ಬದುಕಿದ್ದಾರೋ, ಇಲ್ಲವೋ ಮೊದಲು ಅವರನ್ನು ಹೊರತನ್ನಿ! ಸುಪ್ರೀಂ ಖಡಕ್ ಆದೇಶ
ನವದೆಹಲಿ, ಜನವರಿ 03: ಮೇಘಾಲಯದ ಕಲ್ಲಿದ್ದಲು ಗಣಿಯೊಂದರಲ್ಲಿ ಸಿಲುಕಿಕೊಂಡ, ಮೂರು ವಾರವಾದರೂ ಪತ್ತೆಯಾಗದ 15 ಕಾರ್ಮಿಕರ ಬಗ್ಗೆ ಸುಪ್ರೀಂ ಕೋರ್ಟ್ ಸಂತಾಪ ವ್ಯಕ್ತಪಡಿಸಿದ್ದು, ಅವರ ರಕ್ಷಣೆಯ ಬಗ್ಗೆ ಮೇಘಾಲಯ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ.
"ಅವರು ಬದುಕಿದ್ದಾರೋ, ಇಲ್ಲವೋ ಗೊತ್ತಿಲ್ಲ. ಏನಾದರಾಗಲಿ, ಮೊದಲು ಅವರನ್ನು ಹೊರತರುವ ಕೆಲಸ ಮಾಡಿ. ಅವರು ಬದುಕಿರಲಿ ಎಂದು ನಾವು ದೇವರಲ್ಲಿ ಬೇಡುತ್ತೇವೆ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯಲ್ಲಿ ಡಿ.12 ರಂದು 15 ಕಾರ್ಮಿಕರು ಗಣಿಯೊಳಗೆ ಸಿಲುಕಿ ನಂತರ ನಾಪತ್ತೆಯಾಗಿದ್ದರು. 370 ಅಡಿ ಆಳದ ಗಣಿಯಲ್ಲಿ ಸಿಲುಕಿರುವ ಕಾರ್ಮಿಕರ ಪತ್ತೆಗೆ ಇದುವರೆಗೂ ಸಾಧ್ಯವಿರುವ ಎಲ್ಲಾ ಪ್ರಯತ್ನ ಮಾಡಲಾಗಿದ್ದರೂ, ಅವರ ಕುರುಹು ಸಿಕ್ಕಿಲ್ಲ. ರಕ್ಷಣಾ ಸಿಬ್ಬಂದಿಗಳಿಗೆ ಮೂರು ಹೆಲ್ಮೇಟ್ ಗಳು ಸಿಕ್ಕಿದ್ದು ಬಿಟ್ಟರೆ ಯಾವ ಸುಳಿವೂ ಸಿಕ್ಕಿಲ್ಲ. ನೌಕಾಪಡೆಯ ಅನುಭವಿ ಮುಳುಗುತಜ್ಞರು ಸಹ ಈ ಗಣಿಯ ಆಳ ತಲುಪಿ ಶೋಧ ನಡೆಸಿದ್ದಾರೆ. ಗಣಿಯಲ್ಲಿ ನೀರು ತುಂಬಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.

ಆದರೆ ಇದುವರೆಗೂ ಕಾರ್ಮಿಕರ ಪತ್ತೆಯಾಗದಿರುವುದು ಆತಂಕ ಮೂಡಿಸಿದ್ದು, ಸುಪ್ರೀಂ ಕೋರ್ಟಿನ ಖಡಕ್ ಆದೇಶದಿಂದ ಮೇಘಾಲಯ ಸರ್ಕಾರಕ್ಕೆ ತೀವ್ರ ಮುಖಭಂಗವಾದಂತಾಗಿದ್ದು, ಕಾರ್ಮಿಕರನ್ನು ಪತ್ತೆಹಚ್ಚುವುದಕ್ಕೆ ಮತ್ತಷ್ಟು ಒತ್ತಡ ಸೃಷ್ಟಿಯಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications