ಲೈಂಗಿಕ ಕಿರುಕುಳ ಆರೋಪ : ರಾಷ್ಟ್ರೀಯ ದಿನಪತ್ರಿಕೆ ಸಂಪಾದಕ ರಾಜೀನಾಮೆ
ನವದೆಹಲಿ, ಅಕ್ಟೋಬರ್ 08: ಪ್ರಮುಖ ರಾಷ್ಟ್ರೀಯ ದೈನಿಕ ಹಿಂದೂಸ್ತಾನ್ ಟೈಮ್ಸ್ ನ ರಾಜಕೀಯ ವಿಭಾಗದ ಸಂಪಾದಕ, ಮುಖ್ಯ ಬ್ಯೂರೋ ಪ್ರಶಾಂತ್ ಝಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಶಾಂತ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿತ್ತು.
ಮಾಜಿ ಉದ್ಯೋಗಿಯೊಬ್ಬರು ತಮ್ಮಿಬ್ಬರ ನಡುವೆ ನಡೆದ ವಾಟ್ಸಾಪ್ ಸಂಭಾಷಣೆಗಳ ಸ್ಕ್ರೀನ್ ಶಾಟ್ ಗಳನ್ನು ಟ್ವೀಟ್ ಮಾಡಿದ್ದರು. ಟೈಮ್ಸ್ ಆಫ್ ಇಂಡಿಯಾದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಪ್ರಕರಣದ ನಂತರ ಈ ಪ್ರಕರಣ ಬೆಳಕಿಗೆ ಬಂದಿತ್ತು.
ಆರೋಪ ಕೇಳಿ ಬಂದ ನಂತರ ಪ್ರಶಾಂತ್ ಅವರನ್ನು ಪ್ರಮುಖ ಹುದ್ದೆಯಿಂದ ಕೆಳಗಿಳಿಸಿ, ಸಾಮಾನ್ಯ ವರದಿಗಾರನ ಸ್ಥಾನ ನೀಡಲಾಗಿದೆ. ಸುಕುಮಾರ್ ಅವರು ಸದ್ಯ ಎಡಿಟರ್ ಇನ್ ಛೀಫ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಹೇಳಿದೆ.

'How The BJP Wins' and 'Battles of The New Republic: A Contemporary History of Nepal'. ಎಂಬ ಕೃತಿಗಳನ್ನು ಕೂಡಾ ಪ್ರಶಾಂತ್ ರಚಿಸಿದ್ದಾರೆ.
2017ರಲ್ಲಿ ಸಂತ್ರಸ್ತ ಪತ್ರಕರ್ತೆ ಹಾಗೂ ಪ್ರಶಾಂತ್ ನಡುವೆ ವಾಟ್ಸಾಪ್ ಚಾಟ್ ನಲ್ಲಿ ನಡೆದ ಸಂಭಾಷಣೆಗಳ ಸ್ಕ್ರೀನ್ ಶಾಟ್ ಟ್ವೀಟ್ ಮಾಡಲಾಗಿದೆ. ನಾನು ಈ ಸಂಭಾಷಣೆ ನಡೆಸಿದಾಗ ಹಿಂದೂಸ್ತಾನ್ ಟೈಮ್ಸ್ ನ ಉದ್ಯೋಗಿಯಾಗಿರಲಿಲ್ಲ. ಹಾಗಾಗಿ ಇಂಟರ್ನಲ್ ಕಂಪ್ಲೈಟ್ಸ್ ಕಮಿಟಿ (ಲೈಂಗಿಕ ಕಿರುಕುಳ ಪ್ರಕರಣಗಳನ್ನು ವಿಚಾರಣೆ ನಡೆಸುವ ಆಂತರಿಕ ಸಮಿತಿ) ಗೆ ದೂರು ಸಲ್ಲಿಸಿರಲಿಲ್ಲ ಎಂದಿದ್ದಾರೆ.
ಇನ್ನೊಂದೆಡೆ, ಎಲ್ಲರನ್ನು ಹಾಸ್ಯಮಾಡುತ್ತಿದ್ದ ಅಲ್ ಇಂಡಿಯಾ ಬ್ಯಾಕ್ ಚೊಡ್ ಚಾನೆಲ್ ನವರು ತಮ್ಮ ತಂಡದಿಂದ ಸ್ಥಾಪಕ ಸದಸ್ಯ ತನ್ಮಯ್ ಭಟ್ ಹಾಗೂ ಗುರ್ ಸಿಮ್ರಾನ್ ಖಂಬಾ ಅವರು ಹೊರ ನಡೆದಿದ್ದಾರೆ ಎಂದು ಪ್ರಕಟಿಸಿದೆ.
ಮಾಧ್ಯಮ ಲೋಕದಲ್ಲಿ ತಲ್ಲಣ: ಹೈದರಾಬಾದಿನ ಟೈಮ್ಸ್ ಆಫ್ ಇಂಡಿಯಾ ಎಡಿಟರ್ ಕೆಆರ್ ಶ್ರೀನಿವಾಸನ್ ವಿರುದ್ಧ ಪತ್ರಕರ್ತೆ ಸಂಧ್ಯಾ ಮೆನನ್ ಏಳು ಮಂದಿ ಮಹಿಳೆಯರು ಆರೋಪಿಸಿದ್ದಾರೆ.
ನಾನಾ ಪಾಟೇಕರ್, ಚಿತ್ರಕರ್ಮಿ ವಿಕಾಸ್ ಬೆಹ್ಲ್, ಲೇಖಕ ಚೇತನ್ ಭಗತ್, ಕಾಮಿಕ್ ಉತ್ಸವ್ ಚಕ್ರವರ್ತಿ, ನಟ ರಜತ್ ಕಪೂರ್ ಅವರಿಗೆ #metoo ಅಭಿಯಾನದ ಬಿಸಿ ತಟ್ಟಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications