ಪಾಕಿಸ್ತಾನದ ಯುದ್ಧ ವಿಮಾನ ಪತನ ಖಚಿತ: ವಿದೇಶಾಂಗ ಸಚಿವಾಲಯ
ಪಾಕಿಸ್ತಾನದ ಎಲ್ಲಾ ವೈಮಾನಿಕ ದಾಳಿ ಪ್ರಯತ್ನಗಳನ್ನು ಭಾರತೀಯ ವಾಯುಸೇನೆ ವಿಫಲಗೊಳಿಸಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರರು ಬುಧವಾರ ಮಧ್ಯಾಹ್ನ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರರಾದ ರವೀಶ್ ಕುಮಾರ್ ಹಾಗೂ ಏರ್ ವೈಸ್ ಮಾರ್ಷಲ್ ಆರ್ ಜಿಕೆ ಕಪೂರ್ ಅವರು ಉಪಸ್ಥಿತರಿದ್ದರು.

ಫೆಬ್ರವರಿ 14 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಆದಿಲ್ ದಾರ್ ಎಂಬ ಆತ್ಮಾಹುತಿ ದಾಳಿಕೋರ ಕಾರ್ ಬಾಂಬ್ ಸ್ಫೋಟಿಸಿ 44 ಯೋಧರ ಬಲಿದಾನಕ್ಕೆ ಕಾರಣವಾಗಿದ್ದ. ಅದರ ಪ್ರತೀಕಾರ ಎಂಬಂತೆ ಭಾರತದ ವಾಯುಸೇನೆಯು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ ನೆಲೆ ಮೇಲೆ ದಾಳಿ ನಡೆಸಿ, ನಾಶ ಪಡಿಸಿತ್ತು.

ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ನಡೆಸಿದ ವಿಧ್ವಂಸಕ ಕೃತ್ಯಕ್ಕೆ ಪ್ರತೀಕಾರವಾಗಿ ಜೈಷ್ ಎ ಮೊಹಮ್ಮದ್ ಸಂಘಟನೆಯ ನೆಲೆ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ಸಾಕ್ಷ್ಯಗಳ ಆಧಾರ ಮೇಲೆ ನಾವು ವೈಮಾನಿಕ ದಾಳಿ ನಡೆಸಿದ್ದೇವೆ. ಬುಧವಾರದಂದು ಪಾಕಿಸ್ತಾನದ ಒಂದು ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ. ವೈಮಾನಿಕ ಘರ್ಷಣೆಯಲ್ಲಿ ಪಾಕಿಸ್ತಾನ ಯುದ್ಧ ವಿಮಾನವನ್ನು ಭಾರತದ ವಾಯುಸೇನೆಯ ಮಿಗ್ 21 ಬೈಸನ್ ಹೊಡೆದು ಹಾಕಿದ್ದು, ಪಾಕಿಸ್ತಾನದ ನೆಲದಲ್ಲಿ ಉರುಳಿದ್ದು ಖಚಿತವಾಗಿದೆ.
#WATCH Raveesh Kumar, MEA: One Pakistan Air Force fighter aircraft was shot down by Indian Air Force. In this engagement, we have lost one MiG 21. Pilot is missing in action. Pakistan claims he is in their custody. We are ascertaining the facts. pic.twitter.com/Bm0nVChuzF
— ANI (@ANI) February 27, 2019
ಈ ಸಂದರ್ಭದಲ್ಲಿ ನಮ್ಮ ಒಂದು ಮಿಗ್ 21 ಯುದ್ಧ ವಿಮಾನ ಪತನಗೊಂಡಿದ್ದು, ಪೈಲಟ್ ನಾಪತ್ತೆಯಾಗಿದ್ದಾರೆ. ಆದರೆ, ಪಾಕಿಸ್ತಾನವು ಪೈಲಟ್ ತಮ್ಮ ವಶದಲ್ಲಿದ್ದಾರೆ ಎಂದು ಹೇಳಿಕೊಳ್ಳುತ್ತಿದೆ.ಆದರೆ, ಈ ಬಗ್ಗೆ ನಮಗೆ ಅಧಿಕೃತವಾಗಿ ಸಂದೇಶ ಕಳಿಸಿಲ್ಲ. ಈ ಬಗ್ಗೆ ಪರಿಶೀಲನೆ ಜಾರಿಯಲ್ಲಿದೆ ಎಂದು ರವೀಶ್ ಕುಮಾರ್ ಹೇಳಿದರು.
ಐಎಎಫ್ ಪೈಲಟ್ ಈಗ ಪಾಕಿಸ್ತಾನದ ವಶದಲ್ಲಿರುವುದರ ಬಗ್ಗೆ ಅಧಿಕೃತವಾಗಿ ಮಾಹಿತಿ ಸಿಕ್ಕ ಬಳಿಕ ಭಾರತ ಯಾವ ರೀತಿ ರಾಜತಾಂತ್ರಿಕ ನಡೆ ಇಡಲಿದೆ ಕಾದುನೋಡಬೇಕಿದೆ. ವಿಶ್ವಸಂಸ್ಥೆಗೆ ಈ ಬಗ್ಗೆ ತಿಳಿಸಿ, ಪೈಲಟ್ ಬಿಡುಗಡೆಗೆ ಮನವಿ ಸಲ್ಲಿಸಬಹುದು ಎಂದು ರಕ್ಷಣಾ ತಂತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications