'ನೀಚ' ಎಂದ ಅಯ್ಯರ್ ಬಿಜೆಪಿಯ ಸ್ಟಾರ್ ಕ್ಯಾಂಪೇನರ್: ಟ್ವಿಟ್ಟಿಗರ ಗೇಲಿ
ನವದೆಹಲಿ, ಮೇ 14: ಪ್ರಧಾನಿ ನರೇಂದ್ರ ಮೋದಿ ಅವರನ್ನು 'ನೀಚ' ಎಂದು ಕರೆದ ತಮ್ಮ ನಡೆಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ವಿರುದ್ಧ ಟ್ವಿಟ್ಟರ್ ನಲ್ಲಿ ಸಾಕಷ್ಟು ಚರ್ಚೆ ಎದ್ದಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಅಂದು ನಾನು ನನ್ನ ಲೇಖನದಲ್ಲಿ ಏನೆಲ್ಲ ಬರೆದಿದ್ದೆನೋ ಅದೆಲ್ಲವನ್ನೂ ಸಮರ್ಥಿಸಿಕೊಳ್ಳುತ್ತೇನೆ, ಅದರ ಪ್ರತಿ ಪದವೂ ಸತ್ಯ" ಎಂದು ಮಣಿಶಂಕರ್ ಅಯ್ಯರ್ ಅವರು ಎಎನ್ ಐ ನ್ಯೂಸ್ ಏಜೆನ್ಸಿಗೆ ಹೇಳಿದ್ದರು. ಇದು ಮತ್ತೊಮ್ಮೆ ವಿವಾದ ಹೊತ್ತಿಸಿದ್ದು, ಕಾಂಗ್ರೆಸ್ ಮಾನ ಹರಾಜು ಹಾಕುವುದಕ್ಕೆ ಮಣಿಶಂಕರ್ ಅಯ್ಯರ್ ಒಬ್ಬರೇ ಸಾಕು ಎಂಬ ಮಾತುಗಳು ಕೇಳಿಬರುತ್ತಿವೆ.
ಮಣಿಶಂಕರ್ ಅಯ್ಯರ್ ಅವರು ಇಂಥ ಹೇಳಿಕೆ ನೀಡುವ ಮೂಲಕ ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಆಗಿದ್ದಾರೆ ಎಂದು ಮತ್ತಷ್ಟು ಜನ ಟ್ವಿಟ್ಟರ್ ನಲ್ಲಿ ಗೇಲಿ ಮಾಡಿದ್ದಾರೆ. ಕಾಂಗ್ರೆಸ್ ಈ ಬಗ್ಗೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
2017 ರ ಡಿಸೆಂಬರ್ ತಿಂಗಳಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅಯ್ಯರ್, "ಡಾ. ಬಿ. ಆರ್ ಅಂಬೇಡ್ಕರ್ ಅವರು ಕಂಡ ಕನಸನ್ನು ನನಸಾಗಿಸಲು ಶ್ರಮಿಸಿದವರಲ್ಲಿ ಜವಹರಲಾಲ್ ನೆಹರೂ ಅಗ್ರಗಣ್ಯರು. ದೇಶಕ್ಕಾಗಿ ದುಡಿದ ಇಂಥ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡುವ ಇಂಥ ವ್ಯಕ್ತಿ(ಮೋದಿ)ಯನ್ನು 'ನೀಚ' ಎನ್ನದೇ ಇರಲಾಗದು, ಆತನಿಗೆ ಯಾವುದೇ ನಾಗರಿಕ ಸಭ್ಯತೆಗಳಿಲ್ಲ. ಅತ್ಯಂತ ಹೀನಾಯ ರೀತಿಯ ರಾಜಕೀಯವನ್ನು ಅವರು ಮಾಡುತ್ತಿದ್ದಾರೆ ಎಂದಿದ್ದರು.
|
ಬಿಜೆಪಿ ಸ್ಟಾರ್ ಕ್ಯಾಂಪೇನರ್!
