ಮಸೂದ್ ಅಜರ್ ಜಾಗತಿಕ ಉಗ್ರ ಪಟ್ಟಕ್ಕೆ ಪಾಕ್ ಪ್ರತಿಕ್ರಿಯೆ ಏನು?
ನವದೆಹಲಿ, ಮೇ 2: ಜೈಷ್-ಎ-ಮೊಹಮ್ಮದ್ ಉಗ್ರ ಮಸೂದ್ ಅಜರ್ಗೆ ವಿಶ್ವಸಂಸ್ಥೆಯು ಜಾಗತಿಕ ಉಗ್ರ ಎಂಬ ಪಟ್ಟ ನೀಡುತ್ತಿದ್ದಂತೆ ಪಾಕಿಸ್ತಾನ ಪೇಚಿಗೆ ಸಿಲುಕಿದೆ.
ಜೈಷ್-ಎ-ಮೊಹಮ್ಮದ್ ಮಸೂದ್ ಅಜರ್ ಹಾಗೂ ಇನ್ನಿತರೆ ಉಗ್ರ ಸಂಘಟನೆಗಳನ್ನು ರಕ್ಷಿಸಿಕೊಳ್ಳುತ್ತಿದ್ದ ಪಾಕಿಸ್ತಾನಕ್ಕೆ ಹೇಗೆ ಪ್ರತಿಕ್ರಿಯಿಸಬೇಕೆಂಬುದೇ ತಿಳಿಯದಾಗಿದೆ.
ಚೀನಾ ಕೂಡ ಪಾಕಿಸ್ತಾನದ ಜೊತೆ ನಿಲ್ಲದ ಕಾರಣದಿಂದ ಉಗ್ರ ಮಸೂದ್ ಅಜರ್ ಬಗ್ಗೆ ಪಾಕಿಸ್ತಾನ ತನ್ನ ಹೇಳಿಕೆಯನ್ನು ಬದಲಿಸಿ ವಿಶ್ವಸಂಸ್ಥೆಯ ನಿರ್ಬಂಧದ ಅನುಗುಣವಾಗಿ ಯಾವ ಕ್ರಮ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಳ್ಳಲಿದೆ ಎಂದಷ್ಟೇ ಹೇಳಿಕೊಂಡಿದೆ.
ಪಾಕಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರ ಪ್ರತಿಕ್ರಿಯೆ ಪ್ರಕಾರ ವಿಶ್ವಸಂಸ್ಥೆಯ ನಿರ್ಧಾರದಂತೆ ನಡೆಸುಕೊಳ್ಳಲಾಗುವುದು, ಪಾಕಿಸ್ತಾನ ಸರ್ಕಾರವು ಭಯೋತ್ಪಾದನೆ ಹಾಗೂ ಉಗ್ರ ಸಂಘಟನೆಗಳ ವಿರುದ್ಧ ಮೊದಲಿನಂದಲೂ ಕ್ರಮ ತೆಗೆದುಕೊಂಡಿದೆ.

ಹೊಸ ಸರ್ಕಾರದ ಅವಧಿಯಲ್ಲಿ ಪಾಕಿಸ್ತಾನದಲ್ಲಿ ಯಾವುದೇ ಉಗ್ರ ಸಂಘಟನೆಗಳ ಚಟುವಟಿಕೆಗಳಿಗೆ ಅವಕಾಶವೇ ಇಲ್ಲ ಎಂಬ ಹಳೆಯ ಹೇಳಿಕೆಯನ್ನು ಮುಂದುವರೆಸಿದ್ದಾರೆ. ಪುಲ್ವಾಮಾ ದಾಳಿ ಬಳಿಕವೂ ಇದೇ ರೀತಿ ಹೇಳಿಕೆ ನೀಡಿ ಜೈಷ್ ಸಂಘಟನೆ ಅಸ್ತಿತ್ವ ಹಾಗೂ ಉಗ್ರ ಮಸೂದ್ ಅಜರ್ನ ಚಟುವಟಿಕೆಗಳ ಬಗ್ಗೆ ಇದೇ ರೀತಿಯ ಸುಳ್ಳುಗಳನ್ನು ಪಾಕಿಸ್ತಾನ ಹೇಳಿತ್ತು.
ಜೈಷ್ ಎ ಮೊಹಮ್ಮದ್ ಸಂಘಟನೆ ಶಿಕ್ಷಣ ಸಂಸ್ಥೆಗಳನ್ನು ಮಾತ್ರ ನಡೆಸುತ್ತದೆ ಎಂದು ಜಾಗತಿಕ ಮಾಧ್ಯಮಗಳಿಗೆ ತಿಳಿಸುವ ಪ್ರಯತ್ನವನ್ನೂ ಮಾಡಿತ್ತು. ಪಾಕಿಸ್ತಾನಿ ಮೂಲದ ಉಗ್ರ ಮಸೂದ್ ಅಜರ್ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಘೋಷಿಸಿದೆ.
ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ನಾಯಕ ಮಸೂದ್ ಅಜರ್, ಫೆಬ್ರವರಿ 14 ರಂದು ನಡೆದ ಪುಲ್ವಾಮಾ ದಾಳಿಯ ಸಂಚುಕೋರನಾಗಿದ್ದ ಎಂಬುದು ತಿಳಿಯುತ್ತಿದ್ದಂತೆಯೇ ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಿ, ಆತನನ್ನು ಜಾಗತಿಕ ಉಗ್ರ ಎಂದು ಘೋಷಿಸುವಂತೆ ವಿಶ್ವಸಂಸ್ಥೆಗೆ ಮನವಿ ಮಾಡಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications