ಪುರುಷರ ಬಗ್ಗೆ ಮನೇಕಾ ಗಾಂಧಿ ಹೇಳಿಕೆಗೆ ತೀವ್ರ ವಿರೋಧ
ನವದೆಹಲಿ, ಸೆ. 15: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಅವರು 'ಎಲ್ಲ ಹಿಂಸೆಗಳಿಗೂ ಪುರುಷರೇ ಕಾರಣ' ಎಂದು ಹೇಳಿರುವುದು ಪುರುಷರ ಹಕ್ಕು ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿದೆ.
ಲಿಂಗ ಸಂವೇದನಾಶೀಲತೆಯಲ್ಲಿ ಪುರುಷರ ಪಾತ್ರವು ನಿರ್ಣಾಯಕವಾಗಿದೆ.ಶಾಲೆಗಳಲ್ಲಿ 'ಜೆಂಡರ್ ಚಾಂಪಿಯನ್ 'ಎಂಬ ಪರಿಕಲ್ಪನೆಯನ್ನು ನಾವು ಪರಿಚಯಿಸಿದ್ದು, ಇದರಡಿ ಹೆಣ್ಣುಮಕ್ಕಳನ್ನು ಗೌರವಿಸುವ ಮತ್ತು ಅವರಿಗೆ ನೆರವಾಗುವ ಹುಡುಗರಿಗೆ ಬಹುಮಾನಗಳನ್ನು ನೀಡಲಾಗುವುದು ಎಂದು ಮನೇಕಾ ಗಾಂಧಿ ಹೇಳಿದ್ದಾರೆ.
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಕಳೆದ ಜೂನ್ ತಿಂಗಳಿನಲ್ಲಿ 'ನಂ.100 ಮಹಿಳೆಯರು' ಅಭಿಯಾನ ಆರಂಭಿಸಿತ್ತು. ಇದರ ಅಂಗವಾಗಿ ಫೇಸ್ಬುಕ್ ಬಳಕೆದಾರರೊಂದಿಗೆ ನೇರ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವೆ ಮನೇಕಾ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ಮೇಲ್ಕಂಡ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.

ಅದರೆ, ಸಚಿವೆ ನೀಡಿದ ಉತ್ತರ ಅಸಮಾನತೆಯನ್ನು ಎತ್ತಿ ಹಿಡಿದ್ದಂತೆ ಇದೆ. ಸಚಿವೆ ಮನೇಕಾ ಅವರು ಕ್ಷಮೆಯಾಚಿಸಬೇಕು ಎಂದು ಸೇವ್ ಇಂಡಿಯನ್ ಫ್ಯಾಮಿಲಿ ಫೌಂಡೇಷನ್ (ಎಸ್ ಐಎಫ್ ಎಫ್) ಆಗ್ರಹಿಸಿದೆ.
ಸಚಿವೆಯ ಹೇಳಿಕೆ ಪರೋಕ್ಷವಾಗಿ ಮಹಿಳೆಯರಿಂದಾಗುವ ದೌರ್ಜನ್ಯವನ್ನು ಪ್ರೋತ್ಸಾಹಿಸಿದ್ದಂತಾಗುತ್ತದೆ. ಪ್ರತಿ 8 ನಿಮಿಷಕ್ಕೊಮ್ಮೆ ವಿವಾಹಿತ ಪುರುಷ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ಇದಕ್ಕೆ ಮಹಿಳೆಯಿಂದಾಗುವ ಕಿರುಕುಳವೇ ಕಾರಣ. ಈ ಬಗ್ಗೆ ಹೇಳಿಕೆ ನೀಡುವ ಮೊದಲು ಸಚಿವೆ ಮನೇಕಾ ಅಂಕಿ ಅಂಶಗಳನ್ನು ಪರಿಶೀಲಿಸಲಿ ಎಂದು ಸಂಸ್ಥೆ ಆಗ್ರಹಿಸಿದೆ.
ಸಂವಾದ ಕಾರ್ಯಕ್ರಮದಲ್ಲಿ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷತೆ, ಮಹಿಳೆಯರ ವಿರುದ್ಧ ಅಪರಾಧಗಳು ಮತ್ತು ಇತರ ರಾಜಕೀಯ ವಿಷಯಗಳ ಕುರಿತು ಪ್ರಶ್ನೆಗಳು ತೂರಿ ಬಂದಿದ್ದವಾದರೂ ಸಚಿವೆ ಕೆಲವೇ ಪ್ರಶ್ನೆಗಳಿಗೆ ಉತ್ತರಿಸಿದರು.
ಮಹಿಳೆಯರಿಗೆ ಪುರುಷರನ್ನು ಕೊಲ್ಲುವ ಹಕ್ಕು ಇದೆಯೆ?
ಸೇವ್ ಇಂಡಿಯಾ ಫ್ಯಾಮಿಲಿ ಫೌಂಡೇಷನ್ ನ ವಕ್ತಾರರಾದ ಜ್ಯೋತಿ ತಿವಾರಿ ಅವರು ಪ್ರತಿಕ್ರಿಯಿಸಿ, ಸಚಿವೆಯ ಹೇಳಿಕೆಯಿಂದ ಕ್ರಿಮಿನಲ್ ಮನಸ್ಸುಳ್ಳ ಮಹಿಳೆಯರಿಗೆ ಲೈಸನ್ಸ್ ಸಿಕ್ಕಿದ್ದಂತಾಗುತ್ತದೆ. ಪುರುಷರನ್ನು ಕೊಲ್ಲುವ ಹಕ್ಕು ಮಹಿಳೆಯರಿಗೆ ಇದೆ ಎಂಬ ಭಾವನೆ ಬರುತ್ತದೆ. ಬಾಲಕಿಯರು ಬಾಲಕರಿಗೆ ಹೊಡೆದರೆ ಏನು ಮಾಡುವುದು. ಎಲ್ಲಾ ಹುಡುಗರು ಕ್ರಿಮಿನಲ್ ಗಳು, ಹುಡುಗಿಯರು ಸಂತರು ಎಂದು ಸಚಿವೆ ಹೇಗೆ ಭಾವಿಸಿದರು? ಎಂದು ಪ್ರಶ್ನಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications