ಡೆನ್ಮಾರ್ಕ್ಗೆ ತೆರಳಲು ಕೇಜ್ರಿವಾಲ್ಗೆ ಅನುಮತಿ ನಿರಾಕರಿಸಿದ ಕೇಂದ್ರ
ನವದೆಹಲಿ, ಅಕ್ಟೋಬರ್ 8: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಅ.9ರಿಂದ ಪ್ರಾರಂಭವಾಗಲಿರುವ ಸಿ40 ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಡೆನ್ಮಾರ್ಕ್ನ ಕೋಪನ್ಹೆಗಾನ್ಗೆ ತೆರಳಲು ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ.
ಕೇಜ್ರಿವಾಲ್ ಅವರಿಗೆ ಡೆನ್ಮಾರ್ಕ್ ಪ್ರವಾಸಕ್ಕೆ ಅನುಮತಿ ನೀಡಲು ವಿದೇಶಾಂಗ ಸಚಿವಾಲಯ ನಿರಾಕರಿಸಿದೆ. ಆದರೆ ಅನುಮತಿ ನಿರಾಕರಣೆಗೆ ಇದುವರೆಗೂ ಕಾರಣ ನೀಡಿಲ್ಲ.
ಕೇಜ್ರಿವಾಲ್ ಅವರು ಸಮ್ಮೇಳನದಲ್ಲಿ ಇಂಗಾಲದ ವಿಸರ್ಜನೆ ಕುರಿತಾದ ಚರ್ಚೆಯಲ್ಲಿ ಪಾಲ್ಗೊಂಡು ಪ್ರಮುಖ ಭಾಷಣ ಮಾಡಬೇಕಿತ್ತು. ಈಗ ಅವರ ಪ್ರವಾಸಕ್ಕೆ ಸಚಿವಾಲಯ ಅನುಮತಿ ನೀಡದೆ ಇರುವುದರಿಂದ ಅ. 9-12ರವರೆಗೆ ನಡೆಯಲಿರುವ ಸಮ್ಮೇಳನದಲ್ಲಿ ಅವರು ಪಾಲ್ಗೊಳ್ಳುವುದಿಲ್ಲ.

ಸಮ್ಮೇಳನದಲ್ಲಿ ಕೇಜ್ರಿವಾಲ್ ಅವರು ನ್ಯೂಯಾರ್ಕ್, ಲಂಡನ್, ಲಾಸ್ ಏಂಜಲಿಸ್, ಬರ್ಲಿನ್ ನಗರಗಳ ಮೇಯರ್ಗಳೊಂದಿಗೆ ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚಿಸುವ ಸಾಧ್ಯತೆ ಇತ್ತು. ಜತೆಗೆ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಪ್ರಸ್ತಾಪಿಸುವ ನಿರೀಕ್ಷೆಯಿತ್ತು.
ಶಿಷ್ಟಾಚಾರದಂತೆ ಕೇಜ್ರಿವಾಲ್ ಅವರು ವಿದೇಶಾಂಗ ಸಚಿವಾಲಯದಿಂದ ಅನುಮತಿ ಕೋರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications