ಲೋಕಸಭೆಯಲ್ಲಿ ಸಿದ್ದಾರ್ಥ ಸಾವಿನ ಬಗ್ಗೆ ಚರ್ಚೆಗೆ ತಿವಾರಿ ಆಗ್ರಹ
ನವದೆಹಲಿ, ಜುಲೈ 31: "ಕೆಫೆ ಕಾಫಿ ಡೇ ಮಾಲೀಕ, ಉದ್ಯಮಿ ವಿ..ಜಿ.ಸಿದ್ಧಾರ್ಥ ಅವರ ಸಾವಿಗೆ ಐಟಿ ಇಲಾಖೆಯ ಕಿರುಕುಳ ಕಾರಣವಾಗಿರಬಹುದು" ಎಂಬ ಸಂಶಯ ಹರಡುತ್ತಿದೆ. ಈ ಬಗ್ಗೆ ಕೂಡಲೇ ತನಿಖೆಗೆ ಆದೇಶಿಸಬೇಕು. ಈ ಬಗ್ಗೆ ಸದನದಲ್ಲಿ ಚರ್ಚೆ ಮಾಡಲು ಅವಕಾಶ ನೀಡಬೇಕು ಎಂದು ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರಲ್ಲಿ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಕೇಳಿಕೊಂಡಿದ್ದಾರೆ.
ಸಿದ್ದಾರ್ಥ ಬರೆದಿರುವ ಪತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಐಟಿ ಇಲಾಖೆಯ ಕಾರ್ಯನಿರ್ವಹಣೆ ಈ ಸಂಶಯವನ್ನು ಇನ್ನಷ್ಟು ಪುಷ್ಠೀಕರಿಸುತ್ತದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಲೇಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಟ್ವೀಟ್ ಮಾಡಿ, "ವಿಜಿ ಸಿದ್ದಾರ್ಥ ಅವರ ಸಾವಿನ ಹಿಂದೆ ಐಟಿ ಇಲಾಖೆ ಕಿರುಕುಳ ಇರಬಹುದು ಎಂಬ ಅನುಮಾನಕ್ಕೆ ಉತ್ತರ ಸಿಗಬೇಕಿದೆ, ನವೋದ್ಯಮದಾರರಿಗೆ ಇದರಿಂದ ಯಾವ ಸಂದೇಶ ಹೊರ ಬರಲಿದೆ?" ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ರಾಜ್ಯಸಭೆಯಲ್ಲೂ ವಿ.ಜಿ ಸಿದ್ದಾರ್ಥ ಸಾವಿನ ಬಗ್ಗೆ ಕಾಂಗ್ರೆಸ್ ನಾಯಕರು ದನಿ ಎತ್ತಿದ್ದಾರೆ. ರಾಜ್ಯಸಭಾ ಸದಸ್ಯ ಬಿ.ಕೆ ಹರಿಪ್ರಸಾದ್ ಮಾತನಾಡಿ, 'ತೆರಿಗೆ ಭಯೋತ್ಪಾದನೆಗೆ ಸಿದ್ದಾರ್ಥ ಬಲಿಯಾಗಿದ್ದಾರೆ, ದೇಶದಲ್ಲಿ ಉದ್ಯಮಿಗಳನ್ನು ತೆರಿಗೆ ಇಲಾಖೆ ಯಾವ ರೀತಿ ಹಿಂಸೆ ಮಾಡುತ್ತಿದೆ ಎಂಬುದಕ್ಕೆ ಸಿದ್ದಾರ್ಥ ಸಾವು ನಿದರ್ಶನ' ಎಂದಿದ್ದಾರೆ.

ಕಾಫಿ ಡೇ ಮಾಲೀಕ ಸಿದ್ದಾರ್ಥ ಸಾವಿನ ಸೂತಕದಲ್ಲಿ ಚಿಕ್ಕಮಗಳೂರಿನ ಕಾಫಿ ಡೇ ಸಂಸ್ಥೆ ತುಂಬಿದೆ. ಪ್ರತಿಷ್ಠಿತ ಎಬಿಸಿ ಕಂಪನಿ ಸೇರಿದಂತೆ ಸೇರಾಯ್ ರೆಸಾರ್ಟ್, ಅಂಬರ್ ವ್ಯಾಲಿ ಶಾಲೆ, ವಿ.ಟಿ.ಸಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಎಸ್ಟೇಟ್ ಕೆಲಸಕ್ಕೆ ಅಗಮಿಸಿದ ಸಾವಿರಾರು ಕಾರ್ಮಿಕರನ್ನು ವಾಪಸ್ ಕಳುಹಿಸಲಾಗಿದೆ. ಹಲವೆಡೆ ಶೋಕಾಚರಣೆಯಿಂದ ಅಘೋಷಿತ ಬಂದ್ ಆಚರಿಸಲಾಗುತ್ತಿದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications