ಸೋಲಿನ ಕಹಿಯುಂಡು, ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಜಯ್
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು, ದಿಲ್ಲಿ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಕೇಂದ್ರ ಸಚಿವ ಅಜಯ್ ಮಾಕೇನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ನವೆದೆಹಲಿ, ಏಪ್ರಿಲ್ 26: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು, ದಿಲ್ಲಿ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಕೇಂದ್ರ ಸಚಿವ ಅಜಯ್ ಮಾಕೇನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ಎಲ್ಲೆಡೆ ಜಯಭೇರಿ ಬಾರಿಸಿದ್ದಾರೆ, ಎಎಪಿ ಎರಡನೇ ಸ್ಥಾನದಲ್ಲಿದ್ದು, ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಕುಸಿದಿದೆ.

ಈ ಹಿನ್ನೆಲೆಯಲ್ಲಿ ಅಜಯ್ ಮಾಕೇನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
Take responsibility for defeat and I am going to resign as Delhi Congress President: Ajay Maken #MCDelections2017 pic.twitter.com/mNzEiCq5CU
— ANI (@ANI_news) April 26, 2017
ಮುಂದಿನ ಒಂದು ವರ್ಷಗಳ ಕಾಲ ಯಾವುದೇ ಉನ್ನತ ಹುದ್ದೆಯ ಜವಾಬ್ದಾರಿವಹಿಸಿಕೊಳ್ಳುವುದಿಲ್ಲ, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುವುದಾಗಿ ಹೇಳಿದ್ದಾರೆ.
ದೆಹಲಿ ಕ್ಷೇತ್ರದಿಂದ ಮೂರು ಬಾರಿ 1993,1998,2003ರಲ್ಲಿ ಅಸೆಂಬ್ಲಿಗೆ ಆಯ್ಕೆಯಾಗಿದ್ದರು. 1999ರಲ್ಲಿ ದೆಹಲಿ ಸಿಎಂ ಶೀಲಾ ದೀಕ್ಷಿತ್ ಅವರಿಗೆ ಸಂಸದೀಯ ಕಾರ್ಯದರ್ಶಿಯಾಗಿದ್ದರು.
ಸಾರಿಗೆ ಹಾಗೂ ಇಂಧನ ಸಚಿವರಾಗಿದ್ದಾಗ ಸಿಎನ್ ಜಿ ಅನುಷ್ಠಾನಗೊಳಿಸಿ, ಖಾಸಗೀಕರಣ, ದೆಹಲಿಯ ವಿದ್ಯುತ್ ಪೂರೈಕೆಗೆ ಹೊಸ ಮಾರ್ಗ ತೋರಿಸಿದರು. 39 ವರ್ಷಕ್ಕೆ ಅಸೆಂಬ್ಲಿ ಸ್ಪೀಕರ್ ಆಗಿದ್ದವರು.
2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ವಕೀಲೆ ಮೀನಾಕ್ಷಿ ಲೇಖಿ ಅವರಿಂದ ಸೋಲು ಕಂಡ ಮಾಕೇನ್ ಮುಂದೆ ಒಳ್ಳೆ ದಿನಗಳನ್ನು ಕಾಣಲಿಲ್ಲ. 2015ರಲ್ಲಿ ದೆಹಲಿಯಲ್ಲಿ ಎಎಪಿ ಅಧಿಪತ್ಯ ಆರಂಭಗೊಳ್ಳುತ್ತಿದ್ದಂತೆ ರಾಜೀನಾಮೆ ನೀಡಿದ್ದರು. ಈಗ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications