ಲೈಂಗಿಕ ಕಿರುಕುಳ ಆರೋಪ : ರಾಷ್ಟ್ರೀಯ ದಿನಪತ್ರಿಕೆ ಸಂಪಾದಕ ರಾಜೀನಾಮೆ
ನವದೆಹಲಿ, ಅಕ್ಟೋಬರ್ 08: ಪ್ರಮುಖ ರಾಷ್ಟ್ರೀಯ ದೈನಿಕ ಹಿಂದೂಸ್ತಾನ್ ಟೈಮ್ಸ್ ನ ರಾಜಕೀಯ ವಿಭಾಗದ ಸಂಪಾದಕ, ಮುಖ್ಯ ಬ್ಯೂರೋ ಪ್ರಶಾಂತ್ ಝಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಶಾಂತ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿತ್ತು.
ಮಾಜಿ ಉದ್ಯೋಗಿಯೊಬ್ಬರು ತಮ್ಮಿಬ್ಬರ ನಡುವೆ ನಡೆದ ವಾಟ್ಸಾಪ್ ಸಂಭಾಷಣೆಗಳ ಸ್ಕ್ರೀನ್ ಶಾಟ್ ಗಳನ್ನು ಟ್ವೀಟ್ ಮಾಡಿದ್ದರು. ಟೈಮ್ಸ್ ಆಫ್ ಇಂಡಿಯಾದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಪ್ರಕರಣದ ನಂತರ ಈ ಪ್ರಕರಣ ಬೆಳಕಿಗೆ ಬಂದಿತ್ತು.
ಆರೋಪ ಕೇಳಿ ಬಂದ ನಂತರ ಪ್ರಶಾಂತ್ ಅವರನ್ನು ಪ್ರಮುಖ ಹುದ್ದೆಯಿಂದ ಕೆಳಗಿಳಿಸಿ, ಸಾಮಾನ್ಯ ವರದಿಗಾರನ ಸ್ಥಾನ ನೀಡಲಾಗಿದೆ. ಸುಕುಮಾರ್ ಅವರು ಸದ್ಯ ಎಡಿಟರ್ ಇನ್ ಛೀಫ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಹೇಳಿದೆ.

'How The BJP Wins' and 'Battles of The New Republic: A Contemporary History of Nepal'. ಎಂಬ ಕೃತಿಗಳನ್ನು ಕೂಡಾ ಪ್ರಶಾಂತ್ ರಚಿಸಿದ್ದಾರೆ.
2017ರಲ್ಲಿ ಸಂತ್ರಸ್ತ ಪತ್ರಕರ್ತೆ ಹಾಗೂ ಪ್ರಶಾಂತ್ ನಡುವೆ ವಾಟ್ಸಾಪ್ ಚಾಟ್ ನಲ್ಲಿ ನಡೆದ ಸಂಭಾಷಣೆಗಳ ಸ್ಕ್ರೀನ್ ಶಾಟ್ ಟ್ವೀಟ್ ಮಾಡಲಾಗಿದೆ. ನಾನು ಈ ಸಂಭಾಷಣೆ ನಡೆಸಿದಾಗ ಹಿಂದೂಸ್ತಾನ್ ಟೈಮ್ಸ್ ನ ಉದ್ಯೋಗಿಯಾಗಿರಲಿಲ್ಲ. ಹಾಗಾಗಿ ಇಂಟರ್ನಲ್ ಕಂಪ್ಲೈಟ್ಸ್ ಕಮಿಟಿ (ಲೈಂಗಿಕ ಕಿರುಕುಳ ಪ್ರಕರಣಗಳನ್ನು ವಿಚಾರಣೆ ನಡೆಸುವ ಆಂತರಿಕ ಸಮಿತಿ) ಗೆ ದೂರು ಸಲ್ಲಿಸಿರಲಿಲ್ಲ ಎಂದಿದ್ದಾರೆ.
ಇನ್ನೊಂದೆಡೆ, ಎಲ್ಲರನ್ನು ಹಾಸ್ಯಮಾಡುತ್ತಿದ್ದ ಅಲ್ ಇಂಡಿಯಾ ಬ್ಯಾಕ್ ಚೊಡ್ ಚಾನೆಲ್ ನವರು ತಮ್ಮ ತಂಡದಿಂದ ಸ್ಥಾಪಕ ಸದಸ್ಯ ತನ್ಮಯ್ ಭಟ್ ಹಾಗೂ ಗುರ್ ಸಿಮ್ರಾನ್ ಖಂಬಾ ಅವರು ಹೊರ ನಡೆದಿದ್ದಾರೆ ಎಂದು ಪ್ರಕಟಿಸಿದೆ.
ಮಾಧ್ಯಮ ಲೋಕದಲ್ಲಿ ತಲ್ಲಣ: ಹೈದರಾಬಾದಿನ ಟೈಮ್ಸ್ ಆಫ್ ಇಂಡಿಯಾ ಎಡಿಟರ್ ಕೆಆರ್ ಶ್ರೀನಿವಾಸನ್ ವಿರುದ್ಧ ಪತ್ರಕರ್ತೆ ಸಂಧ್ಯಾ ಮೆನನ್ ಏಳು ಮಂದಿ ಮಹಿಳೆಯರು ಆರೋಪಿಸಿದ್ದಾರೆ.
ನಾನಾ ಪಾಟೇಕರ್, ಚಿತ್ರಕರ್ಮಿ ವಿಕಾಸ್ ಬೆಹ್ಲ್, ಲೇಖಕ ಚೇತನ್ ಭಗತ್, ಕಾಮಿಕ್ ಉತ್ಸವ್ ಚಕ್ರವರ್ತಿ, ನಟ ರಜತ್ ಕಪೂರ್ ಅವರಿಗೆ #metoo ಅಭಿಯಾನದ ಬಿಸಿ ತಟ್ಟಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications