ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ
ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆ ಭಾನುವಾರ (ಏ 23) ಮುಕ್ತಾಯಗೊಂಡಿದೆ. ಮತಗಟ್ಟೆ ಸಮೀಕ್ಷೆಯ ಪ್ರಕಾರ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದೆ.
ಬಹುನಿರೀಕ್ಷಿತ ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆ ಭಾನುವಾರ (ಏ 23) ಮುಕ್ತಾಯಗೊಂಡಿದೆ. 2012ರಲ್ಲಿ ಶೇ. 53.9 ಮತದಾನವಾಗಿದ್ದರೆ, ಭಾನುವಾರ ನಡೆದ ಚುನಾವಣೆಯಲ್ಲಿ ಶೇ. 54 ಮತದಾನವಾಗಿದೆ.
272 ಸ್ಥಾನವನ್ನು ಹೊಂದಿರುವ ದೆಹಲಿ (ಉತ್ತರ ಮತ್ತು ದಕ್ಷಿಣ ದೆಹಲಿ ತಲಾ 104, ಪೂರ್ವ ದೆಹಲಿ 64 ಸ್ಥಾನ) ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯ ಫಲಿತಾಂಶ ಬುಧವಾರ (ಏ 26) ಹೊರಬೀಳಲಿದೆ.
ಈ ನಡುವೆ ವಿವಿಧ ಮಾಧ್ಯಮಗಳು/ಸಂಸ್ಥೆಗಳು ನಡೆಸಿದ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದ್ದು, ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದೆ ಎಂದು ಹೇಳಿವೆ. [ಬಿಜೆಪಿಗೆ ಮತ ಹಾಕಿದರೆ ಮಕ್ಕಳಿಗೆ ಡೆಂಗ್ಯೂ]
ಎರಡು ವರ್ಷದಿಂದ ದೆಹಲಿಯಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷಕ್ಕೆ ಮತದಾರರು ನೀಡುವ ಪ್ರೊಗ್ರೆಸ್ ರಿಪೋರ್ಟ್ ಎಂದೇ ಹೇಳಲಾಗುವ ಎಂಸಿಡಿ (ಮುನ್ಸಿಪಲ್ ಕಾರ್ಪೋರೇಶನ್ ಆಪ್ ದೆಹಲಿ) ಚುನಾವಣೆಯಲ್ಲಿ, ಆಮ್ ಆದ್ಮಿ ಪಕ್ಷ ನೆಲಕಚ್ಚಲಿದೆ ಎನ್ನುತ್ತದೆ ಎಕ್ಸಿಟ್ ಪೋಲ್.
ಮತಗಟ್ಟೆ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಜೊತೆ ಸೇರಿ ಅಧಿಕಾರಕ್ಕೇರುವ ಕನಸು ಕಾಣುತ್ತಿದ್ದ ಆಮ್ ಆದ್ಮಿ ಪಕ್ಷಕ್ಕೆ ಮುಖಭಂಗವಾಗಲಿದೆ. ಸಮೀಕ್ಷೆಯ ಪ್ರಕಾರ ಯಾರಿಗೆ ಎಷ್ಟು ಸ್ಥಾನ ಸಿಗಬಹುದು ಮತ್ತು ಪ್ರಮುಖ ಕೆಲವು ವಿದ್ಯಮಾನಗಳು?

ತಾಂತ್ರಿಕ ತೊಂದರೆಯಿಂದಾಗಿ 18 ಇವಿಎಂ ಬದಲು
ದೆಹಲಿಯಲ್ಲಿ ಭಾನುವಾರ ಚುನಾವಣೆ ಆರಂಭವಾದ ನಂತರ ಹದಿನೆಂಟು ಇವಿಎಂ (ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್) ಬದಲಾಯಿಸಲಾಗಿದೆ. ತಾಂತ್ರಿಕ ತೊಂದರೆಯಿಂದಾಗಿ ಇವಿಎಂ ಬದಲಾಗಿಸಲಾಗಿದೆ ಎಂದು ಚುನಾವಣಾ ಅಯೋಗ ಸ್ಪಷ್ಟ್ ಪಡಿಸಿತ್ತು.

ಬಿಜೆಪಿಗೆ ಮತಹಾಕಿದರೆ ಡೆಂಗ್ಯೂ,
ಡೆಂಗ್ಯೂ, ಚಿಕನ್ ಗುನ್ಯಾ ಮುಕ್ತ ದೆಹಲಿಗಾಗಿ ಆಮ್ ಆದ್ಮಿ ಪಕ್ಷಕ್ಕೆ ಮತನೀಡಿ ಎಂದು ಕುಟುಂಬ ಸಮೇತ ಮತದಾನ ಮಾಡಿಬಂದ ನಂತರ ಕೇಜ್ರಿವಾಲ್ ಹೇಳಿದ್ದಾರೆ. ಬಿಜೆಪಿಗೆ ಮತ ಚಲಾಯಿಸಿದರೆ ನಿಮ್ಮ ಕುಟುಂಬದ ಮಕ್ಕಳಿಗೆ ಡೆಂಗ್ಯು, ಚಿಕನ್ ಗುನ್ಯಾ ಬರಲು ನೀವೇ ಕಾರಣರಾದಂತೆ ಎಂದು ಕೇಜ್ರಿವಾಲ್ ಹೇಳಿದ್ದರು.

ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿಗೆ ಭರ್ಜರಿ ವಿಜಯ
ಎರಡು ಮತಗಟ್ಟೆ ಸಮೀಕ್ಷೆಯ ಫಲಿತಾಂಶ.
ಒಟ್ಟು ಸ್ಥಾನಗಳು - 272
ಇಂಡಿಯಾ ಟುಡೇ - ಏಕ್ಸಿಸ್
ಬಿಜೆಪಿ : 202-220
ಆಪ್ : 23-35
ಕಾಂಗ್ರೆಸ್ : 19-31
ಸಿವೋಟರ್ - ಎಬಿಪಿ
ಬಿಜೆಪಿ : 218
ಆಪ್ : 24
ಕಾಂಗ್ರೆಸ್ : 22

ಆಮ್ ಆದ್ಮಿ ಪಕ್ಷಕ್ಕೆ ಮಹತ್ವದ ದೆಹಲಿ ಚುನಾವಣೆ
ಗೋವಾ ಮತ್ತು ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬರದ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆ ನಿರ್ಣಾಯಕವಾಗಿದೆ. ಇತ್ತೀಚೆಗೆ ನಡೆದ ರಾಜೌರಿ ಅಸೆಂಬ್ಲಿ ಉಪಚುನಾವಣೆಯಲ್ಲೂಆಪ್ ಪರಾಭವಗೊಂಡಿತ್ತು.

ಜಾಗರೂಕತೆಯಿಂದ ಕಾರ್ಯ ನಿರ್ವಹಿಸಿದ ಬಿಜೆಪಿ
ದೇಶದಲ್ಲಿ ನಡೆದ ಇತರ ಅಸೆಂಬ್ಲಿ ಚುನಾವಣೆಯಂತೇ, ದೆಹಲಿ ಚುನಾವಣೆಯನ್ನೂ ಬಿಜೆಪಿ ಅತ್ಯಂತ ಜಾಗರೂಕತೆಯಿಂದ ನಿರ್ವಹಿಸಿತ್ತು. ಅಮಿತ್ ಶಾ, ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಪ್ರಚಾರದಲ್ಲಿ ತೊಡಗಿದ್ದರು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications