ದೆಹಲಿ: ಕಿರಾರಿ ಪ್ರದೇಶದಲ್ಲಿ ಬೆಂಕಿ ಅನಾಹುತಕ್ಕೆ 9 ಮಂದಿ ಸಾವು
ನವದೆಹಲಿ, ಡಿಸೆಂಬರ್ 23: ದೆಹಲಿಯ ವಾಯುವ್ಯ ಭಾಗದ ಕಿರಾರಿ ಪ್ರದೇಶದಲ್ಲಿ ಸೋಮವಾರದಂದು ಭಾರಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಬೆಂಕಿ ಅನಾಹುತಕ್ಕೆ 9 ಮಂದಿ ಮೃತರಾಗಿದ್ದು, 10ಕ್ಕೂ ಅಧಿಕ ಮಂದಿಗೆ ತೀವ್ರಗಾಯಗಳಾಗಿವೆ.
ಬಟ್ಟೆಗಳನ್ನು ದಾಸ್ತಾನು ಮಾಡಿದ್ದ ವೇರ್ ಹೌಸ್ ನಲ್ಲಿ ತಡರಾತ್ರಿ 1 ಗಂಟೆ ನಂತರ ಬೆಂಕಿ ಕಾಣಿಸಿಕೊಂಡಿದೆ. ಮೂರಂಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಮೊದಲಿಗೆ ಕಂಡು ಬಂದಿದ್ದು, ಬೆಂಕಿ ನಂದಿಸಲು ಯಾವುದೇ ಸಾಧನಗಳನ್ನು ವೇರ್ ಹೌಸ್ ಹೊಂದಿರಲಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ, ತುರ್ತು ನಿರ್ಗಮನ ವ್ಯವಸ್ಥೆಯೂ ಇಲ್ಲದೆ, ಒಂದೇ ಕಡೆ ಮೆಟ್ಟಿಲುಗಳಿರುವುದು ಕಂಡು ಬಂದಿದೆ.
Delhi: Three people have died and 10 have been injured after a fire broke out in a cloth godown in Kirari at around 12:30 am, today. The fire has been doused and the injured have been admitted to hospital. pic.twitter.com/VDDQW0STAk
— ANI (@ANI) December 22, 2019
ಈ ಘಟನೆಯಲ್ಲಿ ಗಾಯಗೊಂಡವರನ್ನು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ.

ಇತ್ತೀಚೆಗೆ ಉತ್ತರ ದೆಹಲಿಯಲ್ಲಿ ಉತ್ಪಾದನಾ ಘಟಕವೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ 43ಕ್ಕೂ ಅಧಿಕ ಮಂದಿ ಮೃತಪಟ್ಟ ಘಟನೆ ನಡೆದಿತ್ತು.
ಮುಂಬೈನಲ್ಲಿ ಅಗ್ನಿ ಅವಘಡ
ಮುಂಬೈನಲ್ಲಿ ಲಾಭ್ ಶ್ರೀವಳ್ಳಿ ಹೆಸರಿನ ಬಹುಮಹಡಿ ಕಟ್ಟಡದ 7 ಹಾಗೂ 8ನೇ ಮಹಡಿಯಲ್ಲಿ ಭಾನುವಾರ ರಾತ್ರಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಅಪಾಯದಲ್ಲಿ ಸಿಲುಕಿದ್ದ ನಾಲ್ವರನ್ನು ರಕ್ಷಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications