ್ರ ಸರ್ಕಾರಕ್ಕೆ ಪತ್ರ

ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಅಂತಾರಾಷ್ಟ್ರೀಯ ಗಡಿಯಿಂದ ಅಸ್ತಿತ್ವದಲ್ಲಿರುವ 15 ಕಿಲೋಮೀಟರ್‌ನಿಂದ 50 ಕಿಮೀ ವ್ಯಾಪ್ತಿಯೊಳಗೆ ಶೋಧ, ವಶಪಡಿಸಿಕೊಳ್ಳುವಿಕೆ ಮತ್ತು ಬಂಧನ ಮಾಡುವುದಕ್ಕೆ ಗಡಿ ಭದ್ರತಾ ಪಡೆಗೆ ಅಧಿಕಾರ ನೀಡಲು ಕೇಂದ್ರ ಸರ್ಕಾರವು ಕಳೆದ ತಿಂಗಳು ಬಿಎಸ್‌ಎಫ್ ಕಾಯ್ದೆಗೆ ತಿದ್ದುಪಡಿ ತಂದಿದೆ.ಕೇಂದ್ರ ಸರ್ಕಾರದ ಹೊಸ ತಿದ್ದುಪಡಿಗೆ ಪಂಜಾಬ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಈ ಸಂಬಂಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು.

"ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ನಾವು ಪತ್ರ ಬರೆದಿದ್ದೇವೆ. ಈ ಹಿಂದೆ, ಅವರು 15 ಕಿಮೀ ವ್ಯಾಪ್ತಿಯನ್ನು ಹೊಂದಿದ್ದರು, ಅದಾಗ್ಯೂ, ಬಲೂರ್‌ಘಾಟ್ ಅಥವಾ ಕೂಚ್ ಬೆಹಾರ್‌ನಲ್ಲಿ ಗುಂಡಿನ ದಾಳಿಯ ಘಟನೆಗಳು ನಡೆದಿದ್ದವು. ಈಗ ಅದನ್ನು 50 ಕಿ.ಮೀ.ಗೆ ವಿಸ್ತರಿಸಿದ್ದಾರೆ. ಇದು ದೇಶದ ಸಂಯುಕ್ತ ರಾಷ್ಟ್ರದ ರಚನೆಯಲ್ಲಿ ಹಸ್ತಕ್ಷೇಪ ಮಾಡುವ ಪ್ರಯತ್ನವಾಗಿದೆ," ಎಂದು ಬ್ಯಾನರ್ಜಿ ಅಕ್ಟೋಬರ್ 25ರಂದು ಆಡಳಿತಾತ್ಮಕ ಪರಿಶೀಲನಾ ಸಭೆಯಲ್ಲಿ ಹೇಳಿದ್ದರು.

 ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ನಿಯಂತ್ರಣ

ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ನಿಯಂತ್ರಣ

"ಕೇಂದ್ರ ಸರ್ಕಾರವು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ವ್ಯಾಪ್ತಿಯನ್ನು 15 ಕಿ.ಮೀ ನಿಂದ 50 ಕಿ.ಮೀ ವರೆಗೆ ವಿಸ್ತರಿಸುವ ನಿರ್ಧಾರವು ರಾಜ್ಯ ಪೊಲೀಸರು ಮತ್ತು ಪಂಜಾಬ್‌ನ ಜನರ ಮೇಲಿನ ಅಪನಂಬಿಕೆ ಸಂಕೇತವಾಗಿದೆ. ಇದರಿಂದ ರಾಜ್ಯದ ಪೊಲೀಸರಿಗೆ ಮತ್ತು ಜನರಿಗೆ ಅವಮಾನ ಮಾಡಿದಂತೆ ಆಗುತ್ತದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ಇಂತಹ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಕೇಂದ್ರ ಸರ್ಕಾರವು ರಾಜ್ಯದೊಂದಿಗೆ ಸಮಾಲೋಚನೆ ನಡೆಸಬೇಕಿತ್ತು. ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ನಿಯಂತ್ರಣದಲ್ಲಿದೆ. ಬಿಎಸ್‌ಎಫ್ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸುವ ಅಗತ್ಯವಿಲ್ಲ ಎಂದು ಹೇಳಲಾಗಿದೆ.

 ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿ

ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿ

ಗುಜರಾತ್‌ನಲ್ಲಿ ಬಿಎಸ್‌ಎಫ್ ಅಧಿಕಾರ ವ್ಯಾಪ್ತಿಯ ಪ್ರದೇಶವನ್ನು 80 ಕಿಮೀ ಪ್ರದೇಶದಿಂದ 50 ಕಿಮೀ‌ಗೆ ತಗ್ಗಿಸಲಾಗಿದೆ. ರಾಜಸ್ಥಾನದಲ್ಲಿ 50 ಕಿಮೀ ದೂರದಲ್ಲಿ ಹಾಗೆಯೇ ಉಳಿದಿದ್ದು, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರಾ, ಮಣಿಪುರ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಈ ಹಿಂದಿನಂತೆ ಯಾವುದೇ ಮಿತಿಯನ್ನು ನಿಗದಿಪಡಿಸಲಾಗಿಲ್ಲ. ಗಡಿ ಭದ್ರತಾ ಪಡೆ ಕಾಯಿದೆ, 1968ರ ಸೆಕ್ಷನ್ 139, ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು ಸೂಚಿಸಲು ಕೇಂದ್ರಕ್ಕೆ ಅಧಿಕಾರ ನೀಡುತ್ತದೆ. ಅಂತಹ ಯಾವುದೇ ಆದೇಶವನ್ನು ಸಂಸತ್ ಪ್ರತಿ ಸದನದ ಮುಂದೆ ಇಡಲಿದ್ದು, ಅದನ್ನು ಮಾರ್ಪಾಡು ಮಾಡುವ ಅಥವಾ ರದ್ದುಗೊಳಿಸುವ ಅಧಿಕಾರವನ್ನು ಸಂಸತ್ ಹೊಂದಿರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+