Get Updates
Get notified of breaking news, exclusive insights, and must-see stories!

ಉಗ್ರರ ನಿಗ್ರಹ ಕಾಯ್ದೆಯಡಿ ಮಹತ್ವದ ಘೋಷಣೆ ಮಾಡಿದ ಕೇಂದ್ರ

ನವದೆಹಲಿ, ಸೆಪ್ಟೆಂಬರ್ 4: ಮುಂಬೈ ದಾಳಿಯ ಪ್ರಮುಖ ಸಂಚುಕೋರ, ಲಷ್ಕರ್ ಎ ತಯಬಾ ಮುಖ್ಯಸ್ಥ ಹಫೀಜ್ ಮುಹಮ್ಮದ್ ಸಯೀದ್ ಮತ್ತು ಜೈಶ್ ಎ ಮೊಹಮ್ಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್‌ನನ್ನು ನೂತನ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿ ಭಯೋತ್ಪಾದಕರೆಂದು ಭಾರತ ಸರ್ಕಾರ ಬುಧವಾರ ಘೋಷಿಸಿದೆ.

ಭಾರತದ ಮೋಸ್ಟ್ ವಾಂಟೆಡ್ ಉಗ್ರರಾದ ದಾವೂದ್ ಇಬ್ರಾಹಿಂ ಮತ್ತು ಜಕೀರ್ ಉರ್ ರೆಹಮಾನ್ ಅವರನ್ನೂ ಭಯೋತ್ಪಾದಕರೆಂದು ಘೋಷಿಸಲಾಗಿದೆ.

1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆ) ತಿದ್ದುಪಡಿ ಕಾಯ್ದೆಗೆ ಮಹತ್ವದ ತಿದ್ದುಪಡಿ ತಂದ ಒಂದು ತಿಂಗಳ ಬಳಿಕ ಮೊದಲ ಘೋಷಣೆ ಮಾಡಲಾಗಿದೆ. ಇದುವರೆಗೂ ಯಾವುದೇ ಭಯೋತ್ಪಾದಕನನ್ನು 'ಉಗ್ರ' ಎಂದು ಗುರುತಿಸಲು ಕಾನೂನಿನ ಅಡಿ ಅವಕಾಶವಿರಲಿಲ್ಲ. ಸಂಘಟನೆಗಳನ್ನು ಮಾತ್ರ ಭಯೋತ್ಪಾದನಾ ಸಂಘಟನೆಗಳೆಂದು ಗುರುತಿಸಲು ಅವಕಾಶವಿತ್ತು. ಮುಂಗಾರು ಅಧಿವೇಶನದಲ್ಲಿ ಈ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಭಯೋತ್ಪಾದಕರೆಂದು ಘೋಷಿಸಲು ಅವಕಾಶ ನೀಡಲಾಗಿತ್ತು.

Masood Azhar, Hafiz Saeed, Dawood Ibrahim Terrorists UAPA Act

ಮೌಲಾನಾ ಮಸೂದ್ ಅಜರ್ ಭಯೋತ್ಪಾದನೆಯಲ್ಲಿ ಪಾಲ್ಗೊಂಡಿದ್ದು, ಈ ಕಾಯ್ದೆಯ ಅಡಿಯಲ್ಲಿ ಆತನನ್ನು ಭಯೋತ್ಪಾದಕ ಎಂದು ಗುರುತಿಸಲಾಗಿದೆ. ಹಾಗೆಯೇ ಉಳಿದವರನ್ನು ಕೂಡ ಈ ಪಟ್ಟಿಯಲ್ಲಿ ಸೇರಿಸಲಾಗಿದೆ. ಎಲ್ಲ ನಾಲ್ವರು ಉಗ್ರರ ವಿರುದ್ಧ ರೆಡ್ ಕಾರ್ನರ್ ನೋಟಿಸ್‌ಗಳನ್ನು ಜಾರಿಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಪಟ್ಟಿಯಲ್ಲಿ ಇನ್ನಷ್ಟು ಹೆಸರುಗಳು ಸೇರ್ಪಡೆಯಾಗಲಿವೆ ಎಂದು ಸರ್ಕಾರ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+