ಬಿಜೆಪಿಯವರು 'ಕೊಲೆಗಡುಕರು': ಮಣಿಶಂಕರ್ ಅಯ್ಯರ್ ಮತ್ತೊಂದು ವಿವಾದ
ನವದೆಹಲಿ, ಜನವರಿ 15: ವಿವಾದಾತ್ಮಕ ಹೇಳಿಕೆ ಮತ್ತು ನಡೆಗಳಿಂದ ಸುದ್ದಿಯಲ್ಲಿರುವ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ದೆಹಲಿಯ ಶಹೀನ್ ಬಾಘ್ನಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರತಿ ರಾತ್ರಿ 9.30ರಿಂದ ಬೆಳಗಿನವರೆಗೂ ನಡುಗುವ ಚಳಿಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರ ಗುಂಪಿಗೆ ಬೆಂಬಲ ಸೂಚಿಸಲು ತೆರಳಿದ್ದ ಮಣಿಶಂಕರ್ ಅಯ್ಯರ್, ಬಿಜೆಪಿಯನ್ನು 'ಕೊಲೆಗಡುಕರು' ಎಂದು ಕರೆಯುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.
'ದೇಶಕ್ಕಾಗಿ ಏನೇನು ತ್ಯಾಗದ ಅಗತ್ಯವಿದೆಯೋ ಅದನ್ನು ಮಾಡಲು ನಾನು ಸಿದ್ಧನಿದ್ದೇನೆ. ಯಾರ ಕೈ ಶಕ್ತಿಯುತವಾಗಿದೆ ಎಂದು ನಾವು ನೋಡೇ ಬಿಡುತ್ತೇವೆ. ನಮ್ಮದೋ ಅಥವಾ ಆ ಕೊಲೆಗಡುಕರದ್ದೋ' ಎಂದು ಮಂಗಳವಾರ ಪ್ರತಿಭಟನಾ ಸ್ಥಳದಲ್ಲಿ ಅವರು ಹೇಳಿದರು.

ಬಿಜೆಪಿ ಸರ್ಕಾರವು 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಎಂಬ ಘೋಷಣೆಯೊಂದಿಗೆ ಅಧಿಕಾರಕ್ಕೆ ಬಂದಿದೆ. ಆದರೆ ಅದೀಗ 'ಸಬ್ ಕಾ ಸಾಥ್ ಸಬ್ ಕಾ ವಿನಾಶ್' ಮಾಡುವುದರತ್ತ ಸಾಗುತ್ತಿದೆ ಎಂದು ಆರೋಪಿಸಿದರು.
'ಆರ್ಥಿಕತೆಯ ಕುಸಿತವನ್ನು ತಡೆದು ಸುಧಾರಣೆ ಮಾಡುವಂತಹ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರವು ಸಿಎಎ ಮತ್ತು ಎನ್ಆರ್ಸಿಯನ್ನು ಜಾರಿಗೆ ತಂದಿದೆ. ಆದರೆ ಅವರು ಜನರನ್ನು ಮತ್ತೆ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂಬುದನ್ನು ಶಹೀನ್ ಬಾಘ್ನಲ್ಲಿನ ಧೈರ್ಯಶಾಲಿ ಮಹಿಳೆಯರು ಅವರಿಗೆ ಮನವರಿಕೆ ಮಾಡಿದ್ದಾರೆ' ಎಂದು ಹೇಳಿದರು.
ಯಾವುದೇ ರಾಜಕೀಯ ಪಕ್ಷದ ಬೆಂಬಲವಿಲ್ಲದೆಯೇ ಪ್ರತಿಭಟನೆ ನಡೆಸುತ್ತಿರುವ ನೂರಾರು ಮಹಿಳೆಯರನ್ನು ಅಯ್ಯರ್ ಶ್ಲಾಘಿಸಿದರು. 'ನೀವು ಹೇಳಿದ್ದೀರಿ, ನಿಮಗೆ ಯಾವುದೇ ರಾಜಕಾರಣಿ ಬೇಕಿಲ್ಲ ಎಂದು. ನೀವು ಇಲ್ಲಿ ಕಳೆದ ಮೂವತ್ತು ದಿನಗಳಿಂದ ಮನೆ ಮತ್ತು ಒಲೆಯನ್ನು ಬಿಟ್ಟು ಬಂದು ಕೂರುತ್ತಿದ್ದೀರಿ' ಎಂದರು.
ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಮಣಿಶಂಕರ್ ಅಯ್ಯರ್, ದೇಶದ ನೈಜ ನಾಗರಿಕರು ದಾಖಲೆಗಳ ಪುರಾವೆಗಳನ್ನು ನೀಡಬೇಕು ಎಂದು ಒತ್ತಾಯಿಸಲು ಕೇಂದ್ರ ಸರ್ಕಾರಕ್ಕೆ ಯಾವುದೇ ಹಕ್ಕು ಇಲ್ಲ ಎಂದು ಹೇಳಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications