ದೇಶದಲ್ಲಿ ಭಯೋತ್ಪಾದನೆ ಹರಡುತ್ತಿರುವವರಲ್ಲಿ ವಿದ್ಯಾವಂತರ ಪಾತ್ರ ಹೆಚ್ಚು:ಮೋದಿ
ನವದೆಹಲಿ,ಫೆಬ್ರವರಿ 19: ದೇಶದೆಲ್ಲೆಡೆ ಭಯೋತ್ಪಾದನೆ,ಹಿಂಸಾಚಾರ ಹರಡುತ್ತಿರುವವರಲ್ಲಿ ವಿದ್ಯಾವಂತರ ಪಾತ್ರವೇ ಹೆಚ್ಚಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡಿದ ಪ್ರಧಾನಿ ಮಂತ್ರಿ ಮೋದಿ, ನಿಮ್ಮ ಮನಸ್ಸು ಸಕಾರಾತ್ಮಕವಾಗಿದೆಯೇ, ಋಣಾತ್ಮಕವಾಗಿದೆಯೇ ಎಂಬುದರ ಮೇಲೆ ನೀವು ಮಾಡುವ ಕೆಲಸ ಅವಲಂಬಿತವಾಗಿರುತ್ತದೆ.
ಇಲ್ಲಿ ಇಬ್ಬರಿಗೂ ಅವಕಾಶವಿದೆ. ಒಂದೆಡೆ ಭಯೋತ್ಪಾದನೆ ಮತ್ತು ಹಿಂಸೆಯನ್ನು ಜಗತ್ತಿನಾದ್ಯಂತ ಹಬ್ಬಿಸುವ ಕಾರ್ಯದಲ್ಲಿ ಅಧಿಕ ವಿದ್ಯಾವಂತರು, ಕೌಶಲ್ಯವಂತರು ನಿರತರಾಗಿದ್ದಾರೆ. ಮತ್ತೊಂದೆಡೆ, ಇನ್ನೊಂದು ವರ್ಗದ ಜನರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಆಸ್ಪತ್ರೆಗಳಲ್ಲಿ, ಪ್ರಯೋಗಾಲಯಗಳಲ್ಲಿ ಕೋವಿಡ್-19 ಸೋಂಕಿನಿಂದ ಜನರನ್ನು ರಕ್ಷಿಸಲು ಸೇವಾ ನಿರತರಾಗಿದ್ದಾರೆ. ಇದು ಅವರ ತತ್ವ, ಸಿದ್ಧಾಂತಗಳನ್ನು ತೋರಿಸುತ್ತಿಲ್ಲ, ಬದಲಿಗೆ ಮನೋಧರ್ಮವನ್ನು ಹೇಳುತ್ತದೆ ಎಂದರು.

ಆತ್ಮನಿರ್ಭರ ಭಾರತ ನಿರ್ಮಾಣದಲ್ಲಿ ಹೊಸ ಶಿಕ್ಷಣ ನೀತಿ ಪ್ರಮುಖ ಹೆಜ್ಜೆಯಾಗಿದೆ. ಸಂಶೋಧನೆ ಮತ್ತು ನಾವೀನ್ಯತೆಗೆ ಅದು ಶಕ್ತಿಯನ್ನು ನೀಡುತ್ತದೆ. ಲಿಂಗ ಸೇರ್ಪಡೆ ನಿಧಿಯನ್ನು ಹೊಂದಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ 'ಆತ್ಮನಿರ್ಭರ ಭಾರತ ಕಡೆಗೆ ಪ್ರಮುಖ ಹೆಜ್ಜೆಯಾಗಿದೆ ಎಂದರು.
ಎರಡೂ ಗುಣದ ವ್ಯಕ್ತಿಗಳಿಗೆ ದಾರಿಯಿದೆ. ನಾವು ಸಮಸ್ಯೆಯ ಭಾಗವಾಗಬೇಕೆ ಅಥವಾ ಪರಿಹಾರ ಹುಡುಕುವವರಾಗಬೇಕೆ ಎಂಬುದನ್ನು ತೀರ್ಮಾನಿಸುವುದು ನಮ್ಮ ಕೈಯಲ್ಲಿದೆ ಎಂದರು.
-
ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
CBSE 10ನೇ ತರಗತಿ ಫಲಿತಾಂಶ 2026: ನಾಳೆ ಪ್ರಕಟಗೊಳ್ಳಲಿದೆಯೇ ರಿಸಲ್ಟ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ -
CBSE ಫಲಿತಾಂಶಕ್ಕಾಗಿ ಕಾಯಬೇಡಿ: ಈಗಲೇ ನಿಮ್ಮ ಡಿಜಿಲಾಕರ್ ಖಾತೆ ತೆರೆಯಿರಿ, ಕ್ಷಣಾರ್ಧದಲ್ಲಿ ರಿಸಲ್ಟ್ ಪಡೆಯಿರಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications