ಆ ಫೋಟೊ ಹತ್ರಾಸ್ ಸಂತ್ರಸ್ತೆಯದ್ದಲ್ಲ ನನ್ನ ಪತ್ನಿಯದ್ದು: ಹೈಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ
ನವದೆಹಲಿ, ಅಕ್ಟೋಬರ್ 16: ದೇಶಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ಹತ್ರಾಸ್ ಸಂತ್ರಸ್ತೆ ಎಂದು ಬಿತ್ತರವಾಗುತ್ತಿರುವ ಫೋಟೊ ನನ್ನ ಪತ್ನಿಯದ್ದು ಎಂದು ಹೇಳಿ ವ್ಯಕ್ತಿಯೊಬ್ಬ ನ್ಯಾಯಾಲಾಯದ ಮೆಟ್ಟಿಲೇರಿದ್ದಾರೆ.
ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ಘಟನೆಯ ಸಂತ್ರಸ್ತೆಯದ್ದು ಎಂದು ಹೇಳಿಕೊಂಡು ಕೆಲವೊಂದು ಛಾಯಾಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡು ಸಂತಾಪ ಸೂಚಿಸುವ ಭರದಲ್ಲಿ ಸಾಕಷ್ಟು ರಾದ್ಧಾಂತವೇ ನಡೆದಿವೆ.
ಹತ್ರಾಸ್ ಸಂತ್ರಸ್ತೆ ಎಂದು ಹೇಳಿಕೊಂಡು ಬಿತ್ತರ ಮಾಡಲಾಗುತ್ತಿರುವ ಚಿತ್ರ ಮೃತಪಟ್ಟಿರುವ ತನ್ನ ಮಡದಿಯದ್ದು ಎಂದು ಹೇಳಿರುವ ವ್ಯಕ್ತಿಯೊಬ್ಬರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಈ ಕುರಿತು ಗಮನ ಹರಿಸಲು ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಮಂತ್ರಾಲಯಕ್ಕೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.
ಒಂದು ವೇಳೆ ಈ ವ್ಯಕ್ತಿ ಹೇಳುತ್ತಿರುವ ಮಾತಿನಲ್ಲಿ ನಿಜಾಂಶ ಕಂಡುಬಂದರೆ, ಸಾಮಾಜಿಕ ಜಾಲತಾಣಗಳಿಗೆ ಈ ಸಂಬಂಧ ಅಗತ್ಯ ನಿರ್ದೇಶನಗಳನ್ನು ತ್ವರಿತವಾಗಿ ನೀಡಬೇಕೆಂದು ಕೋರ್ಟ್ ಇದೇ ವೇಳೆ ತಿಳಿಸಿದೆ.
ಭಾರತೀಯ ದಂಡಸಂಹಿತೆಯ 228ಎ ವಿಧಿ ಅನುಸಾರ ಅತ್ಯಾಚಾರ ಸಂತ್ರಸ್ತೆ ಎಂದು ಹೇಳಲಾದ ವ್ಯಕ್ತಿಯ ಹೆಸರನ್ನಾಗಲಿ, ಚಿತ್ರವನ್ನಾಗಲಿ ಎಲ್ಲೂ ಬಿತ್ತರ ಮಾಡುವಂತಿಲ್ಲ, ಆದರೂ ಕೂಡ ಈ ಬಗ್ಗೆ ಕ್ಯಾರೇ ಎನ್ನದೆ ಬಿತ್ತರ ಮಾಡಿಬಿಟ್ಟಿದೆ.
ಸೆಪ್ಟೆಂಬರ್ 14 ರಂದು 19 ವರ್ಷದ ಯುವತಿ ತನ್ನ ತಾಯಿ ಜೊತೆಯಲ್ಲಿ ಹೊಲಕ್ಕೆ ಹುಲ್ಲು ತರಲು ಹೋಗಿದ್ದಾಗ ನಾಲ್ವರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದರು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications