ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಚ್ಚರಿ ಮೂಡಿಸಿದ ಶೀಲಾ ಹೇಳಿಕೆ: ಉಗ್ರರ ವಿಚಾರದಲ್ಲಿ ಸಿಂಗ್‌ಗಿಂತ ಮೋದಿ ಬಲ

|
Google Oneindia Kannada News

ನವದೆಹಲಿ, ಮಾರ್ಚ್ 14: ಭಯೋತ್ಪಾದನೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಷ್ಟು ಕಠಿಣ ನಿಲುವುಗಳನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತೆಗೆದುಕೊಂಡಿರಲಿಲ್ಲ ಎಂದು ಹೇಳುವ ಮೂಲಕ ದೆಹಲಿಯ ಕಾಂಗ್ರೆಸ್ ಮುಖ್ಯಸ್ಥೆ ಶೀಲಾ ದೀಕ್ಷಿತ್ ಪಕ್ಷವನ್ನು ಮುಜುಗರಕ್ಕೆ ಸಿಲುಕಿಸಿದ್ದಾರೆ.

ನ್ಯೂಸ್ 18 ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರಿಗೆ 26/11ರ ಮುಂಬೈ ದಾಳಿಯ ವಿಚಾರದಲ್ಲಿ ಯುಪಿಎ ಸರ್ಕಾರದ ನಿಲುವಿನ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಅದಕ್ಕೆ ಅವರು, 'ಭಯೋತ್ಪಾದನೆ ಎದುರಿಸುವಲ್ಲಿ ಈಗಿನ ಪ್ರಧಾನಿಯಷ್ಟು ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಶಕ್ತಿಯುತರಾಗಿಲಿಲ್ಲ ಎಂಬುದನ್ನು ಒಪ್ಪಿಕೊಳ್ಳಬೇಕಾಗುತ್ತದೆ' ಎಂದಿದ್ದಾರೆ.

ಅಜರ್ ಬಿಡುಗಡೆ ಮಾಡಿದ್ದರಿಂದಲೇ ದಾಳಿ: ಬಿಜೆಪಿ ವಿರುದ್ಧ ದಿಗ್ವಿಜಯ್ ಆರೋಪ ಅಜರ್ ಬಿಡುಗಡೆ ಮಾಡಿದ್ದರಿಂದಲೇ ದಾಳಿ: ಬಿಜೆಪಿ ವಿರುದ್ಧ ದಿಗ್ವಿಜಯ್ ಆರೋಪ

ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ಹೆಚ್ಚಿನ ನಿರ್ಧಾರಗಳು ರಾಜಕೀಯ ಲಾಭದ ಉದ್ದೇಶ ಹೊಂದಿದ್ದವು ಎಂದೂ ಅವರು ಟೀಕಿಸಿದ್ದಾರೆ.

manmohan singh was not tough dealing terrorism as modi sheila dikshit

2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ 150ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಮುಂಬೈನ ತಾಜ್ ಹೋಟೆಲ್ ಮತ್ತು ಇತರೆ ಸ್ಥಳಗಳಲ್ಲಿ ಉಗ್ರರು ಮನಬಂದಂತೆ ಗುಂಡು ಹಾರಿಸಿ ಜನರನ್ನು ಹತ್ಯೆ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಮನಮೋಹನ್ ಸಿಂಗ್ ಸರ್ಕಾರ ಯಾವುದೇ ಸೇನಾ ಕಾರ್ಯಾಚರಣೆ ನಡೆಸಲು ಮುಂದಾಗಿರಲಿಲ್ಲ.

'ಮಸೂದ್ ಅಜರ್ ಜೀ' ಹೇಳಿಕೆ ರಾಹುಲ್ ಗಾಂಧಿ ವಿರುದ್ಧ ದೂರು'ಮಸೂದ್ ಅಜರ್ ಜೀ' ಹೇಳಿಕೆ ರಾಹುಲ್ ಗಾಂಧಿ ವಿರುದ್ಧ ದೂರು

ಇದರಿಂದ ಗಡಿಯಾಚೆಗಿನ ಭಯೋತ್ಪಾದನೆ ತಗ್ಗುವುದಿಲ್ಲ ಮತ್ತು ಪಾಕಿಸ್ತಾನದೊಂದಿಗಿನ ರಾಜಕೀಯ ವಿವಾದಗಳು ಬಗೆಹರಿಯುವುದಿಲ್ಲ ಎಂದು ಆಗಿನ ಸರ್ಕಾರ ಪ್ರತಿಪಾದಿಸಿತ್ತು.

ನೂರಾರು ಜೈಷ್ ಉಗ್ರರು ಹತ್ಯೆಯಾಗಿದ್ದಕ್ಕೆ ಸಿಕ್ಕಿದೆ ಬಲವಾದ ಸಾಕ್ಷ್ಯ! ನೂರಾರು ಜೈಷ್ ಉಗ್ರರು ಹತ್ಯೆಯಾಗಿದ್ದಕ್ಕೆ ಸಿಕ್ಕಿದೆ ಬಲವಾದ ಸಾಕ್ಷ್ಯ!

ಪ್ರಧಾನಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ಸೇನಾ ಪಡೆಯು ಪಾಕಿಸ್ತಾನದ ನೆಲೆಯ ಮೇಲೆ ಎರಡು ಬಾರಿ ದಾಳಿ ನಡೆಸಿದೆ. 2016ರಲ್ಲಿ ಉರಿ ದಾಳಿಯ ಬಳಿಕ ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಸರ್ಜಿಕಲ್ ದಾಳಿ ನಡೆಸಿತ್ತು. ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ಉಗ್ರರ ದಾಳಿ ಬಳಿಕ ಪಾಕಿಸ್ತಾನದ ಬಾಲಕೋಟ್‌ನಲ್ಲಿ ಉಗ್ರರ ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸಿತ್ತು.

English summary
Delhi Congress chief Sheila Dikshit said, "It has to be agreed that Manmohan Singh was not as strong in dealing with terrorism as the current prime minister is."
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X