ಇವರು ನಾಲ್ಕು ಜನ ಬಿಜೆಪಿಯ ಅತ್ಯಂತ ಯಶಸ್ವೀ ತಅರಾ ಪ್ರಚಾರಕರು ಎಂದು ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಮತ್ತು ಅಮಿತ್ ಶಾ ಅವರ ಚಿತ್ರದೊಂದಿಗೆ ಮಣಿಶಂಕರ್ ಅಯ್ಯರ್ ಅವರ ಚಿತ್ರವನ್ನೂ ಪೋಸ್ಟ್ ಮಾಡಿ ಗೇಲಿ ಮಾಡಿದ್ದಾರೆ ಅಪರ್ಣಾ.
| Array |
ಕಾಂಗ್ರೆಸ್ ಗಾಗಿ ಪ್ರಾರ್ಥಿಸಿ
ಗುಜರಾತ್ ಚುನಾವಣೆಯ ಸಮಯದಲ್ಲಿ ಈ ಹೇಳಿಕೆ ನೀಡಿದ್ದ ಮಣಿಶಂಕರ್ ಅಯ್ಯರ್ ರಿಂದ ಕಾಂಗ್ರೆಸ್ ಎಮಥ ನಷ್ಟ ಅನುಭವಿಸಬೇಕಾಯ್ತು ಎಂಬುದು ಗೊತ್ತಿರುವ ವಿಷಯ. ಈಗ ಮತ್ತೆ ಅದೇ ತಪ್ಪು ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗಾಗಿ ಪ್ರಾರ್ಥಿಸಿ ಎಂದಿದ್ದಾರೆ ಶಿವಗಂಗಾಧರ್.
|
ಸ್ಯಾಮ್ ಪಿತ್ರೋಡಾ ಮುಖವಾಡ!
ಮಂನಿಶಂಕರ್ ಅಯ್ಯರ್ ಅವರು ಸ್ಯಾಮ್ ಪಿತ್ರೋಡಾ ಮುಖವಾಡ ಧರಿಸಿದ್ದಾರೆ-ಓಶೋ ರಾಜೇಶ್.
| Array |
ರಾಹುಲ್ ಭವಿಷ್ಯಕ್ಕೆ ಕೊಳ್ಳಿ!
ಸ್ಯಾಮ್ ಪಿತ್ರೋಡಾ ಈಗಾಗಲೇ ರಾಹುಲ್ ಗಾಂಧಿ ಆವರ ರಾಜಕು ಭವಿಷ್ಯಕ್ಕೆ ಹಾನಿಯುಂಟು ಮಾಡಿದ್ದಾರೆ. ಕೇವಲ ಸ್ಯಾಮ್ ಪಿತ್ರೋಡಾ ಒಬ್ಬರೇ ಆ ಕೆಲಸ ಮಾಡಿದರೆ ಸಾಲದು ಎಂಬಂತೆ ಮಣಿಶಂಕರ್ ಅಯ್ಯರ್ ಅವರೂ ಈಗ ಕೈಜೋಡಿಸುತ್ತಿದ್ದಾರೆ- ಅವಿನಾಶ್
|
ದೇಶಸೇವೆ ಮಾಡುತ್ತಿದ್ದಾರೆ
ಮಣಿಶಂಕರ್ ಅಯ್ಯರ್ ಚುನಾವಣೆಯ ಮೊದಲ ಹಂತದಲ್ಲೇ ಬರಬೇಕಿತ್ತು. ಏನೇ ಆಗಲಿ, ಅವರು ಕಾಂಗ್ರೆಸ್ಸಿಗೆ ಹಾನಿ ಮಾಡುವ ಮೂಲಕ ದೇಶಸೇವೆ ಮಾಡುತ್ತಿದ್ದಾರೆ- ತ್ರಿಪಾಟಿ ದೇವ್
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications