ಕಲಾಂಗೆ ನಮನ ಸಲ್ಲಿಸಿದ 96ರ ಹರೆಯದ ಮಾರ್ಷಲ್ ಗೊಂದು ಸಲಾಂ
ನವದೆಹಲಿ, ಜುಲೈ 28: ಡಾ. ಎಪಿಜೆ ಅಬ್ದುಲ್ ಕಲಾಂ ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಮೇಘಾಲಯದಿಂದ ಪಾರ್ಥೀವ ಶರೀರ ದೆಹಲಿಯ ಪಾಲಂ ವಿಮಾನ ನಿಲ್ದಾಣ ತಲುಪಿದೆ, ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಆದರೆ, ವಾಯುಸೇನೆಯ ಮಾರ್ಷಲ್ ಅರ್ಜನ್ ಸಿಂಗ್ ಅವರು ಕಲಾಂ ಅವರಿಗೆ ಅಂತಿಮ ನಮನ ಸಲ್ಲಿಸಿದ ರೀತಿ ಇಡೀ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ.
ವಾಯುಸೇನೆಯ ಪರಮೋಚ್ಚ ಅಧಿಕಾರ ಫೀಲ್ಡ್ ಮಾರ್ಷಲ್ ಹುದ್ದೆಗೆ ಸಮಾನಾಂತರ ಫೈವ್ ಸ್ಟಾರ್ ಶ್ರೇಯಾಂಕ ಹೊಂದಿರುವ ವಾಯುಸೇನೆಯ ಮಾರ್ಷಲ್ ಅರ್ಜನ್ ಸಿಂಗ್ ಅವರು ಅಬ್ದುಲ್ ಕಲಾಂ ಅವರ ಪಾರ್ಥೀವ ಶರೀರಕ್ಕೆ ಎದ್ದು ನಮಿಸಿದ್ದು ಎಲ್ಲರ ಗಮನ ಸೆಳೆಯಿತು.

96 ವರ್ಷ ವಯಸ್ಸಿನ ಪಂಜಾಬಿನ ಈ ಯೋಧ ವಯೋ ಸಹಜ ಅನಾರೋಗ್ಯದಿಂದ ವ್ಹೀಲ್ ಕುರ್ಚಿಯಲ್ಲೇ ಕಾಲದೂಡುತ್ತಿದ್ದಾರೆ. ಆದರೆ, ದೇಶದ ಹೆಮ್ಮೆಯ ಪುತ್ರ ಅಬ್ದುಲ್ ಕಲಾಂ ಅವರಿಗೆ ಕುಳಿತುಕೊಂಡು ನಮನ ಸಲ್ಲಿಸುವುದು ಸರಿಯಲ್ಲ ಎಂದು ನಿರ್ಧರಿಸಿದ ಮಾರ್ಷಲ್ ಅರ್ಜನ್ ಸಿಂಗ್ ಅವರು ಕುರ್ಚಿಯಿಂದ ಎದ್ದು ಕಲಾಂ ಅವರ ಪಾರ್ಥೀವ ಶರೀರಕ್ಕೆ ಹೂಗುಚ್ಛ ಇಟ್ಟು ಅಂತಿಮ ಸೆಲ್ಯೂಟ್ ಹೊಡೆದಿದ್ದಾರೆ.[ಸ್ಫೂರ್ತಿ ತುಂಬುವ ಡಾ.ಕಲಾಂ ಸ್ಫೂರ್ತಿ ಹೇಳಿಕೆಗಳು]
Marshal of the Indian Air Force Arjan Singh pays his last respects to late Dr.A.P.J Abdul Kalam. pic.twitter.com/nsgvlwiu7E
— ANI (@ANI_news) July 28, 2015 ಬ್ರಿಟಿಷ್ ಇಂಡಿಯಾದ ಪಂಜಾಬಿನಲ್ಲಿ 1919ರ ಏಪ್ರಿಲ್ 15ರಂದು ಜನಿಸಿದ ಸಿಂಗ್ ಅವರು ವಾಯುಸೇನೆಯ ನಂ.1 ಸ್ಕ್ವಾರ್ಡನ್ ಮುನ್ನಡೆಸಿದ್ದರು. 1944ರಲ್ಲಿ ಅರಕಾನ್ ಅಭಿಯಾನದ ಮುಂದಾಳತ್ವ ವಹಿಸಿದ್ದರು. ಇಂದು ಅರ್ಜನ್ ಸಿಂಗ್ ಅವರು ಇಟ್ಟ ನಡೆ ದೇಶದ ಹಲವರಿಗೆ ಸ್ಪೂರ್ತಿಯಾಗಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications