ರಾಕೇಶ್ ಅಸ್ತಾನಾ ದುಬೈನಲ್ಲಿ ನನಗೆ ಬೆದರಿಕೆ ಹಾಕಿದ್ದರು ಎಂದ ಮೈಖೇಲ್
ನವದೆಹಲಿ, ಮಾರ್ಚ್ 12: ಅಗಾಸ್ಟಾವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಅವ್ಯವಹಾರದಲ್ಲಿ ಮಧ್ಯವರ್ತಿಯಾಗಿದ್ದ ಎಂದು ಆರೋಪಿಸಲಾದ ಕ್ರಿಶ್ಚಿಯನ್ ಮೈಖೇಲ್ ಮಂಗಳವಾರ ದೆಹಲಿ ಹೈ ಕೋರ್ಟ್ ನಲ್ಲಿ ಸಿಬಿಐನ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ವಿರುದ್ಧ ಮಾತನಾಡಿದ್ದಾನೆ.
ದುಬೈನಲ್ಲಿ ನನ್ನನ್ನು ಭೇಟಿಯಾದ ಅಸ್ತಾನಾ, ವಿಚಾರಣೆ ವೇಳೆ ತನಿಖಾ ಸಂಸ್ಥೆಗೆ ಪೂರಕವಾಗಿ ನಡೆದುಕೊಳ್ಳದಿದ್ದರೆ ಜೈಲಿನೊಳಗೆ ನನ್ನ ಬದುಕನ್ನು ನರಕ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಅದೇ ಈಗ ಆಗುತ್ತಿದೆ. ಜೈಲಿನಲ್ಲಿ ನನ್ನ ಕೊಠಡಿ ಪಕ್ಕದಲ್ಲೇ ಭೂಗತ ಪಾತಕಿ ಚೋಟಾ ರಾಜನ್ ಇದ್ದಾನೆ. ಹಲವಾರು ಮಂದಿಯನ್ನು ಕೊಂದವರ ಜತೆಗೆ ನನ್ನನ್ನು ಇಲ್ಲಿ ಇರಿಸಿದ್ದಾರೆ. ನಾನು ಮಾಡಿದ ತಪ್ಪೇನು ಎಂದು ಅರ್ಥವಾಗುತ್ತಿಲ್ಲ ಎಂದು ಮೈಖೇಲ್ ಹೇಳಿದ್ದಾನೆ.
ಹದಿನಾರು-ಹದಿನೇಳು ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರ ಜತೆ ನನ್ನನ್ನು ಜೈಲಿನಲ್ಲಿ ಇರಿಸಿದ್ದಾರೆ ಎಂದು ಮೈಖೇಲ್ ಕೋರ್ಟ್ ಗೆ ಹೇಳಿದ್ದಾನೆ. ಮೈಖೇಲ್ ನನ್ನು ದೆಹಲಿಯ ತಿಹಾರ್ ಜೈಲಿನ ಒಳಭಾಗ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ವಿಶೇಷ ನ್ಯಾ.ಅರವಿಂದ್ ಕುಮಾರ್ ಅನುಮತಿ ನೀಡಿದ್ದಾರೆ.

ಜಾರಿ ನಿರ್ದೇಶನಾಲಯವು ಬುಧವಾರ ಹಾಗೂ ಗುರುವಾರ ಆತನನ್ನು ಪ್ರಶ್ನೆ ಮಾಡಲಿದೆ. ಆ ಸಂದರ್ಭದಲ್ಲಿ ಜೈಲು ಅಧಿಕಾರಿಗಳು ಇರುತ್ತಾರೆ. ಈ ಮಧ್ಯೆ ಮೈಖೇಲ್ ಪರ ವಕೀಲರಿಗೆ ಬೆಳಗ್ಗೆ ಹಾಗೂ ಸಂಜೆ ತಲಾ ಅರ್ಧ ಗಂಟೆ ಭೇಟಿ ಮಾಡಲು ಅನುಮತಿ ಸಿಕ್ಕಿದೆ.
ಜೈಲಿನೊಳಗೆ ತನಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಮೈಖೇಲ್ ಕೋರ್ಟ್ ಗೆ ಹೇಳಿದ್ದಾನೆ. ಗುರುವಾರದೊಳಗೆ ಸಿಸಿಟಿವಿ ಫೂಟೇಜ್ ಹಾಗೂ ವರದಿ ನೀಡುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ಕೋರ್ಟ್ ಸೂಚಿಸಿದೆ. ಅದರ ಆಧಾರದಲ್ಲಿ ಹೆಚ್ಚಿನ ಭದ್ರತೆ ಇರುವ ಕಡೆಗೆ ಆತನನ್ನು ಸ್ಥಳಾಂತರಿಸಲಾಗುತ್ತದೆ.
ಕಳೆದ ವರ್ಷ ಡಿಸೆಂಬರ್ ನಲ್ಲಿ ದುಬೈನಲ್ಲಿ ಕ್ರಿಶ್ಚಿಯನ್ ಮೈಖೇಲ್ ನನ್ನು ಜಾರಿ ನಿರ್ದೇಶನಾಲಯವು ಬಂಧಿಸಿತ್ತು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications